ಸಿರಿಧಾನ್ಯ ಉತ್ಪಾದನೆ | 4ನೇ ಸ್ಥಾನದಿಂದ ಮೊದಲ ಸ್ಥಾನಕ್ಕೆ ಕೊಂಡೊಯ್ಯಲು ಸಂಕಲ್ಪ: ಕೃಷಿ ಸಚಿವ ಚಲುವರಾಯಸ್ವಾಮಿ

Date:

“ಸ್ಥಳೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿರಿಧಾನ್ಯಗಳ ಬೇಡಿಕೆ ಹಾಗೂ ಬಳಕೆಯನ್ನು ಹೆಚ್ಚಿಸಿ ಬೆಳೆಗಾರರಿಗೆ ಹಾಗೂ ಗ್ರಾಹಕರಿಗೆ ಅನುಕೂಲ ಮಾಡುವುದೇ ಈ ಸಿರಿಧಾನ್ಯ ರಫ್ತಿನ ಮೂಲ ಉದ್ದೇಶ” ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳದ ಪೂರ್ವಭಾವಿಯಾಗಿ ಸಿರಿಧಾನ್ಯ ಮತ್ತು ಅದರ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆ ಹಾಗು ರಫ್ತುದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಸಿರಿಧಾನ್ಯವನ್ನು ಇಡೀ ವಿಶ್ವವೇ ಮೆಚ್ಚುವಂತೆ ಮಾಡಿದೆ” ಎಂದರು.

“ರಾಜ್ಯದಲ್ಲಿ ವಿಶೇಷವಾಗಿ ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಕೊಪ್ಪಳ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಬೆಳೆದ ಸಿರಿಧಾನ್ಯಗಳನ್ನು ರಫ್ತು ಮಾಡಲಾಗುತ್ತಿದೆ. ಸಿರಿಧಾನ್ಯಗಳ ಉತ್ಪಾದನೆಯಲ್ಲಿ ದೇಶದಲ್ಲಿ ನಾಲ್ಕನೇ ಸ್ಥಾನದಲ್ಲಿರುವ ರಾಜ್ಯವನ್ನು ಪ್ರಥಮ ಸ್ಥಾನಕ್ಕೆ ತರಲು ಸರಕಾರ ಸಂಕಲ್ಪ ಮಾಡಿದೆ. ಅದಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

krishi

“ಸಿರಿಧಾನ್ಯ ಬೇಡಿಕೆಯಲ್ಲಿರುವ ರಾಗಿ, ಸಾಮೆ, ಉದ್ದು, ನವಣೆ ಮುಂತಾದ ಸಿರಿಧಾನ್ಯಗಳನ್ನು ಮೊದಲು ಯಥೇಚ್ಛವಾಗಿ ಬೆಳೆಯಲಾಗುತ್ತಿತ್ತು. ಇಂದಿನ ಆಧುನಿಕ ಜೀವನದಲ್ಲಿ ಜನ ಸಾವಯವ ಹಾಗೂ ಸಿರಿಧಾನ್ಯಗಳ ಉತ್ಪನ್ನಗಳಿಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ” ಎಂದು ಸಚಿವರು ತಿಳಿಸಿದರು.

“ಸಾವಯವ ಹಾಗೂ ಸಿರಿಧಾನ್ಯಗಳ ಬಳಕೆಯು ಆರೋಗ್ಯಕ್ಕೆ ಹೆಚ್ಚು ಉಪಯುಕ್ತವಾಗಿದ್ದು ಇವುಗಳ ಉತ್ಪಾದನೆಯನ್ನು ಹೆಚ್ಚಿಸಲು ಹೆಚ್ಚು ಒತ್ತು ನೀಡಬೇಕಾಗಿದೆ. ಸಿರಿಧಾನ್ಯಗಳ ಬಳಕೆ ಹಾಗೂ ಉತ್ಪಾದನೆ ಕುರಿತಂತೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಕಾರ್ಯವಾಗಬೇಕಾಗಿದೆ. ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆದ ಉತ್ಪನ್ನಗಳಿಗೆ ಜಗತ್ತಿನಾದ್ಯಂತ ಹೆಚ್ಚಿನ ಬೇಡಿಕೆಯಿದೆ. ಸಿರಿಧಾನ್ಯ ಹಾಗೂ ಸಾವಯವ ಕೃಷಿ ಪದ್ಧತಿ, ಮಾರುಕಟ್ಟೆ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆಯಲು ಮೇಳ ಸಹಕಾರಿಯಾಗಲಿದೆ” ಎಂದು ಸಚಿವ ಎನ್. ಚಲುವರಾಯಸ್ವಾಮಿ ಅಭಿಪ್ರಾಯಿಸಿದರು.

ಇದನ್ನು ಓದಿದ್ದೀರಾ? ಜನವರಿ 5 ರಿಂದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ

“ರೈತರು ತಮ್ಮ ಕೃಷಿ ಪದ್ಧತಿಯಲ್ಲಿ ಸಾವಯವ ಹಾಗೂ ಸಿರಿಧಾನ್ಯಗಳ ಉತ್ಪಾದನೆಗೆ ಹೆಚ್ಚು ಒತ್ತು ನೀಡಬೇಕು. ಈ ಕುರಿತು ಇಲಾಖೆಯಿಂದ ರೈತರಿಗೆ ಹೆಚ್ಚಿನ ಪ್ರೋತ್ಸಾಹ ಹಾಗೂ ತಿಳಿವಳಿಕೆ ನೀಡಲಾಗುವುದು” ಎಂದು ತಿಳಿಸಿದರು.

ಸಿರಿಧಾನ್ಯ ಮತ್ತು ಸಾವಯವ ಆಹಾರ ಪದ್ಧತಿಗಳ ಬಗ್ಗೆ ಕಾಲೇಜಿನ ವಿದ್ಯಾರ್ಥಿಗಳಲ್ಲೂ ಅರಿವು ಮೂಡಿರುವುದು ಸಂತೋಷದ ವಿಚಾರ. 20ನೇ ವಯಸ್ಸಿನಿಂದಲೇ ಸಿರಿ ಧಾನ್ಯವನ್ನು ಉಪಯೋಗಿಸುವುದರಿಂದ ಆರೋಗ್ಯದ ಬಗ್ಗೆ ಇನ್ನು ಹೆಚ್ಚಿನ ಕಾಳಜಿ ವಹಿಸಬಹುದು ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು.

ಕೃಷಿ ಇಲಾಖೆಯ ಕಾರ್ಯದರ್ಶಿ ಅನ್ಬುಕುಮಾರ್, ಆಯುಕ್ತ ವೈ.ಎಸ್.ಪಾಟೀಲ್, ಆಹಾರ ಸಂಸ್ಕರಣೆ ಮತ್ತು ಕಟಾವು ತಂತ್ರಜ್ಞಾನದ ವಿಶೇಷ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ನಿರ್ದೇಶಕ ಡಾ.ಜಿ.ಟಿ.ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಗಿರೀಶ್, ನಿರ್ದೇಶಕ ಶ್ರೀನಿವಾಸ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...