ದೇವದಾರಿ ಉಕ್ಕು ಗಣಿಗಾರಿಕೆ | ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ – ಪ್ರಕೃತಿ ಮೇಲಿನ ಅತ್ಯಾಚಾರ: ಎಸ್‌.ಆರ್‌ ಹಿರೇಮಠ್

Date:


ಬಳ್ಳಾರಿ
ಜಿಲ್ಲೆಯ ಸಂಡೂರು ತಾಲೂಕಿನ ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ ಕುಮಾರಸ್ವಾಮಿ ಸಮ್ಮತಿ ನೀಡಿದ್ದಾರೆ. ‘ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್‌’ಗೆ (ಕೆಐಒಸಿಎಲ್‌) ಅನುಮತಿ ನೀಡಿ ಕಡತಕ್ಕೆ ಸಹಿ ಹಾಕಿದ್ದಾರೆ. ಈ ಹಿಂದೆ, ತಾವೇ ವಿರೋಧಿಸಿದ್ದ ಗಣಿಗಾರಿಕೆಗೆ ಈಗ ಅವರೇ ಅನುಮೋದನೆ ನೀಡಿದ್ದಾರೆ.

ಕುಮಾರಸ್ವಾಮಿ ಅವರು ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಅವಕಾಶ ನೀಡಿರುವುದನ್ನು ಸಾಮಾಜಿಕ ಹೋರಾಟಗಾರ ಎಸ್‌.ಆರ್ ಹಿರೇಮಠ್ ಖಂಡಿಸಿದ್ದಾರೆ. ಈ ದಿನ.ಕಾಮ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸುವುದು ಪ್ರಕೃತಿ ಮೇಲಿನ ಅತ್ಯಾಚಾರ. ದೇವದಾರಿಯಲ್ಲಿ ಗಣಿಗಾರಿಕೆ ನಡೆಸುವ ಯೋಜನೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

“ಬಳ್ಳಾರಿ ಜಿಲ್ಲೆಯಲ್ಲಿ ಗಣಿಗಾರಿಕೆಗೆ ಕೇಂದ್ರ ಸರ್ಕಾರ ಅವಕಾಶ ನೀಡುತ್ತಿದೆ. ಸಂಡೂರು, ಬಳ್ಳಾರಿ, ಹೊಸಪೇಟೆ ತಾಲೂಕಿನ ಸಂಘಟನೆಗಳು ಗಣಿಗಾರಿಕೆಯನ್ನು ವಿರೋಧಿಸುತ್ತಿವೆ. ಈ ಹಿಂದೆ, 2008-2009ರಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಪಾರಾಕಾಷ್ಟೆ ತಲುಪಿದ್ದಾಗ, ‘ಸಮಾಜ ಪರಿವರ್ತನಾ’ ಸಂಘಟನೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಪಿಐಎಲ್‌ ಸಲ್ಲಿಸಿ, ನ್ಯಾಯಾಂಗ ಹೋರಾಟ ನಡೆಸಿತ್ತು. ಪರಿಣಾಮ, ಬಳ್ಳಾರಿಯನ್ನು ತಮ್ಮ ‘ರಿಪಬ್ಲಿಕ್’ ಮಾಡಿಕೊಂಡಿದ್ದ ಮೈನಿಂಗ್ ಮಾಫಿಯಾದ ಕಿಂಗ್‌ಪಿನ್ ಗಾಲಿ ಜನಾರ್ದನ ರೆಡ್ಡಿ, ಅವರ ಸಹೋದ್ಯೋಗಿ ಶಾಸಕ-ಸಚಿವರು ಹಾಗೂ ಎಂಟು ಮಂದಿ ಅಧಿಕಾರಗಳನ್ನು ಜೈಲಿಗೆ ಕಳಿಸಲಾಗಿತ್ತು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಂದಿನ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಮತ್ತು ಆಂಧ್ರಪ್ರದೇಶದ ರಾಜಶೇಖರ್ ರೆಡ್ಡಿ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರೆಡ್ಡಿ ಸಹೋದರರ ಕೈಜೋಡಿಸಿ, ಅಕ್ರಮ ಗಣಿಗಾರಿಕೆಗೆ ಅವಕಾಶ ಮಾಡಿಕೊಟ್ಟಿದ್ದರು. ಆ ಗಣಿಗಾರಿಕೆಯನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿತ್ತು” ಎಂದು ವಿವರಿಸಿದ್ದಾರೆ.

“ರೆಡ್ಡಿ ಸಹೋದರರ ಅಕ್ರಮ ಗಣಿಗಾರಿಕೆಯಿಂದ ನೊಂದಿದ್ದ, ದುರ್ಬಲರಾಗಿದ್ದ ಸಂತ್ರಸ್ತ ಬಡ ಜನರಿಗೆ ಶಿಕ್ಷಣ, ಆದಾಯ,  ಆರೋಗ್ಯ, ಶುದ್ಧ ಕುಡಿಯುವ ನೀರು ದೊರೆಯಬೇಕೆಂದು ಆಗ ನಾವು ಆಗ್ರಹಿಸಿದ್ದೆವು. ಆದರೆ, ಈಗ ಎನ್‌ಡಿಎ ಸರ್ಕಾರ ಅದೇ (ಬಳ್ಳಾರಿ) ಜಿಲ್ಲೆಯಲ್ಲಿ ಗಣಿಗಾರಿಕೆಗೆ ಅವಕಾಶ ನೀಡಲು ಮುಂದಾಗಿದೆ. ಇದು, ಜೈವಿಕ ವೈವಿಧ್ಯ ವಿರೋಧಿ, ಪರಿಸರ ವಿರೋಧಿ ನಡೆ. ಇದನ್ನು ಸರ್ಕಾರ ಕೈಬಿಡಬೇಕು. ಸರ್ಕಾರ ಕೂಡ ಪರಿಸರ ರಕ್ಷಣೆಯ ಕಾಳಜಿಯನ್ನು ಅರ್ಥ ಮಾಡಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು 388 ಹೆಕ್ಟೇರ್ ಅರಣ್ಯ ಭೂಮಿಯಲ್ಲಿ ಗಣಿಗಾರಿಕೆ ನಡೆಸಲು ‘ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್‌’ಗೆ (ಕೆಐಒಸಿಎಲ್‌) ಅವಕಾಶ ನೀಡಿದ್ದಾರೆ. ಅವರು ಅಧಿಕಾರಿಗಳ ಮಾತು ಕೇಳಿ, ದುಡುಕಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರು ತಮ್ಮ ನಿರ್ಧಾರವನ್ನು ಮರುಪರಿಶೀಲನೆ ಮಾಡಬೇಕು. ಸ್ಥಳಕ್ಕೆ ಭೇಟಿ ನೀಡಿ, ಅರಣ್ಯ ಪ್ರದೇಶವನ್ನು ಗಮನಿಸಿ, ತಮ್ಮ ನಿರ್ಧಾರವನ್ನು ಕೈಬಿಡಬೇಕು” ಎಂದು ಒತ್ತಾಯಿಸಿದ್ದಾರೆ.

ಮಾತ್ರವಲ್ಲದೆ, “ಬಳ್ಳಾರಿ ಜಿಲ್ಲೆಯ ಅರಣ್ಯ ಭಾಗದಲ್ಲಿ ಈಗಾಗಲೇ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಮತ್ತು ವಿಶ್ವೇಶ್ವರಯ್ಯ ಐರನ್ ಅಂಡ್ ಸ್ಟೀಲ್‌ ಗಣಿಗಾರಿಕೆ ನಡೆಸುತ್ತಿವೆ. ಆ ಗಣಿಗಾರಿಕೆಗಳನ್ನೂ ನಿಲ್ಲಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಗಣಿಗಾರಿಕೆ ನಡೆಯಬಾರದು ಎಂಬುದು ನಮ್ಮ ವಾದವಲ್ಲ. ಆದರೆ, ಅಕ್ರಮ ಗಣಿಗಾರಿಕೆಗಳು ಹಾಗೂ ಖಾಸಗಿಯವರಿಗೆ ಗಣಿಗಾರಿಕೆಗೆ ಕೊಡೋದು, ವಿನಾಶಕಾರಿ. ಗಣಿಗಾರಿಕೆಯು ಪ್ರಕೃತಿ, ನೈಸರ್ಗಿಕ ಸಂಪನ್ಮೂಲಗಳಿಗೆ ಮಾರಕವಾದದ್ದು. ಈ ಸಂಪನ್ಮೂಲಗಳನ್ನ ಅತಿ ಕಡಿಮೆ ಅವಶ್ಯಕತೆಗಳಿಗೆ ಬಳಸಬೇಕೇ ಹೊರತು, ಪರಿಸರವನ್ನೇ ಹಾಳು ಮಾಡುವ ಹಂತಕ್ಕೆ ಹೋಗಬಾರದು” ಎಂದು ಅವರು ತಿಳಿಸಿದ್ದಾರೆ.

“ಸುಪ್ರೀಂ ಕೋರ್ಟ್‌ ‘ಎ, ಬಿ, ಸಿ ಕೆಟಗರಿ’ಯಲ್ಲಿ ಗಣಿ ಪ್ರದೇಶವನ್ನು ವಿಂಗಡಿಸಬೇಕು ಅಂತ ಹೇಳಿದೆ. ಸಿ ಕೆಟಗರಿಯ ಪ್ರದೇಶಗಳನ್ನು ಮಾತ್ರ ಗಣಿಗಾರಿಕೆಗೆ ನೀಡಬೇಕು ಅಂತ ಹೇಳುತ್ತದೆ. ಹಾಗಾಗಿಯೇ, ಸಿ ಕೆಟಗರಿ ಪ್ರದೇಶವಾದ ತೋರಣಗಲ್ಲಿನಲ್ಲಿ ಉಕ್ಕು ಕಂಪನಿ ಗಣಿಗಾರಿಕೆ ನಡೆಸುತ್ತಿದೆ. ಅಂತಹ ಗಣಿ ಪ್ರದೇಶಗಳನ್ನು ಗಣಿಗಾರಿಕೆಗೆ ನೀಡಬೇಕೇ ಹೊರತು. ಅರಣ್ಯ ಪ್ರದೇಶವನ್ನು ಮೈನಿಂಗ್‌ಗೆ ನೀಡಬಾರದು” ಎಂದು ಎಸ್‌.ಆರ್ ಹಿರೇಮಠ್ ತಿಳಿಸಿದ್ದಾರೆ.

“ರೆಡ್ಡಿ ಸಹೋದರರು ನಡೆಸುತ್ತಿದ್ದ ಅಕ್ರಮ ಗಣಿಗಾರಿಕೆ ವಿರುದ್ಧ ಹೈಕೋರ್ಟ್‌ಗೆ ಹೋದಾಗ ನ್ಯಾಯಮೂರ್ತಿ ಶೈಲೇಂದ್ರ ಕುಮಾರ್, ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿದ್ದರು. ‘ಇಂತಹ ಅರಣ್ಯ ಪ್ರದೇಶವನ್ನು ಗಣಿಗಾರಿಕೆಗೆ ನೀಡುವುದು, ಪ್ರಕೃತಿಯ ಮೇಲಿನ ಅತ್ಯಾಚಾರ ಮಾಡಿದಂತೆ’ ಎಂದು ಹೇಳಿದ್ದರು. ಅದನ್ನ ನಾವು ನೆನಪಿನಲ್ಲಿಟ್ಟುಕೊಳ್ಳಬೇಕು. ಈಗ ಮತ್ತೆ, ನಾವು ಸುಪ್ರೀಂ ಕೋರ್ಟ್‌ಗೆ ಹೋಗುವಂತಹ ಪರಿಸ್ಥಿತಿಯನ್ನ ಸರ್ಕಾರ ಉಂಟುಮಾಡಬಾರದು. ನೈಸರ್ಗಿಕ ವಿಕೋಪಕ್ಕೆ ತುತ್ತಾಗುತ್ತಿರುವ ಇಂತಹ ಸಂದರ್ಭದಲ್ಲಿ ಸರ್ಕಾಋಗಳು ವಿವೇಚನೆಯಿಂದ ನಡೆದುಕೊಳ್ಳಬೇಕು. ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವುದನ್ನು ನಿಲ್ಲಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ವರದಿ ಓದಿದ್ದೀರಾ?: ದೇವದಾರಿ ಉಕ್ಕು ಗಣಿಗಾರಿಕೆ | ಆರು ವರ್ಷಗಳ ಹಿಂದೆ ವಿರೋಧ – ಇಂದು ಒಪ್ಪಿಗೆ; ಇದು ಕೇಂದ್ರ ಸಚಿವ ಎಚ್‌ಡಿಕೆ ವರಸೆ!

“2019ರ ಅಕ್ಟೋಬರ್ 10ರಂದು ‘ಡೆಪ್ಯುಟಿ ಕಂಜರ್ವೇಟರ್ ಆಫ್ ಫಾರೆಸ್ಟ್‌’-ಬಳ್ಳಾರಿ ಅಧಿಕಾರಿಗಳು ದೇವದಾರಿ ಅರಣ್ಯ ಪ್ರದೇಶದಲ್ಲಿ ಭಾರೀ ಪ್ರಮಾಣದ ಜೀವ ವೈವಿಧ್ಯವಿದೆ. ಇಲ್ಲಿ ಗಣಿಗಾರಿಕೆಗೆ ಅವಕಾಶ ನೀಡಬಾರದು ಅಂತ ಹೇಳಿದೆ. ಅದನ್ನೇ, ‘ಚೀಫ್ ಕಂಜರ್ವೇಟರ್‌ ಅಫ್ ಫಾರೆಸ್ಟ್‌’-ಬಳ್ಳಾರಿ ಕೂಡ ಒತ್ತಿ ಹೇಳಿದೆ. ಜೊತೆಗೆ, ಅರಣ್ಯಾಧಿಕಾರಿ ರಾಜೀವ್ ರಂಜನ್ ಕೂಡ ಗಣಿಗಾರಿಕೆಗೆ ಅವಕಾಶ ನೀಡಬಾರದು ಎಂಬುದನ್ನೇ ಪ್ರತಿಪಾದಿಸಿದ್ದಾರೆ. ಹೀಗಾಗಿ, ಜಿಲ್ಲೆಯಲ್ಲಿ ಗಣಿಗಾರಿಕೆಗೆ ಅವಕಾಶ ಕೊಡಬಾರದು” ಎಂದಿದ್ದಾರೆ.

“ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ನಡೆಯುತ್ತಿರುವ ಗಣಿಗಾರಿಕೆ ಬಗ್ಗೆ ಸಮಗ್ರ ವರದಿ ನೀಡಬೇಕೆಂದು 2019ರಲ್ಲಿ ಸುಪ್ರೀಂ ಕೋರ್ಟ್‌ ಹೇಳಿತ್ತು. ಇಂತಹ ಸಮಯದಲ್ಲಿ, ಮತ್ತೊಂದು ಗಣಿಗಾರಿಕೆಗೆ ಅವಕಾಶ ನೀಡುವುದು ಅನುಚಿತ ಮತ್ತು ಪರಿಸರ ವ್ಯವಸ್ಥೆಗೆ ಮಾಡುವ ಅನ್ಯಾಯ. ಸರ್ಕಾರಗಳು ತಮ್ಮ ನಿರ್ಧಾರಗಳನ್ನು ಹಿಂಪಡೆಯಬೇಕು. ಪರಿಸರವನ್ನು ರಕ್ಷಿಸಬೇಕು. ಮುಂದಿನ ಪೀಳಿಗೆಯನ್ನ ಗಮನದಲ್ಲಿಟ್ಟುಕೊಂಡು ನಾವು ಪರಿಸರವನ್ನು ರಕ್ಷಿಸಿಕೊಳ್ಳಬೇಕು. ಅದಕ್ಕಾಗಿ ಹೋರಾಟ ನಡೆಸಬೇಕು” ಎಂದು ಹಿರೇಮಠ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...