ಆರೋಗ್ಯ ವಿಮೆ ಮೇಲಿನ ಜಿಎಸ್‌ಟಿ ಮರು ಪರಿಶೀಲಿಸಲು ಪ್ರಧಾನಿ ಮೋದಿಗೆ ಪತ್ರ ಬರೆದ ಸಚಿವ ಗುಂಡೂರಾವ್

Date:

ಆರೋಗ್ಯ ವಿಮೆಯ ಮೇಲಿನ ಶೇ.18 ರಷ್ಟು ಜಿ.ಎಸ್.ಟಿಯನ್ನ ಮರು ಪರಿಶೀಲಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ.

ಈ ಕುರಿತು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ಸಚಿವರು, ಸೆಪ್ಟೆಂಬರ್ 9 ರಂದು ಸಭೆ ಸೇರಲಿರುವ GST ಕೌನ್ಸಿಲ್‌ಗೆ ಮಧ್ಯಮ ಮತ್ತು ಕಡಿಮೆ ಆದಾಯದ ಪಾಲಿಸಿದಾರರಿಗೆ ಆರೋಗ್ಯ ವಿಮೆಯ ಮೇಲಿನ 18% ತೆರಿಗೆಯನ್ನು ಮರು ಪರಿಶೀಲಿಸುವಂತೆ ಶಿಫಾರಸು ಮಾಡಲು ಮನವಿ ಮಾಡಿದ್ದಾರೆ.

ಆರೋಗ್ಯ ವಿಮೆ ಮೇಲೂ ಶೇ 18 ರಷ್ಟು ಜಿಎಸ್.ಟಿ ತೆರಿಗೆ ಹಾಕುವುದು ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ರಿದೆ. ಹೆಚ್ಚಿನ ತೆರಿಗೆಯಿಂದಾಗಿ ಹೆಲ್ತ್ ಇನ್ಸೂರೆನ್ಸ್ ಪ್ರೀಮಿಯಂ ದುಬಾರಿಯಾಗಿದ್ದು, ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಸಿಗುತ್ತಿಲ್ಲ. ಬಹುತೇಕ ಮಧ್ಯಮ ವರ್ಗದವರು ಇಂದು ಆರೋಗ್ಯ ವಿಮೆಗಳಿಂದ ದೂರವೇ ಉಳಿಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವೈದ್ಯಕೀಯ ತುರ್ತು ಪರಿಸ್ಥಿತಿಗಳ ಸಂದರ್ಭಗಳಲ್ಲಿ ಆರೋಗ್ಯ ವಿಮೆಯ ರಕ್ಷಣೆ ಸಿಗದೆ ಇಡೀ ಕುಟುಂಬ ವರ್ಗವೇ ಆರ್ಥಿಕ ಸಂಕಷ್ಟಕ್ಕೆ ಸಿಲುಕುವುದನ್ನ ನಾವು ಕಾಣುತ್ತಿದ್ದೇವೆ. ಸಾರ್ವತ್ರಿಕ ಆರೋಗ್ಯ ರಕ್ಷಣೆಗೆ ಸರ್ಕಾರಗಳು ಸತತ ಪ್ರಯತ್ನಗಳನ್ನ ಮುಂದುವರಿಸಿವೆ ಎಂದು ಹೇಳಿದ್ದಾರೆ.

“ದೇಶದಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ಬರುವ ಮೊದಲೇ ಕರ್ನಾಟಕದಲ್ಲಿ ನಾವು 2018 ರಲ್ಲೇ ಆರೋಗ್ಯ ಕರ್ನಾಟಕ ಯೋಜನೆಯನ್ನ ಜಾರಿಗೊಳಿಸಿದ್ದೆವು. ಕೇಂದ್ರ ಸರ್ಕಾರವು 2047 ರ ವೇಳೆಗೆ ಸಾರ್ವತ್ರಿಕ ವಿಮಾ ಕವರೇಜ್ ಗುರಿಯೊಂದಿಗೆ ರಾಷ್ಟ್ರವ್ಯಾಪಿ ಮಿಷನ್ ಪ್ರಾರಂಭಿಸಿದೆ. ಆದರೆ ಆರೋಗ್ಯ ವಿಮೆಯನ್ನು ಸಂಪೂರ್ಣವಾಗಿ ನಿರಾಕರಿಸುವಷ್ಟು ಹೆಚ್ಚಿನ ದರದಲ್ಲಿ ತೆರಿಗೆ ವಿಧಿಸುವುದು ವಿಪರ್ಯಾಸ ಎಂದು ಸಚಿವರು ಹೇಳಿದ್ದಾರೆ.‌

2017 ರಿಂದಲೂ ಆರೋಗ್ಯ ವಿಮೆಯ ಮೇಲೆ ಶೇ 18 ರಷ್ಟು ಜಿಎಸ್.ಟಿ ಹೇರಲಾಗಿದೆ. GST ಯ ಹೆಚ್ಚಿನ ದರವು ಪ್ರೀಮಿಯಂಗಳ ವೆಚ್ಚದ ಮೇಲೆ ನೇರ ಪರಿಣಾಮ ಬೀರುತ್ತದೆ. ಪರಿಣಾಮ ಆರೋಗ್ಯ ವಿಮೆಯು ಈಗ ಹೆಚ್ಚು ದುಬಾರಿಯಾಗಿದೆ. ಹೆಚ್ಚುತ್ತಿರುವ ವೆಚ್ಚವು ಆರ್ಥಿಕ ದುರ್ಬಲ ವರ್ಗಗಳ ಮೇಲೆ ವಿನಾಶಕಾರಿ ಪರಿಣಾಮವನ್ನು ಬೀರುತ್ತದೆ, ಅವರಿಗೆ ಪ್ರೀಮಿಯಂನಲ್ಲಿ ಸ್ವಲ್ಪ ಹೆಚ್ಚಳವಾದರೂ ಅದನ್ನು ಖರೀದಿಸಲು ಸಾಧ್ಯವಿಲ್ಲ. ಹೀಗಾಗಿ ಆರೋಗ್ಯ ವಿಮೆಗಳನ್ನ ಜನರು ತಿರಸ್ಕರಿಸುತ್ತಿದ್ದಾರೆ. ವಿಮಾ ರಕ್ಷಣೆಯಿಂದ ವಂಚಿತರಾಗುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಆರೋಗ್ಯ ವಿಚಾರಗಳಲ್ಲಿ ತೆರಿಗೆ ನೀತಿಗಳು ಜನಪರವಾಗಿರಬೇಕು.. ತೆರಿಗೆ ಪ್ರಮಾಣವನ್ನ ಕಡಿತಗೊಳಿಸುವುದರಿಂದ ಹೆಚ್ಚಿನ ಸಂಖ್ಯೆಯ ಜನರು ಆರೋಗ್ಯ ವಿಮೆಯ ರಕ್ಷಣೆ ಪಡೆಯುವಂತೆ ಪ್ರೋತ್ಸಾಹಿಸಬಹುದು. ಇದರಿಂದ ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗಗಳ ಆರ್ಥಿಕ ಸ್ಥಿತಿಯನ್ನು ಕಾಪಾಡಬಹುದಾಗಿದೆ.. 2047 ರ ವೇಳೆಗೆ ಯುನಿವರ್ಸಲ್ ಇನ್ಸೂರೆನ್ಸ್ ಎಂಬ ಆಶಯವನ್ನ ಸಾಧಿಸುವತ್ತ ಧನಾತ್ಮಕ ಹೆಜ್ಜೆ ಇಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...