ಕಲಬುರಗಿ, ಬೀದರ್ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರಗಳಾಗಿ ಘೋಷಿಸಿದ ಸಚಿವ ಈಶ್ವರ ಖಂಡ್ರೆ

Date:

  • ಪ್ರಸಕ್ತ ವರ್ಷ 5 ಕೋಟಿ ಸಸಿ ನೆಟ್ಟು ಪೋಷಿಸುವ ಗುರಿ ಹೊಂದಿರುವ ಅರಣ್ಯ ಇಲಾಖೆ
  • ಉಳಿದ ನಗರಗಳನ್ನೂ ಹಂತಹಂತವಾಗಿ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡಲಾಗುವುದು

ವಿಶ್ವ ಪರಿಸರ ದಿನದಂದು ಐದು ನಗರ ಅಥವಾ ಪಟ್ಟಣವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡುವುದಾಗಿ ಘೋಷಿಸಿದ್ದ ಅರಣ್ಯ, ಪರಿಸರ ಸಚಿವ ಈಶ್ವರ ಖಂಡ್ರೆ ಇಂದು ಆ ಐದು ನಗರಗಳ ಪೈಕಿ ಎರಡು ನಗರಗಳ ಹೆಸರು ಘೋಷಣೆ ಮಾಡಿದ್ದಾರೆ.

ಕಲಬುರಗಿ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ಜೂ. 5ರಂದು ಘೋಷಿಸಿದಂತೆ, ಈ ವರ್ಷ ಐದು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ, ಪಟ್ಟಣ ಮಾಡುವ ಸಂಕಲ್ಪ ಮಾಡಿದ್ದು, ಇದರಲ್ಲಿ ಕಲ್ಯಾಣ ಕರ್ನಾಟಕದ ಎರಡು ನಗರಗಳೂ ಸೇರಿವೆ ಎಂದು ತಿಳಿಸಿದರು.

ನಾನಕ್ ಝೀರಾ, ಬಂದೇ ನವಾಜ್ ದರ್ಗಾ, ಝರಣಿ ನರಸಿಂಹ ದೇವಾಲಯ, ಸಂತ ಪಾಲರ ಮೆಥಾಡಿಸ್ಟ್ ಚರ್ಚ್ ಇರುವ ಸರ್ವ ಜನಾಂಗದ ಶಾಂತಿಯ ತೋಟವಾದ ಬೀದರ್ ನಗರ, ಐತಿಹಾಸಿಕ ನಗರಿ ಕಲ್ಬುರ್ಗಿಯನ್ನು ಪ್ರಥಮ ಹಂತದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡಲಾಗುವುದು. ಹಂತ ಹಂತವಾಗಿ ಉಳಿದ ನಗರಗಳನ್ನೂ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ಲಾಸ್ಟಿಕ್ ನೀರಲ್ಲಿ ಕರಗುವುದಿಲ್ಲ. ಮಣ್ಣಲ್ಲಿ ಮಣ್ಣಾಗುವುದಿಲ್ಲ. ಜೈವಿಕವಾಗಿ ವಿಘಟನೆಯೂ ಆಗುವುದಿಲ್ಲ. ಭೂಮಿಯ ಒಡಲು ಸೇರಿ ವಿಷವಾಗುತ್ತಿದೆ. ಕಸದ ರಾಶಿಯಾಗಿ ದೊಡ್ಡ ಸಮಸ್ಯೆ ತರುತ್ತಿದೆ. ಏಕ ಬಳಕೆ ಪ್ಲಾಸ್ಟಿಕ್ ನಲ್ಲಿ ಮನೆಯ ಕಸ ಎಲ್ಲ ಗಂಟು ಕಟ್ಟಿ ಜನ ಹೊರಗೆ ಎಸೆಯುತ್ತಿದ್ದಾರೆ. ಇದರಿಂದ ಮಳೆ ನೀರು ಚರಂಡಿಗಳು ಕಟ್ಟಿಕೊಂಡು ರಸ್ತೆಯಲ್ಲಿ ಪ್ರವಾಹ ಸ್ಥಿತಿ ಉಂಟಾಗುತ್ತದೆ ಎಂದು ಹೇಳಿದರು.

ಪ್ಲಾಸ್ಟಿಕ್ ಕವರ್ ಗಳಲ್ಲಿ ಉಳಿದ ಅನ್ನ, ಕತ್ತರಿಸಿದ ತರಕಾರಿ ತುಂಬಿ ಎಸೆಯುವ ಕಾರಣ, ಅದನ್ನು ತಿನ್ನುವ ದನಕರುಗಳ ಹೊಟ್ಟೆಗೆ ಪ್ಲಾಸ್ಟಿಕ್ ಸೇರಿ ಸಾವಿಗೀಡಾಗುತ್ತಿವೆ. ಪ್ಲಾಸ್ಟಿಕ್ ಕಸದ ರಾಶಿಗೆ ಬೆಂಕಿ ಹಚ್ಚುವ ದುರಭ್ಯಾಸವೂ ಕೆಲವರಿಗಿದೆ. ಇದರಿಂದ ವಿಷಕಾರಿ ಹೊಗೆ ಪರಿಸರ ಸೇರಿ ಆಸ್ತಮಾ, ಉಸಿರಾಟದ ಸಮಸ್ಯೆ ಉಂಟಾಗುತ್ತಿದೆ. ಈ ತೀವ್ರತೆ ಅರಿತು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ ಕಲ್ಪನೆಯನ್ನು ಸಾಕಾರ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದರು.

ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರಗಳಲ್ಲಿ ಪ್ಲಾಸ್ಟಿಕ್ ಉತ್ಪಾದನೆ, ಬಳಕೆ, ಮಾರಾಟ, ದಾಸ್ತಾನು ಆಗದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾಡಳಿತದ ಸಹಕಾರದೊಂದಿಗೆ ಏಕ ಬಳಕೆ ಪ್ಲಾಸ್ಟಿಕ್ ಗೆ ಕಡಿವಾಣ ಹಾಕಲಾಗುವುದು ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರಾಗಿ ಖರೀದಿ ಕೇಂದ್ರದಲ್ಲಿ ಅವ್ಯವಹಾರ ಆರೋಪ; ಸಮಗ್ರ ತನಿಖೆಗೆ ಆದೇಶ

5 ಕೋಟಿ ಸಸಿ ನೆಡುವ ಅಭಿಯಾನ

ಪ್ರಸಕ್ತ ವರ್ಷ 5 ಕೋಟಿ ಸಸಿ ನೆಟ್ಟು ಪೋಷಿಸುವ ಮೂಲಕ ರಾಜ್ಯದಲ್ಲಿ ಹಸಿರು ವ್ಯಾಪ್ತಿಯ ಕ್ರಾಂತಿ ಮಾಡಲು ನಿರ್ಧರಿಸಿರುವ ಅರಣ್ಯ ಇಲಾಖೆ, ಜುಲೈ 1ರಿಂದ ಆರಂಭವಾದ ವನಮಹೋತ್ಸವದ ಪ್ರಥಮ 6 ದಿನಗಳಲ್ಲಿ 68 ಲಕ್ಷ ಸಸಿಗಳನ್ನು ನೆಟ್ಟಿದೆ ಎಂದು ತಿಳಿಸಿದರು.

ವನಮಹೋತ್ಸವದ ಸಂದರ್ಭದಲ್ಲಿ ನೆಟ್ಟಿರುವ ಎಲ್ಲ ಸಸಿಗಳೂ ಬೇರೂರಿ ಬೆಳೆದು ಹೆಮ್ಮರವಾಗುವುದನ್ನು ಖಾತ್ರಿಪಡಿಸಿಕೊಳ್ಳುವ ದೊಡ್ಡ ಸವಾಲು ಇದ್ದು, ಜಿಯೋ ಟ್ಯಾಗ್, ಆಡಿಟ್ ಮೂಲಕ ಇದನ್ನು ವ್ಯವಸ್ಥಿತವಾಗಿ ನಿಭಾಯಿಸಲಾಗುವುದು. ವರ್ಷವಿಡೀ ಗಿಡ ನೆಡುವ ಅಭಿಯಾನ ಮುಂದುವರಿಸಲಾಗುವುದು ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ ವಿಜಯನಗರ ಹೊರತು ಪಡಿಸಿ ಉಳಿದ ಐದು ಜಿಲ್ಲೆಗಳಲ್ಲಿ ಅರಣ್ಯ ವ್ಯಾಪ್ತಿ ಶೇ. 10ಕ್ಕಿ ಕಡಿಮೆ ಇದೆ. ಇಲ್ಲಿ ಹಸಿರು ವಲಯ ವ್ಯಾಪ್ತಿ ಹೆಚ್ಚಿಸಲು ಹೆಚ್ಚಿನ ಒತ್ತು ನೀಡಲಾಗಿದೆ. ಎತ್ತರದ ಗಿಡಗಳನ್ನು ಹಚ್ಚಿ, ಹಸಿರೀಕರಣ ಹೆಚ್ಚಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ತಿಪ್ಪಣ್ಣ ಕಮ್ಮಕ್ನೂರ್, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಜಗದೇವ ಗುತ್ತೇದಾರ್ ಹಾಗೂ ಇತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...