ಬೀದರ್‌ | ಬೇರೆಯವರು ಬೆಳೆಯಬಾರದೆಂದು ಸಚಿವ ಈಶ್ವರ ಖಂಡ್ರೆ ತನ್ನ ಮಗನಿಗೆ ಟಿಕೆಟ್ ಕೊಡಿಸಿದ್ರಾ : ಸಚಿವ ಭಗವಂತ ಖೂಬಾ

Date:

25-30 ವರ್ಷ ಪಕ್ಷದಲ್ಲಿ ದುಡಿದವರಿಗೆ ಕಾಂಗ್ರೆಸ್‌ನಲ್ಲಿ ಟಿಕೇಟ್ ನೀಡಿಲ್ಲ, ಯಾಕೆ ಕಾಂಗ್ರೆಸ್ ಪಕ್ಷದಲ್ಲಿ ನನ್ನನ್ನು ಎದುರಿಸಲು ಯಾರು ಮುಖಂಡರು ಇರಲಿಲ್ವಾ? ಅಥವಾ ಬೇರೆಯವರು ಬೆಳೆಯಬಾರದು ಎನ್ನುವ ಕಾರಣಕ್ಕೆ ಸಚಿವ ಈಶ್ವರ ಖಂಡ್ರೆ ತನ್ನ ಮಗನಿಗೆ ಟಿಕೆಟ್ ಕೊಡಿಸಿದ್ರಾ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಪ್ರಶ್ನಿಸಿದರು.

ಬಸವಕಲ್ಯಾಣದಲ್ಲಿ ಬಿಜೆಪಿ ಕಾರ್ಯಾಲಯದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, “ನಮ್ಮದು ಕಾರ್ಯಕರ್ತರ ಪಕ್ಷ, ಆದರೆ ಕಾಂಗ್ರೆಸ್ ಕುಟುಂಬದವರ ಪಕ್ಷವಾಗಿದೆ. ನಮ್ಮಲ್ಲಿ ಕಾರ್ಯಕರ್ತರು ನಾಯಕರಾಗುತ್ತಾರೆ, ಕಾಂಗ್ರೆಸ್‌ನಲ್ಲಿ ನಾಯಕರ ಮಕ್ಕಳು ಮಾತ್ರ ಬೆಳೆಯುತ್ತಾರೆ. ಕಾಂಗ್ರೆಸ್‌ ಕಾರ್ಯಕರ್ತರು ಕೇವಲ ಕೆಲಸಗಾರರಾಗಿ ದುಡಿಯುಬೇಕು” ಎಂದು ಹೇಳಿದರು.

“ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಸ್ವತಃ ಕಾಂಗ್ರೆಸ್ ಶಾಸಕರೇ ಬೇಸತ್ತಿದ್ದಾರೆ. ಕಳೆದ 9 ತಿಂಗಳಲ್ಲಿ ಬೀದರ್‌ ಜಿಲ್ಲೆಗೆ ರಾಜ್ಯದಿಂದ ನಯಾ ಪೈಸೆ ಅನುದಾನ ಬಂದಿಲ್ಲಾ, ಕಾಂಗ್ರೆಸ್ ಅಭಿವೃದ್ದಿ ಶೂನ್ಯವಾಗಿದೆ. ಕಳೆದ 10 ವರ್ಷಗಳಲ್ಲಿ ನಾನು ಮಾಡಿರುವ ಅಭಿವೃದ್ದಿ ಕಾರ್ಯಗಳು ಜನತೆಗೆ ತಿಳಿಸಬೇಕು. 3ನೇ ಬಾರಿಗೆ ನನಗೆ ಮತ್ತೊಮ್ಮೆ ಆಶೀರ್ವದಿಸಿ, ಮೋದಿ ಸರ್ಕಾರದಲ್ಲಿ ಸೇವೆ ಮಾಡಲು ಅವಕಾಶ ನೀಡಬೇಕು. ಈ ನಿಟ್ಟಿನಲ್ಲಿ ತಾವೇಲ್ಲರೂ ಕಾರ್ಯಪ್ರವರ್ತರಾಗಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸವಕಲ್ಯಾಣ ಶಾಸಕ ಶರಣು ಸಲಗರ ಮಾತನಾಡಿ, “ಕಳೆದ ಸಲದಂತೆ ಈ ಬಾರಿಯೂ ನಮ್ಮ ಪಕ್ಷಕ್ಕೆ ಬಸವಕಲ್ಯಾಣದಿಂದ ಅತೀ ಹೆಚ್ಚಿನ ಬಹುಮತ ಕೊಡುತ್ತೇವೆ. ಬಸವಕಲ್ಯಾಣ ಕ್ಷೇತ್ರದ ಜನರು ಎಂದಿಗೂ ಪ್ರಬುದ್ಧರು, ಅಭಿವೃದ್ದಿಪರ, ದೇಶದ ರಕ್ಷಣೆ ಮಾಡುವವರ ಪರ ನಿಲ್ಲುತ್ತಾರೆ. ಮೋದಿ ಸರ್ಕಾರ ಹಾಗೂ
ಕೇಂದ್ರ ಸಚಿವ ಖೂಬಾರವರ ಸಾಧನೆಗಳು ಹಳ್ಳಿ ಹಳ್ಳಿಗೂ ತೆರಳಿ ಜನರಿಗೆ ತಿಳಿಸಬೇಕು” ಎಂದರು.

ಸಂಸದ ಭಗವಂತ ಖೂಬಾರವರನ್ನು ಮತ್ತೊಮ್ಮೆ ಗೆಲ್ಲಿಸಿಕೊಂಡು ಬರುವ ಜವಬ್ದಾರಿ ನಮ್ಮೆಲ್ಲರದ್ದಾಗಿದೆ. ಇದನ್ನು ನಾವೆಲ್ಲರೂ ಸೇರಿ ಮಾಡೋಣ, ದೇಶಕ್ಕೆ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು ನಮ್ಮ ಜವಬ್ದಾರಿ ನಿಭಾಯಿಸೋಣ” ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಇದಕ್ಕೂ ಮುನ್ನ ಕೇಂದ್ರ ಸಚಿವ ಭಗವಂತ ಖೂಬಾ ಹಾಗೂ ಬಿಜೆಪಿ ಪಕ್ಷದ ಮುಖಂಡರು ಸೇರಿ, ಬಸವಕಲ್ಯಾಣ ನಗರದಲ್ಲಿ ವಿವಿಧ ದೇವಸ್ಥಾನಗಳಿಗೆ ತೆರಳಿ ದರ್ಶನ ಪಡೆದು, ತ್ರಿಪೂರಾಂತ ಗ್ರಾಮದ ಗುರು ಘನಲಿಂಗ ರುದ್ರಮುನಿ ಗವಿಮಠಕ್ಕೆ ಭೇಟಿ ನೀಡಿ ಡಾ.ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರ ಆಶೀರ್ವಾದ ಪಡೆದುಕೊಂಡರು. .

ಬಳಿಕ ಪುರುಷಕಟ್ಟೆಗೆ ತೆರಳಿ ದರ್ಶನವನ್ನು ಪಡೆದು ಮಾತನಾಡಿ, “ನ್ಯಾಯ ನೀತಿಗೆ ಹೆಸರಾಗಿದ್ದ ಪುರುಷಕಟ್ಟೆಯನ್ನು ಮುಂದಿನ ದಿನದಲ್ಲಿ ಹೆಚ್ಚಿನ ಅಭಿವೃದ್ದಿಗೊಳಿಸಿ, ಇದರ ಇತಿಹಾಸವನ್ನು ಜಗತ್ತಿಗೆ ತಿಳಿಸುವ ಕೆಲಸ ಮಾಡುತ್ತೇನೆ” ಎಂದು ಎಲ್ಲರಿಗೂ ವಿಶ್ವಾಸ ನೀಡಿದರು.

ಇದೇ ಸಂದರ್ಭದಲ್ಲಿ ಗಣ್ಯರಾದ ಬಸವೇಶ್ವರ ದೇವಸ್ಥಾನದ ಪಂಚಕಮೀಟಿ ಅಧ್ಯಕ್ಷರಾದ ಬಸವರಾಜ ಕೊರಕೆ, ಸೋಮಶೇಖರ ವಸ್ತ್ರದ, ಅಶೋಕ ಶಿಂಧೆ, ಸುಭಾಷ ಹೊಳ್ಕುಂಡೆ ಮುಂತಾದವರ ಮನೆಗೆ ಭೇಟಿ ನೀಡಿ, ತನ್ನ ಹತ್ತು ವರ್ಷಗಳ ಸಾಧನೆಗಳು ತಿಳಿಸಿ ಮತ್ತೊಮ್ಮೆ ಬೆಂಬಲಿಸುವಂತೆ ಕೋರಿದರು.

ಈ ಸುದ್ದಿ ಓದಿದ್ದೀರಾ? ಬ್ರಹ್ಮ ಬಂದರೂ ನಾಮಪತ್ರ ವಾಪಸ್ ಪಡೆಯಲ್ಲ, ಸ್ಪರ್ಧಿಸುವುದು ಖಚಿತ: ಕೆ ಎಸ್‌ ಈಶ್ವರಪ್ಪ

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಮರಾಠಾ ನಿಗಮದ ಮಾಜಿ ಅಧ್ಯಕ್ಷ ಎಮ್.ಜಿ. ಮುಳೆ, ಮಂಡಲ ಅಧ್ಯಕ್ಷ ಅಶೋಕ ವಕಾರೆ, ಅರವಿಂದ ಮುತ್ಯಾ ಸೇರಿದಂತೆ ಪ್ರಮುಖರಾದ ಕುಶಾಲ ಪಾಟೀಲ್ ಗಾದಗಿ, ಜ್ಞಾನೇಶ್ವರ ಪಾಟೀಲ್, ಪ್ರದೀಪ ಗಡವಂತಿ, ಅನಿಲ ಭೂಸಾರೆ, ಸುಧೀರ ಕಾಡಾದಿ, ಮಲ್ಲಿಕಾರ್ಜುನ ಕುಂಬಾರ, ರಾಜು ಮಂಠಾಳೆ, ಸೂರ್ಯಕಾಂತ ಚಿಲ್ಲಾಬಟ್ಟೆ, ಲುಂಬಿಣಿ ಗೌತಮ, ಮಹೇಶ್ವರ ಸ್ವಾಮಿ, ಜಗನ್ನಾಥ ಖೂಬಾ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...