ಮುಡಾ ಆರೋಪ | ಸಿದ್ದರಾಮಯ್ಯ ವಿರುದ್ದ ಕೇಂದ್ರ ಸರ್ಕಾರ ಪ್ರಾಯೋಜಿತ ಹುನ್ನಾರ : ಸಚಿವ ರಾಜಣ್ಣ

Date:

ಬಿಜೆಪಿಯವರು ಮುಡಾ ಆರೋಪ ಮಾಡಿ ಸಿದ್ದರಾಮಯ್ಯನವರ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದೆ. ಇದೊಂದು ಕೇಂದ್ರ ಸರ್ಕಾರದ ಯೋಜಿತ ಮತ್ತು ಪ್ರಯೋಜಿತ ಹುನ್ನಾರ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.

ತುಮಕೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಿ ಎಂ ಸಿದ್ದರಾಮಯ್ಯನವರ ಮೇಲೆ ಮಾಡುವ ಆರೋಪ ಇಡೀ ಅಹಿಂದ ವರ್ಗದ ಮೇಲೆ ಆರೋಪ‌ ಮಾಡಿದಂತೆ. ಹಾಗಾಗಿ ಬಿಜೆಪಿಯವರು ಪಾದಯಾತ್ರೆ ಮಾಡಿದರೆ ಪಕ್ಷತೀತವಾಗಿ ಅಹಿಂದ ಸಮುದಾಯದವರು ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು” ಎಂದರು.

“ಸಿದ್ದರಾಮಯ್ಯನವರು ಹಿಂದುಳಿದ ವರ್ಗದ ನಾಯಕ. ದೇವರಾಜ ಅರಸು ಬಳಿಕ ಉತ್ತಮ ಆಡಳಿತ ನೀಡುತ್ತಿರುವ ನಾಯಕ. ಹಿಂದುಳಿದ ವರ್ಗದವರು ಅಧಿಕಾರಕ್ಕೆ ಬಂದರೆ ಮುಂದುವರಿದವರು ದೌರ್ಜನ್ಯ ನಡೆಸುವಂತ ಕೆಲಸ ಮಾಡುತ್ತಾರೆ. ಸಿದ್ದರಾಮಯ್ಯನವರಿಗೆ ವಿರೋಧಿಸಿ ಪಾದಯಾತ್ರೆ ಮಾತನಾಡುತ್ತಿರುವುದು ಅಹಿಂದ ವರ್ಗದ ವಿರುದ್ದ ಮಾಡುತ್ತಿರುವ ಪಿತೂರಿ. ಹೀಗೆ ಮುಂದುವರಿದರೆ, ತುಮಕೂರು ಜಿಲ್ಲೆಯಲ್ಲಿ ಬೃಹತ್ ಹೋರಾಟ ಮಾಡುವ ಚಿಂತನೆ ಇದೆ. ಸುಳ್ಳನ್ನು ಸತ್ಯ ಎಂದು ನಿರೂಪಣೆ ಮಾಡುವುದೇ ಬಿಜೆಪಿ ಪಾದಯಾತ್ರೆಯ ಉದ್ದೇಶ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಡಾದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪ ಮಾಡುತ್ತಿರುವ ವಿರೋಧ ಪಕ್ಷದವರು ಬೆಂಗಳೂರಿನಲ್ಲಿದ್ದುಕೊಂಡು ಮಂಡ್ಯ, ಶ್ರೀರಂಗಪಟ್ಟಣ, ಮೈಸೂರಿನಲ್ಲಿ ವಾಸವಿದ್ದೇವೆ ಎಂದು ಸುಳ್ಳು ಹೇಳಿ ಮುಡಾದಿಂದ ನಿವೇಶನ ಪಡೆದಿದ್ದಾರೆ. ಪಡೆದಿರುವ ನಿವೇಶನಗಳನ್ನು ಮೊದಲು ಮೂಡಾಗೆ ಹಿಂದಿರುಗಿಸಿ ಮಾತನಾಡಲಿ” ಎಂದು ಸಚಿವ ರಾಜಣ್ಣ ಸವಾಲೆಸೆದರು.

“ಮುಡಾದಲ್ಲಿ ಹೆಚ್ಚಿನ ಫಲಾನುಭವಿಗಳು ವಿರೋಧ ಪಕ್ಷದಲ್ಲಿ ಇರುವವರೇ ಆಗಿದ್ದಾರೆ. ಬಿಜೆಪಿಯವರ ಮಾತು ‘ತಾನು ಕಳ್ಳ ಪರರ ನಂಬ’ ಎಂಬಂತಿದೆ. 17 ಮಾರ್ಚ್ 2011ರಂದು ವಿಧಾನ ಪರಿಷತ್‌ನಲ್ಲಿ ಯಡಿಯೂರಪ್ಪ‌ನವರು ಯಾರೆಲ್ಲ ನಿವೇಶನ ಖರೀದಿಸಿದ್ದಾರೆ, ಯಾರೆಲ್ಲಾ ಭಾಗಿಯಾಗಿದ್ದಾರೆ ಎಲ್ಲವನ್ನೂ ವಿಧಾನ ಪರಿಷತ್ ನಡವಳಿಕೆಯಲ್ಲಿ ತಿಳಿಸಿದ್ದಾರೆ. ಮುಡಾದಲ್ಲಿ ಹೆಚ್ಚು ಜನ ಫಲಾನುಭವಿಗಳು ವಿರೋಧ ಪಕ್ಷದವರೆ ಆಗಿರುವುದು ಇದರಿಂದ ಬಹಿರಂಗವಾಗಿದೆ” ಎಂದರು.

“ಬಿಜೆಪಿ-ಜೆಡಿಎಸ್‌ನವರು ನಕಲಿ ಮಾಹಿತಿ‌ ನೀಡಿ ಮುಡಾ ನಿವೇಶನ ಖರಿದೀಸಿದ್ದಾರೆ. ಮೊದಲು ಅವರು ಖರೀದಿಸಿರುವ ಸೈಟುಗಳನ್ನು ವಾಪಸ್ ನೀಡಬೇಕು” ಎಂದು ಸಚಿವ ಕೆ ಎನ್ ರಾಜಣ್ಣ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ವೇಣುಗೋಪಾಲ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...