ಯುಪಿ ಕಾನೂನು ಕರ್ನಾಟಕದಲ್ಲೂ ಬರಲಿ; ಯೋಗಿ ಆಡಳಿತ ಮೆಚ್ಚಿ ಮಾತನಾಡಿದ ಸಚಿವ ರಾಜಣ್ಣ!

Date:

ಸಚಿವ ಕೆ ಎನ್ ರಾಜಣ್ಣ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರ ಯುಪಿ ಮಾದರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, “ನಮ್ಮಲಿಯೂ ಅಂತಹದ್ದೇ ಕಾನೂನು ಬರಬೇಕು” ಎಂದಿದ್ದಾರೆ.

ತುಮಕೂರಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, “ನಮ್ಮ ಸಮಾಜದಲ್ಲಿ ಶಾಂತಿ ನೆಲೆಸಬೇಕಾದರೆ ಉತ್ತರ ಪ್ರದೇಶ ರೀತಿ ಕ್ರಮ ಅನಿವಾರ್ಯ. ಯಾರಾದರೂ ಪಾಕಿಸ್ತಾನಕ್ಕೆ ಬೆಂಬಲ ನೀಡಿದರೆ ಅವರನ್ನು ಗುಂಡಿಕ್ಕಿ ಕೊಲ್ಲಬೇಕು” ಎಂದು ಸಚಿವರು ಹೇಳಿದ್ದಾರೆ.

“ಯುಪಿಯಲ್ಲಿ ಯಾವುದೇ ಪ್ರತ್ಯೇಕ ಕಾನೂನು ಇಲ್ಲ. ಅಲ್ಲಿ ಸಮಾಜಘಾತುಕರ ಮನೆ ಧ್ವಂಸ ಮಾಡಲಾಗುತ್ತದೆ. ಇದರಿಂದ ಅಲ್ಲಿಯ ಜನರು ಈಗ ಭಯಪಟ್ಟಿದ್ದು, ಹಿಡಿತಕ್ಕೆ ಬರುತ್ತಿದ್ದಾರೆ. ನಮ್ಮಲ್ಲಿಯೂ ಇಂತಹದ್ದೆ ಕ್ರಮ ಅಗತ್ಯ” ಎಂದು ರಾಜಣ್ಣ ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೋಕಸಭೆ ಚುನಾವಣೆ ಬಗ್ಗೆ ಪ್ರತಿಕ್ರಿಯಿಸಿ, “ರಾಜ್ಯದಲ್ಲಿ ಕಾಂಗ್ರೆಸ್‌ 15-16 ಸೀಟು ಗೆಲ್ಲಬಹುದು. ಆದರೆ ಟಿಕೆಟ್ ನೀಡುವುದರ ಮೇಲೆ ಈ ಸಂಖ್ಯೆ ನಿರ್ಧಾರ ಆಗಲಿದೆ. ನಾನು ಉಸ್ತುವಾರಿ ಹೊಂದಿರುವ ಹಾಸನದಲ್ಲಿ ಶ್ರೇಯಸ್ ಪಟೇಲ್‌ಗೆ ಟಿಕೆಟ್ ಲಭಿಸಿದೆ. ನಾವು ಹಾಸನದಲ್ಲಿ ಖಂಡಿತವಾಗಿಯೂ ಗೆದ್ದೇ  ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಿಕೆಟ್ ಆಕಾಂಕ್ಷಿಗಳಿಗಿರುವ ಅಸಮಾಧಾನದ ಬಗ್ಗೆ ಮಾತನಾಡಿದ ಅವರು, “ಹಾಸನದಲ್ಲಿ ಪುಟ್ಟಸ್ವಾಮಿ ಗೌಡರಿಗೆ ಒಳ್ಳೆಯ ಹೆಸರಿದೆ. ಆದರೆ ಯಾವುದೇ ಚುನಾವಣೆ ಬಂದರೂ ಟಿಕೆಟ್ ಆಕಾಂಕ್ಷಿಗಳಿಗೆ ಅಸಮಾಧಾನ ಉಂಟಾಗವುದು ಸಾಮಾನ್ಯ. ಒಮ್ಮೆ ಸೀಟು ಘೋಷಣೆ ಮಾಡಿದ ಬಳಿಕ ಎಲ್ಲವೂ ಸರಿಯಾಗುತ್ತದೆ. ಹೈಕಮಾಂಡ್ ನಿರ್ಧಾರವನ್ನು ಎಲ್ಲರೂ ಒಪ್ಪಲೇಬೇಕು” ಎಂದರು.

ಚುನಾವಣೆ ಬಂದಾಗಲೇ ದರ ಇಳಿಕೆ

ಮಹಿಳಾ ದಿನಾಚರಣೆಯಂದು ಕೇಂದ್ರ ಮೋದಿ ಸರ್ಕಾರ ಸಿಲಿಂಡರ್ ಬೆಲೆ ₹100 ಇಳಿಕೆ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ರಾಜಣ್ಣ, “ಚುನಾವಣೆ ಹತ್ತಿರ ಬಂದಿರುವ ಕಾರಣ ಮೋದಿ ಸರ್ಕಾರ ಎಲ್‌ಪಿಜಿ ದರ ಕಡಿತ ಮಾಡಿದೆ. ನೂರು ರೂಪಾಯಿ ಇಳಿಸಿ ಚುನಾವಣೆ ಮುಗಿದ ಬಳಿಕ ಅಧಿಕಾರಕ್ಕೆ ಬಂದರೆ ಮತ್ತೆ ಇನ್ನೂರು ರೂಪಾಯಿ ಹೆಚ್ಚಳ ಮಾಡುತ್ತಾರೆ” ಎಂದು ದೂರಿದರು.

“ಚುನಾವಣೆ ಬಂದಾಗಲೇ ದರ ಇಳಿಕೆ ಮಾಡಿ, ಬಳಿಕ ಬೆಲೆ ಹೆಚ್ಚಿಸುವುದು ಮೋದಿ ತಂತ್ರವಲ್ಲ, ಇದು ಆರ್‌ಎಸ್‌ಎಸ್‌ನ ಒಂದು ತಂತ್ರ. ಆರ್‌ಎಸ್‌ಎಸ್‌ ಏನೂ ಹೇಳುತ್ತದೆಯೋ ಅದನ್ನೇ ಬಿಜೆಪಿ ಮಾಡುತ್ತದೆ” ಎಂದು ವಾಗ್ದಾಳಿ ನಡೆಸಿದರು.

“ಜನರು ಸಿದ್ಧರಾಮಯ್ಯರ ಗ್ಯಾರಂಟಿ ಯೋಜನೆಯನ್ನು ಮರೆಯಲು ಸಾಧ್ಯವಿಲ್ಲ. ಇದರಿಂದಾಗಿ ಗೆಲುವು ಖಂಡಿತ. ನಮ್ಮ ಒಂದನೇ ಪಟ್ಟಿ ಈಗಾಗಲೇ ಬಿಡುಗಡೆಯಾಗಿದೆ. ಆದರೆ ಬಿಜೆಪಿಯವರದ್ದು ಇನ್ನೂ ಪಟ್ಟಿಯೇ ಬಿಡುಗಡೆಯಾಗಿಲ್ಲ” ಎಂದು ಕುಟುಕಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...