ಮೂವರು ಡಿಸಿಎಂ ನೇಮಕ ಬಗ್ಗೆ ಹೈಕಮಾಂಡ್‌ಗೆ ಪತ್ರ ಬರೆಯುತ್ತೇವೆ: ಸಚಿವ ಕೆ ಎನ್ ರಾಜಣ್ಣ

Date:

  • ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಮೂವರು ಡಿಸಿಎಂ ಅಗತ್ಯವಿದೆ
  • ಸಂಸದ ಡಿ ಕೆ ಸುರೇಶ್ ವಿರುದ್ಧ ನಾನು ಹೇಳಿಕೆ ನೀಡುತ್ತಿಲ್ಲ: ರಾಜಣ್ಣ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅತಿ ಹೆಚ್ಚು ಸ್ಥಾನಗಳನ್ನು ರಾಜ್ಯದಲ್ಲಿ ಗೆಲ್ಲಬೇಕಿದೆ. ಇದಕ್ಕೆ ಎಲ್ಲ ಸಮುದಾಯಗಳ ಬೆಂಬಲ ಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡುವಂತೆ ಹೈಕಮಾಂಡ್‌ ಕೋರುತ್ತೇವೆ ಎಂದು ಸಚಿವ ಕೆ ಎನ್ ರಾಜಣ್ಣ ತಿಳಿಸಿದರು.

ತುಮಕೂರಿನಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಮೂವರು ಡಿಸಿಎಂಗಳಾದರೆ ಚುನಾವಣೆಯಲ್ಲಿ ಅನುಕೂಲವಾಗಲಿದೆ. ಹೀಗಾಗಿ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡುವಂತೆ ಕೋರಿ ಪಕ್ಷದ ಹೈಕಮಾಂಡ್‌ಗೆ ಪತ್ರ ಬರೆಯಲಾಗುವುದು” ಎಂದರು.

“ಪರಿಶಿಷ್ಟ ಜಾತಿ–ಪಂಗಡ, ಅಲ್ಪಸಂಖ್ಯಾತರು, ವೀರಶೈವ ಲಿಂಗಾಯತ ಸಮುದಾಯಕ್ಕೆ ತಲಾ ಒಂದು ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕೇಳಿಕೊಳ್ಳಲಾಗುವುದು. ಅಕ್ಟೋಬರ್ ಮೊದಲ ವಾರ ಹೈಕಮಾಂಡ್ ಭೇಟಿಯಾಗಿ ಈ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೂವರು ಡಿಸಿಎಂ ನೇಮಕ ವಿಚಾರಕ್ಕೆ ಸಹಮತ ವ್ಯಕ್ತಪಡಿಸುವ ಮುಖಂಡರನ್ನು ಒಳಗೊಂಡ ನಿಯೋಗವನ್ನು ಹೈಕಮಾಂಡ್ ಬಳಿಗೆ ಕರೆದುಕೊಂಡು ಹೋಗುವ ಬಗ್ಗೆ ಚಿಂತಿಸಲಾಗುವುದು” ಎಂದು ರಾಜಣ್ಣ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರಾವಳಿಯ ಜನ ಹಿಂದುತ್ವದ ನಶೆಯಿಂದ ಹೊರಬರಲು ಇದು ʼಚೈತ್ರಕಾಲʼ

ಬಿಜೆಪಿ ಶಾಸಕರಾದ ಎಸ್ ಟಿ ಸೋಮಶೇಖರ್, ಶಿವರಾಮ ಹೆಬ್ಬಾರ್ ಕಾಂಗ್ರೆಸ್‌ಗೆ ಬರುವ ಬಗ್ಗೆ ಮಾಹಿತಿ ಇದೆ. ಮತ್ತೊಬ್ಬ ಮುಖಂಡ ವಿ.ಸೋಮಣ್ಣ ಪಕ್ಷಕ್ಕೆ ಬಂದು ತುಮಕೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದು ಗಾಳಿ ಸುದ್ದಿ. ಜೆಡಿಎಸ್ ಮಾಜಿ ಶಾಸಕ ಡಿ ಸಿ ಗೌರಿಶಂಕರ್ ಪಕ್ಷಕ್ಕೆ ಬರುವ ಬಗ್ಗೆ ಮಾಹಿತಿ ಇಲ್ಲ” ಎಂದರು.

ಡಿ ಕೆ ಸುರೇಶ್ ವಿರುದ್ಧ ಹೇಳಿಕೆ ನೀಡುತ್ತಿಲ್ಲ

“ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹೋದರ ಸಂಸದ ಡಿ.ಕೆ.ಸುರೇಶ್ ವಿರುದ್ಧ ನಾನು ಹೇಳಿಕೆ ನೀಡುತ್ತಿಲ್ಲ. ಶಿವಕುಮಾರ್ ಈಗಾಗಲೇ ಉಪಮುಖ್ಯಮಂತ್ರಿ ಇದ್ದಾರೆ. ಇತರರಿಗೂ ಅವಕಾಶ ನೀಡಬೇಕು ಎಂಬುದು ನನ್ನ ವಾದವಾಗಿದೆ. ಅವಕಾಶ ಕೇಳುವುದರಲ್ಲಿ ತಪ್ಪೇನಿದೆ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...