ಪ್ರಕೃತಿ ವಿಕೋಪ | ಪರಿಹಾರ ಧನ ಹೆಚ್ಚಿಸಲು ಕೇಂದ್ರಕ್ಕೆ ಸಚಿವ ಕೃಷ್ಣ ಭೈರೇಗೌಡ ಒತ್ತಾಯ

Date:

ಬೆಳೆ ಹಾನಿ, ಬರಗಾಲ, ಅತಿವೃಷ್ಠಿ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳಿಗೆ ನೀಡುವ ಪರಿಹಾರ ಹಣ ಬಹಳಷ್ಟು ಕಡಿಮೆ ಪ್ರಮಾಣದಲ್ಲಿದ್ದು, ಅದನ್ನು ಪರಿಷ್ಕರಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಮನವಿ ಮಾಡಿದ್ದಾರೆ.

ವಿವಿಧ ರಾಜ್ಯಗಳ ವಿಪತ್ತು ನಿರ್ವಹಣಾ ಸಚಿವರ ಜೊತೆಗೆ ಅಮಿತ್ ಶಾ ನಡೆಸಿದ ಸಭೆಯಲ್ಲಿ ಕೃಷ್ಣ ಭೈರೇಗೌಡ ಭಾಗಿಯಾಗಿದ್ದರು. ಸಭೆಯಲ್ಲಿ ಮಾತನಾಡಿದ ಅವರು, “ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗುವ ಬರಗಾಲ, ಅತಿವೃಷ್ಠಿ, ಮಳೆ ಹಾನಿ, ಬೆಳೆ ಪರಿಹಾರ ಮೊತ್ತ ಕಡಿಮೆ ಇದೆ. ಆ ಮೊತ್ತವನ್ನು ಪರಿಷ್ಕರಣೆ ಮಾಡಿ, ಪರಿಹಾರ ಧನವನ್ನು ಹೆಚ್ಚಿಸಬೇಕು” ಎಂದು ಒತ್ತಾಯಿಸಿದರು.

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಮೂರು ಅಂಶಗಳನ್ನು ಸಭೆಯಲ್ಲಿ ಪ್ರಸ್ತಾಪಿಸಿದ್ದೇನೆ. ಮೊದಲನೇಯದಾಗಿ ಮಳೆ ಆಶ್ರಿತ ಪ್ರತಿ ಹೆಕ್ಟೇರ್ ಭೂಮಿಗೆ 8500 ರೂ.ಬೆಳೆ ಹಾನಿ ಪರಿಹಾರ ನೀಡಲಾಗುತ್ತಿದೆ ಅದನ್ನು 20000 ರೂ.ಗಳಿಗೆ ಹೆಚ್ಚಿಸಬೇಕು, ನೀರಾವರಿ ಭೂಮಿಗೆ 17000 ರೂ. ನೀಡಲಾಗುತ್ತಿದೆ ಇದನ್ನು 35000 ರೂ‌‌.ಗೆ ಹೆಚ್ಚಿಸಬೇಕು. ತೋಟಗಾರಿಕೆ ಬೆಳೆ ಹಾನಿಗೆ 22000 ರೂ.ಗಳಿಂದ 49000 ರೂ.ಗಳಿಗೆ ಹೆಚ್ಚಿಸಲು ಮನವಿ ಮಾಡಿದ್ದೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ಬಹಳಷ್ಟು ವರ್ಷಗಳಿಂದಿರುವ ಸಾರ್ವಜನಿಕರ ಒತ್ತಾಯವಾಗಿದೆ. ಸದ್ಯ ರಾಜ್ಯ ಸರ್ಕಾರ ಕೈಯಿಂದ ಹಣ ಹಾಕಿ ಹೆಚ್ಚಿನ ಪರಿಹಾರ ನೀಡಲಾಗುತ್ತಿದೆ. ಇದು ರಾಜ್ಯ ಸರ್ಕಾರಗಳಿಗೆ ಹೊರೆಯಾಗುತ್ತಿದೆ ಕರ್ನಾಟಕದ ಎಸ್‌ಡಿಆರ್‌ಎಫ್ ಗೆ ಈಗಾಗಲೇ ಅನುದಾನ ಕಡಿಮೆ ಬರುತ್ತಿದೆ. ಹೀಗಾಗಿ ಕೇಂದ್ರದಿಂದ ನೀಡುವ ಪರಿಹಾರ ಮೊತ್ತ ಹೆಚ್ಚಿಸಬೇಕು ಎಂದು ಆಗ್ರಹಿಸಲಾಗಿದೆ” ಎಂದು ಹೇಳಿದರು.

“ಅಕ್ಟೋಬರ್‌ನಲ್ಲಿ ಕೇಂದ್ರ ಸರ್ಕಾರ ಪಕೃತಿ ವಿಕೋಪ ಮಾರ್ಗಸೂಚಿಯಲ್ಲಿ ನಿಯಮ ಬದಲಾಯಿಸಿದೆ. ಸರ್ಕಾರ ನೀಡುವ ಪರಿಹಾರ ಮೊತ್ತದಲ್ಲಿ ವಿಮಾ ಕಂಪನಿಗಳು ವಿಮಾ ಮೊತ್ತವನ್ನು ಕಡಿತಗೊಳಿಸಿ ನೀಡುವ ನಿಯಮವನ್ನು ತೆಗೆದು ಹಾಕಬೇಕು, ಇದರಿಂದ ರೈತರು ಮತ್ತು ಸರ್ಕಾರಕ್ಕೆ ನಷ್ಟವಾಗುತ್ತಿದ್ದು ವಿಮಾ ಕಂಪನಿಗಳಿಗೆ ದೊಡ್ಡ ಲಾಭವಾಗುತ್ತಿದೆ ಇದನ್ನು ಬದಲಾಯಿಸಬೇಕು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...