ಬಿಜೆಪಿ ಅವಧಿಯಲ್ಲಿ ಬರ ಪರಿಹಾರದಲ್ಲೂ ಅವ್ಯವಹಾರ: ‘ತನಿಖೆಗೆ ಆದೇಶಿಸಿದ್ದೇವೆ’ ಎಂದ ಸಚಿವ ಕೃಷ್ಣ ಬೈರೇಗೌಡ

Date:

“ರೈತರಿಗೆ ಬರ ಹಾಗೂ ಮಳೆಹಾನಿ ಪರಿಹಾರ ತಲುಪಿಸುವ ವಿಚಾರದಲ್ಲೂ ಕೂಡ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರೀ ಅವ್ಯವಹಾರಗಳು ನಡೆದಿವೆ. ಜಮೀನು ಯಾರದ್ದೋ ಇದೆ, ಪರಿಹಾರ ಇನ್ಯಾರಿಗೋ ಹೋಗಿರುವ ಹಲವು ಪ್ರಕ್ರರಣಗಳು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ತನಿಖೆಗೆ ಆದೇಶ ಮಾಡಲಾಗಿದೆ” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಶುಕ್ರವಾರ ಜರುಗಿದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಉಪ ವಿಭಾಗಾಧಿಕಾರಿಗಳ ಜೊತೆಗಿನ ಮಾಸಿಕ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, “ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲೇ 6 ಕೋಟಿ ರೂ. ಪರಿಹಾರದ ಹಣದ ವಿತರಣೆಯಲ್ಲಿ ಅಕ್ರಮ ಎಸಲಾಗಿದೆ. ಹಣ ದುರ್ಬಳಕೆಯಾದವರ ಪಟ್ಟಿ ನನ್ನ ಬಳಿ ಇದೆ. ಹಾನಗಲ್, ಶಿಗ್ಗಾಂವ್ ನಲ್ಲೂ ಇಂತಹ ಪ್ರಕರಣಗಳು ಕಂಡುಬಂದಿದೆ” ಎಂದು ಮಾಹಿತಿ ನೀಡಿದರು.

“2022-21 ಹಾಗೂ 22-23 ನೇ ಸಾಲಿನಲ್ಲಿ ಹಾವೇರಿ ಜಿಲ್ಲೆಯ ಶಿಗ್ಗಾಂವ್ ಹಾಗೂ ಹಾನಗಲ್ ನಲ್ಲಿ ವ್ಯಾಪಕವಾಗಿ ಅಕ್ರಮ ನಡೆದಿದೆ. ಈ ನಿಟ್ಟಿನಲ್ಲಿ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗರಿಷ್ಠ 5 ಎಕರೆಯವರೆಗೆ ಪರಿಹಾರ ಕೊಡಬಹುದು. ಆದರೆ, 5 ಎಕರೆ ಮೀರಿ ಕೂಡ ಪರಿಹಾರ ವಿತರಿಸಿದ್ದಾರೆ. ರೈತರಲ್ಲದವರ ಖಾತೆಗೆ 49,999 ಜಮೆ ಆಗಿದೆ. ಅಸಲಿ ರೈತರ ಖಾತೆಗೆ ಅಲ್ಪ ಪ್ರಮಾಣದ ಮೊತ್ತ ಮಾತ್ರ ಜಮೆ ಆಗಿದೆ. ಇದೇ ಕಾರಣಕ್ಕೆ ಈ ಬಾರಿ ರೈತರಿಗೆ ಬರ ಪರಿಹಾರ ನೀಡಲು ‘ಫ್ರೂಟ್ಸ್‌’ ದಾಖಲಾತಿ ಕಡ್ಡಾಯಗೊಳಿಸಲಾಗಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

Krishna Byre Gowda Minister 2

“ಈ ಹಿಂದೆ ಫ್ರೂಟ್ಸ್‌ ಡಾಟಾ ಬೇಸ್‌ನಲ್ಲಿ 7.7 ಲಕ್ಷ ರೈತರ ಮಾಹಿತಿಯೇ ಇರಲಿಲ್ಲ. ಇದೀಗ ಹೊಸದಾಗಿ ಸೇರಿಸಲಾಗಿದೆ. 34 ಲಕ್ಷ ರೈತರ ಜಮೀನಿನ ಮಾಹಿತಿಯನ್ನು ಈ ತಂತ್ರಾಂಶದಲ್ಲಿ ದಾಖಲು ಮಾಡಲಾಗಿದೆ. ಬಿಟ್ಟುಹೋಗಿರುವ ಅರ್ಹ ರೈತರ ಮಾಹಿತಿಯನ್ನು ಮತ್ತೆ ದಾಖಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಳೆದ 15 ದಿನಗಳಿಂದ ನಮ್ಮ ಅಧಿಕಾರಿಗಳು ರಜೆ ತೆಗೆದುಕೊಳ್ಳದೆ ಕೆಲಸ ಮಾಡಿದ್ದು, ರೈತರ ಹಣ ದುರುಪಯೋಗವಾಗದಂತೆ ಅವರಿಗೆ ತಲುಪಿಸಲಾಗುವುದು. ಈಗಾಗಲೇ ಈ ಪ್ರಕ್ರಿಯೆ ಆರಂಭವಾಗಿದ್ದು, 15 ಲಕ್ಷಕ್ಕೂ ಅಧಿಕ ರೈತರಿಗೆ ಈಗಾಗಲೇ ಹಣ ತಲುಪಿಸಲಾಗಿದೆ. ಮುಂದಿನ ವಾರದೊಳಗೆ 30 ಲಕ್ಷ ರೈತರಿಗೆ ಪರಿಹಾರದ ಹಣ ತಲುಪಲಿದೆ” ಎಂದರು.

“ಬರ ಪರಿಹಾರದ ಮೊದಲ ಕಂತಿನ ಹಣವನ್ನು ಶೀಘ್ರವೇ ರೈತರಿಗೆ ತಲುಪಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಫ್ರೂಟ್ಸ್‌ನಲ್ಲಿ ಶೇ.75 ರಷ್ಟು ರೈತರ ಸಂಪೂರ್ಣ ಜಮೀನಿನ ಮಾಹಿತಿಯನ್ನು ನವೀಕರಿಸಿದ್ದು ಮುಂದಿನ ಒಂದು ವಾರದಲ್ಲಿ 30 ಲಕ್ಷ ರೈತರಿಗೆ ಮೊದಲ ಕಂತಿನ ಬರ ಪರಿಹಾರದ ಹಣ ಬ್ಯಾಂಕ್ ಖಾತೆಗೆ ತಲುಪಲಿದೆ” ಎಂದು ತಿಳಿಸಿದರು.

ಕೇಂದ್ರದಿಂದ ಇನ್ನೂ ಬಂದಿಲ್ಲ ಪರಿಹಾರ!

ಬರ ಘೋಷಿಸಿ ನಾಲ್ಕು ತಿಂಗಳಾದರೂ ಕೇಂದ್ರ ಸರ್ಕಾರದಿಂದ ಬರ ಪರಿಹಾರದ ಹಣ ಇನ್ನೂ ಬಂದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಬೇಸರ ವ್ಯಕ್ತಪಡಿಸಿದರು.

“ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಎನ್‌ಡಿಆರ್‌ಎಫ್ ಮಾರ್ಗಸೂಚಿ ಅನ್ವಯ 18,177.44 ಕೋಟಿ ರೂ. ಪರಿಹಾರ ನೀಡುವಂತೆ ಸೆಪ್ಟೆಂಬರ್ 22ರಂದೇ ಕೇಂದ್ರ ಕೃಷಿ ಸಚಿವಾಲಯಕ್ಕೆ ಮನವಿ ಸಲ್ಲಿಸಲಾಗಿದೆ. ಭಾರತ ಸರ್ಕಾರದ ಬರ ಅಧ್ಯಯನ ತಂಡ ಅಕ್ಟೋಬರ್ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನೂ ಸಲ್ಲಿಸಿದೆ. ಆದರೂ, ಕೇಂದ್ರ ಸರ್ಕಾರ ಸಭೆ ನಡೆಸಿ, ತೀರ್ಮಾನ ತೆಗೆದುಕೊಂಡಿಲ್ಲ. ನಮ್ಮ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರವೇ ಮೊದಲ ಕಂತಿನಲ್ಲಿ 2,000 ರೂ. ನೀಡಲು ಮುಂದಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...