ಸಾಮಾನ್ಯ ನಾಗರಿಕರಂತೆ ಬಸ್‌ ಮೂಲಕ ವಿಜಯಪುರಕ್ಕೆ ತೆರಳಿದ ಸಚಿವ ಕೃಷ್ಣ ಬೈರೇಗೌಡ

Date:

ಸಚಿವ ಕೃಷ್ಣ ಬೈರೇಗೌಡ ಸದಾ ಸಾಮಾನ್ಯ ಜನರಂತೆ ಇರುಲು ಪ್ರಯತ್ನಿಸಿ, ತಮ್ಮ ಭಿನ್ನ ಕೆಲಸ ಕಾರ್ಯಗಳ ಮೂಲಕ ಗಮನ ಸೆಳೆಯುತ್ತಿರುತ್ತಾರೆ. ಶುಕ್ರವಾರ ರಾತ್ರಿ ಕಾರ್ ತೊರೆದು ಸಾಮಾನ್ಯ ನಾಗರಿಕರಂತೆ ಬಸ್ಸಿನ ಮೂಲಕ ವಿಜಯಪುರಕ್ಕೆ ಪ್ರಯಾಣ ಮಾಡಿ ಗಮನ ಸೆಳೆದಿದ್ದಾರೆ.

ಇಲಾಖೆಯ ಕೆಲಸದ ನಿಮಿತ್ತ ಕೃಷ್ಣ ಬೈರೇಗೌಡ ಅವರು ಬೆಂಗಳೂರಿನಿಂದ ವಿಜಯಪುರಕ್ಕೆ ಕಲ್ಯಾಣ ರಥ ಬಸ್‌ನಲ್ಲಿ ತೆರಳಿದ್ದಾರೆ. ಸಾಮಾನ್ಯವಾಗಿ ಪಕ್ಕದ ಜಿಲ್ಲೆಗೆ ಹೋಗಬೇಕಾದರೆ ವಿಮಾನದ ಮೂಲಕ ಪ್ರಯಾಣ ಮಾಡಿ ನಂತರದಲ್ಲಿ ಕಾರ್‌ನಲ್ಲಿ ರಸ್ತೆಯ ಮೂಲಕ ಸಚಿವರು ತೆರಳುವುದು ಸಾಮಾನ್ಯ.

ಆದರೆ ಕೃಷ್ಣ ಬೈರೇಗೌಡ‌ ಹಠಾತ್ ಕಾರ್ ತೊರೆದು ಬಸ್‌ ನಲ್ಲಿ ಪ್ರಯಾಣ ಮಾಡುವ ಮೂಲಕ ಗಮನ ಸೆಳೆದರು. ವಿಜಯಪುರಕ್ಕೆ ಶನಿವಾರ ಬಂದಿಳಿದಾಗ ಸ್ಥಳೀಯ ಅಧಿಕಾರಿಗಳು ಮತ್ತು ಆಪ್ತರು ಪುಸ್ತಕ ನೀಡಿ ಜಿಲ್ಲೆಗೆ ಸ್ವಾಗತಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಭಿನ್ನ ಕಾರ್ಯವೈಖರಿ ಮೂಲಕ ಗಮನ ಸೆಳೆಯುತ್ತಿರುವ ಸಚಿವ ಕೃಷ್ಣ ಬೈರೇಗೌಡರು ಕಂದಾಯ ಇಲಾಖೆಯ ಕಚೇರಿಗಳಿಗೆ ದಿಢೀರ್ ಭೇಟಿ ನೀಡುವ ಮೂಲಕ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ತಮ್ಮ ಇಲಾಖೆಯ ಕೆಲಸ ಕಾರ್ಯಗಳಿಗೂ ವೇಗ ನೀಡುತ್ತಿದ್ದಾರೆ. ಉತ್ತಮವಾಗಿ ಕೆಲಸ ಮಾಡುತ್ತಿರುವ ಅಧಿಕಾರಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವ ಹಾಗೂ ಕೆಲಸ ಮಾಡದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುವ ಕೆಲಸವನ್ನೂ ಮಾಡುತ್ತಿದ್ದಾರೆ.

ಸಚಿವರ ಕಾರ್ಯವೈಖರಿಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಕೆಲವು ದಿನಗಳ ಹಿಂದೆ ವಿಧಾನಸೌಧದಲ್ಲಿ ನಡೆದಿದ್ದ ಕಂದಾಯ ಇಲಾಖೆಯ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಚಿವ ಕೃಷ್ಣ ಬೈರೇಗೌಡ ಅವರ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸಿದ್ದರು. ಒಂದೂವರೆ ವರ್ಷದಲ್ಲಿ 26 ಲಕ್ಷ ಸರ್ವೇ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದ್ದಕ್ಕೆ ಸಚಿವರಿಗೆ ಅಭಿನಂದಿಸಿದ್ದರು.

“ಕಂದಾಯ ಇಲಾಖೆ ರಾಜ್ಯ ಸರ್ಕಾರದ ಮಾತೃ ಇಲಾಖೆ ಇದ್ದಂತೆ. ಈ ಇಲಾಖೆ ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ರೈತ ಸಮುದಾಯ ನೆಮ್ಮದಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಸಚಿವ ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಕೆಲಸಗಳಾಗುತ್ತಿವೆ. ಕೃಷ್ಣಬೈರೇಗೌಡರು ಇಲಾಖೆಯನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ನಾಲಗೆ ತುದಿಯಲ್ಲಿ ಅಂಕಿ – ಅಂಶ ಇಟ್ಟುಕೊಂಡಿರುವ ಸಮರ್ಥ ಮಂತ್ರಿಯಾಗಿದ್ದಾರೆ” ಎಂದು ಹಾಡಿ ಹೊಗಳಿದ್ದನ್ನು ಇಲ್ಲಿ ಗಮನಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...