ಚುನಾವಣೆಯಲ್ಲಿ ಮೋದಿ ಬಲ ಕುಸಿತಗೊಂಡಿದ್ದರಿಂದ ಇಡಿ ದಾಳಿ ವಿಳಂಬ: ಸಚಿವ ಪ್ರಿಯಾಂಕ್ ಖರ್ಗೆ

Date:

“ವಿರೋಧ ಪಕ್ಷಗಳ ಮೇಲೆ ನಡೆಯುವ ಐಟಿ ಮತ್ತು ಇಡಿ ದಾಳಿ ಆಶ್ಚರ್ಯವೇನಲ್ಲ. ಲೋಕಸಭಾ ಚುನಾವಣೆಯಲ್ಲಿ ಮೋದಿ ಬಲ ಕುಸಿತಗೊಂಡ ಪರಿಣಾಮ ವಾಲ್ಮೀಕಿ ಹಗರಣದ ಇಡಿ ದಾಳಿ ವಿಳಂಬವಾಗಿದೆ” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.

ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್ ನಾಯಕರನ್ನು, ವಿರೋಧ ಪಕ್ಷಗಳನ್ನು ಕುಗ್ಗಿಸಲು ಐಟಿ-ಇಡಿ ದಾಳಿ ಮಾಡುತ್ತಾರೆ. ಹತ್ತು ವರ್ಷಗಳಿಂದಲೂ ಇದೇ ನಡೆದುಕೊಂಡು ಬಂದಿದೆ. ಇದರಲ್ಲೇನೂ ಅಶ್ಚರ್ಯವಿಲ್ಲ” ಎಂದರು.

“ಮಂತ್ರಿಯಾಗಿದ್ದ ನಾಗೇಂದ್ರ ಅವರೇ, ವಾಲ್ಮೀಕಿ ಅಭಿವೃದ್ಧಿ ನಿಗಮದ ತನಿಖೆ ಆಗಬೇಕು ಎಂದು ಎಸ್‌ಐಟಿ ರಚನೆಗೆ ಶಿಫಾರಸ್ಸು ಮಾಡಿದ್ದಾರೆ. ಎಸ್‌ಐಟಿಯೂ ರಚನೆಯಾಗಿದೆ. ರಾಜೀನಾಮೆಯನ್ನೂ ನೀಡಿದ್ದಾರೆ. ನಿನ್ನೆ ಬಂದ ಆಡಿಯೋ ನೋಡಿದರೆ, ಅದರಲ್ಲೆ ಅಧಿಕಾರಿಗಳು ನಿಗಮದ ಅಧ್ಯಕ್ಷರಿಗೆ ಗೊತ್ತಾದರೆ ದೊಡ್ಡ ರಾದ್ದಾಂತವಾಗುತ್ತದೆ ಎಂದು ಹೇಳಿರುವುದು ಸ್ವಷ್ಟವಾಗಿದೆ. ಯಾರು ಅಧಿಕಾರಿಗಳು ತಪ್ಪುಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿದೆ. ಶಾಸಕ ದದ್ದಲ್, ನಾಗೇಂದ್ರ ಅವರು ಜೆಡಿಎಸ್ ಕಾಂಗ್ರೆಸ್ ನಾಯಕರ ರೀತಿ ತಲೆಮರೆಸಿಕೊಂಡು ಓಡಾಡುತ್ತಿಲ್ಲ. ತನಿಖೆಗೆ ಹಾಜರಾಗುತ್ತಿದ್ದಾರೆ” ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಡಾ ಹಗರಣ ಆರೋಪ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ, “ವಿರೋಧ ಪಕ್ಷದವರು ಆರೋಪ ಮಾಡುವುದು ಸಹಜ. ಆದರೆ ನಾವು ಬಿಟ್ ಕಾಯಿನ್ ಹಗರಣ, ಪಿಎಸ್‌ಐ ಹಗರಣ, ಗಂಗಾಕಲ್ಯಾಣ ಹಗರಣಗಳ ಬಗ್ಗೆ ದಾಖಲೆ ನೀಡಿ ಮಾತನಾಡಿದ್ದೆವು. ಇವರು ಕೂಡ ದಾಖಲೆ ನೀಡಿ ಮಾತನಾಡಲಿ. ಮುಡಾ ಅಕ್ರಮದ ಬಗ್ಗೆ 2011ರಲ್ಲಿ ಬಿ.ಎಸ್.ಯಡಯೂರಪ್ಪ ಅವರು ಸ್ಪೀಕರ್‌ಗೆ ದೂರು ನೀಡಿದ್ದರು. ಆಗ ಬಿಜೆಪಿಗೆ ಅಕ್ರಮ ನಡೆಯುತ್ತಿರುವುದು ಗೊತ್ತಿತ್ತಲ್ಲ. ಯಾಕೆ ತನಿಖೆ ಮಾಡಲಿಲ್ಲ, ಯಾಕೆ ಸುಮ್ಮನಿದ್ದರು” ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಅಂಗನವಾಡಿ ಅವ್ಯವಸ್ಥೆ | ಸಿಂಧಗಿ ; ಬಾಡಿಗೆ ಕಟ್ಟಡದಿಂದ ಮುಕ್ತಿ ಪಡೆಯಬಹುದೇ ತಾಲೂಕಿನ 66 ಅಂಗನವಾಡಿ ಕೇಂದ್ರಗಳು?

“ಈಗ ಸಚಿವ ಭೈರತಿ ಸುರೇಶ್ ಅವರು ಈ ಎಲ್ಲವನ್ನೂ ನಿಲ್ಲಿಸಿ ತನಿಖೆ ಮಾಡಿಸುತ್ತಿದ್ದಾರೆ. ಇದನ್ನು ಮಾಡುತ್ತಿರುವುದು ತಪ್ಪಾ?” ಎಂದು ಪ್ರಶ್ನಿಸಿದ ಅವರು, “ಮುಖ್ಯಮಂತ್ರಿಗಳು ಮತ್ತು ಅವರ ಕಾನೂನು ಸಲಹೆಗಾರರು ಸ್ಪಷ್ಟವಾಗಿ ಹೇಳಿದ್ದಾರೆ. ಎಲ್ಲ ಕಾನೂನು ರೀತಿಯೇ ತೆಗೆದುಕೊಂಡಿರುವುದನ್ನು ತೆರೆದಿಟ್ಟಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...