ಸೈಬರ್‌ ತಾಣ ಸುರಕ್ಷತೆ ಬಗ್ಗೆ 10 ಲಕ್ಷ ಮಕ್ಕಳಿಗೆ ತರಬೇತಿ: ಸಚಿವ ಪ್ರಿಯಾಂಕ್‌ ಖರ್ಗೆ

Date:

ಮೆಟಾ ಕಂಪೆನಿ ಜೊತೆಗೂಡಿ 10 ಲಕ್ಷ ಮಕ್ಕಳಿಗೆ ಸೈಬರ್‌ ತಾಣದ ಸುರಕ್ಷತೆ ಬಗ್ಗೆ ತರಬೇತಿ ನೀಡಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಗುರುವಾರ ಬೆಂಗಳೂರಿನಲ್ಲಿನಡೆದ ಕಾರ್ಯಕ್ರಮದಲ್ಲಿ ಸಚಿವರು ‘ಡಿಜಿಟಲ್ ನಾಗರೀಕ್ʼ ಮತ್ತು ʼ ಎಆರ್-ವಿಆರ್ ಕೌಶಲ್ಯʼ ಲೋಕಾರ್ಪಣೆಗೊಳಿಸಿ ಮಾತನಾಡಿದರು.

“ಸಾಮಾಜಿಕ ಜಾಲತಾಣಗಳು ಮತ್ತು ಸೈಬರ್‌ ತಾಣಗಳಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಬೆದರಿಕೆಗಳಿಂದ ರಕ್ಷಿಸಿಕೊಳ್ಳಲು ಹಾಗೂ ಶಕ್ತಿಯುತವಾದ ಪಾಸ್‌ವರ್ಡ್‌ಗಳನ್ನು ರೂಪಿಸುವುದು ಮತ್ತು ಮೋಸದ ಜಾಲಗಳನ್ನು ಗುರುತಿಸುವ ಸಂಬಂಧ ಅಗತ್ಯವಿರುವ ಶಿಕ್ಷಣದ ಮೂಲಕ ವಿದ್ಯಾರ್ಥಿಗಳನ್ನು ಸಬಲೀಕರಣಗೊಳಿಸಲು ಕರ್ನಾಟಕ ಸರ್ಕಾರ ಬದ್ಧವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಾಲಾ ಶಿಕ್ಷಣ, ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳೊಂದಿಗೆ ಮಕ್ಕಳಿಗೆ ತರಬೇತಿ ನೀಡುವುದು ಮಾತ್ರವಲ್ಲದೆ ಅವರಲ್ಲಿ ಜಾಗರೂಕತೆ ಮತ್ತು ಜವಾಬ್ದಾರಿಯ ಮನಸ್ಥಿತಿಯನ್ನು ಹುಟ್ಟುಹಾಕಲಾಗುವುದು ಹಾಗೂ ಇದು ಮುಂದಿನ ಜೀವನದಲ್ಲಿ ಎಚ್ಚರಿಕೆಯ ಗಂಟೆಯಾಗಿ ಉಳಿಯುತ್ತದೆ” ಎಂದು ಹೇಳಿದರು.

“ಕರ್ನಾಟಕ ಸರ್ಕಾರ ಮತ್ತು ಮೆಟಾ ಕಂಪೆನಿ ಜಂಟಿಯಾಗಿ 2025ರ ವೇಳೆಗೆ ರಾಜ್ಯದ ಒಂದು ಲಕ್ಷ ಶಿಕ್ಷಕರು ಮತ್ತು 10 ಲಕ್ಷ ವಿದ್ಯಾರ್ಥಿಗಳನ್ನು ಡಿಜಿಟಲ್ ಸುರಕ್ಷತಾ ಜ್ಞಾನ ಮತ್ತು ವರ್ಧಿತ ವಾಸ್ತವತೆ (ಆಗ್ಯುಮೆಂಟೆಡ್ ರಿಯಾಲಿಟಿ)/ಅಗೋಚರ ವಾಸ್ತವತೆ (ವರ್ಚುವಲ್ ರಿಯಾಲಿಟಿ ) ಕೌಶಲ್ಯಗಳೊಂದಿಗೆ ಸಬಲೀಕರಣಗೊಳಿಸುವ ಮಹತ್ವಾಕಾಂಕ್ಷೆಯ ಪಯಣವನ್ನು ಪ್ರಾರಂಭಿಸಿದೆ” ಎಂದು ತಿಳಿಸಿದರು.

ಮೆಟಾ ಕಂಪೆನಿಯ ಭಾರತದ ಪಬ್ಲಿಕ್ ಪಾಲಿಸಿಯ ಮ್ಯಾನೇಜರ್‌ ಪ್ರಿಯಾಂಕಾ ರಾವ್ ಮಾತನಾಡಿ, “ಭಾರತದಲ್ಲಿಯೇ ಪ್ರಥಮ ಬಾರಿಗೆ ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ಈ ಮಹತ್ತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ” ಎಂದರು.

ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ. ಎಕರೂಪ್ ಕೌರ್, ಪ್ರಾಥಮಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಂಎಸ್.ಶ್ರೀಕರ್, ಪಿಯು ಮಂಡಳಿಯ ನಿರ್ದೇಶಕರಾದ ಸಿಂಧು ಬಿ ರೂಪೇಶ್; ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತೆ ಕಾವೇರಿ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಶಿಕ್ಷಣ ಇಲಾಖೆಗಳ ಹಿರಿಯ ಅಧಿಕಾರಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...