ಸಾಂಪ್ರದಾಯಿಕ ನೇಕಾರಿಕೆಗೆ ಸರ್ಕಾರದ ಉತ್ತೇಜನ: ಸಚಿವ ಶಿವಾನಂದ ಪಾಟೀಲ

Date:

ಸ್ಪರ್ಧಾತ್ಮಕ ಮತ್ತು ತಂತ್ರಜ್ಞಾನ ಯುಗದಲ್ಲಿ ಪಾರಂಪರಿಕ ಉದ್ಯೋಗವನ್ನೂ ಉಳಿಸಿ ಬೆಳೆಸುವ ಅಗತ್ಯವಿದ್ದು, ಸಾಂಪ್ರದಾಯಿಕ ನೇಕಾರಿಕೆಗೆ ಸರ್ಕಾರ ಉತ್ತೇಜನ ನೀಡಲಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ಚರಕ ಮತ್ತು ದೇಸಿ ಟ್ರಸ್ಟ್ ಸಂಯುಕ್ತವಾಗಿ ಬೆಂಗಳೂರಿನಲ್ಲಿ ಆಯೋಜಿಸಿರುವ ಎರಡು ದಿನಗಳ ‘ಕೊಡು-ಕೊಳ್ಳುವವರ ಸಮಾವೇಶ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಔದ್ಯೋಗಿಕ ಬೆಳವಣಿಕೆ ಮತ್ತು ವೈಜ್ಞಾನಿಕ ಬೆಳವಣಿಗೆ ಮುಖ್ಯವಾದರೂ ಪ್ರಕೃತಿ ಸಂರಕ್ಷಣೆಯೊಂದಿಗೆ ಈ ಚಟುವಟಿಕೆಗಳನ್ನು ನಿರ್ಲಕ್ಷ್ಯ ಮಾಡಬಾರದು. ಹೆಗ್ಗೋಡಿನ ಚರಕ ಸಂಸ್ಥೆ ಸಾಂಪ್ರದಾಯಿಕ ನೇಕಾರಿಕೆಯನ್ನು ಉಳಿಸಿ ಬೆಳೆಸಲು ಶ್ರಮಸುತ್ತಿದ್ದು, ಸಂಸ್ಥೆಗೆ ಸರ್ಕಾರ ಅಗತ್ಯ ನೆರವು ಸಹಕಾರ ನೀಡಲು ಬದ್ಧವಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯುತ್ ಮಗ್ಗ ಅಭಿವೃದ್ಧಿ ನಿಗಮ ಹಾಗೂ ಕೈಮಗ್ಗ ಅಭಿವೃದ್ಧಿ ನಿಗಮ ಎರಡನ್ನೂ ವಿಲೀನಗೊಳಿಸಿ ಏಕ ನಿಗಮ ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸಿದೆ. ನೇಕಾರ ಸಮುದಾಯ ತೀವ್ರ ಸಂಕಷ್ಟದಲ್ಲಿದೆ. ಎರಡರೆಡು ನಿಗಮಗಳಿಂದ ನೇಕಾರರ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗದಿರುವುದು ಮನಗಂಡು ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ ಎಂದರು.

ಕೈಮಗ್ಗದ ಬಟ್ಟೆಗಳನ್ನು ಸರ್ಕಾರದ ಇಲಾಖೆಗಳು ಖರೀದಿಸಬೇಕೆಂಬ ನಿಯಮ ಇದೆ. ಆದರೆ, ಕೆಲವು ಇಲಾಖೆ ಅಧಿಕಾರಿಗಳ ಹಾಗೂ ಸಚಿವರ ಇಚ್ಛಾಶಕ್ತಿಯ ಕೊರತೆಯಿಂದ ಇದಕ್ಕೆ ಚಾಲನೆ ಸಿಕ್ಕಿಲ್ಲ. ಇವರಿಗೆ ಮನವರಿಕೆ ಮಾಡುವ ಕೆಲಸ ನಡೆದಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಸಚಿವ ಪ್ರಿಯಾಂಕ್‌ ಖರ್ಗೆಗೆ ಅಮೆರಿಕ ಪ್ರವಾಸ ನಿರ್ಬಂಧ ಹೇರಿದ ಕೇಂದ್ರ: ಏನಿದು ಪ್ರಕರಣ?

ಈ ಹಿಂದೆ ನರ್ಬಾಡ್ ನೇಕಾರ ಸಮುದಾಯಕ್ಕೆ ಹೆಚ್ಚಿನ‌ ಅನುದಾನ ನೀಡುತ್ತಿತ್ತು. ಈಗ ಅದು ಕಡೆಗಣಿಸಿದೆ. ನಬಾರ್ಡ್‌ ಕೂಡ ವಾಣಿಜ್ಯ ಬ್ಯಾಂಕುಗಳ ಸ್ವರೂಪ ಪಡೆದುಕೊಳ್ಳತೊಡಗಿದೆ. ಕೃಷಿಗೆ ನೀಡುತ್ತಿದ್ದ ನೆರವಿನ ಪ್ರಮಾಣವನ್ನೂ ಕಡಿಮೆ ಮಾಡಿದ್ದು, ಇದು ಕೃಷಿ ಕ್ಷೇತ್ರದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದ ಸಚಿವರು, ಭವಿಷ್ಯದಲ್ಲಿ ನರ್ಬಾಡ್ ಮೂಲಕ ನೇಕಾರರಿಗೆ ಹೆಚ್ಚಿನ‌ ಅನುದಾನ ಕೊಡಿಸಲು ಪ್ರಯತ್ನಿಸಲಾಗುವುದು ಎಂದರು.

ಕೈಮಗ್ಗ ಮತ್ತು ಜವಳಿ ಇಲಾಖೆ ಅಭಿವೃದ್ಧಿ ಆಯುಕ್ತೆ ಕೆ. ಜ್ಯೋತಿ ಮಾತನಾಡಿ, ಸರ್ಕಾರ ‘ಮಹಾತ್ಮ ಗಾಂಧಿ ವಸ್ತ್ತೋದ್ಯಮ’ ಯೋಜನೆ ರೂಪಿಸಿದ್ದು, ಇದರಲ್ಲಿ ಕೈಮಗ್ಗ ನೇಕಾರರನ್ನೇ ಷೇರುದಾರರನ್ನಾಗಿ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಹಿತಿ‌ ನೀಡಿದರು.

ಸರ್ಕಾರ ಎರಡು ವರ್ಷದ ಹಿಂದೆ ಈ ಯೋಜನೆಯನ್ನು ಘೋಷಿಸಿತ್ತು. ಆದರೆ, ಅದಕ್ಕೆ ಚಾಲನೆ ಸಿಕ್ಕಿರಲಿಲ್ಲ. ಈಗ ‘ಮಹಾತ್ಮ ಗಾಂಧಿ ವಸ್ತ್ರೋದ್ಯಮ’ ಕೋಶ ಎಂಬ ಲಿಮಿಟೆಡ್ ಕಂಪನಿ ಆರಂಭಿಸಲಾಗುತ್ತಿದೆ ಎಂದರು.

ಈ ಹಿಂದೆ ಹತ್ತಿ, ರೇಷ್ಮೆ, ಉಣ್ಣೆ ಕೈಮಗ್ಗ ನೇಕಾರರು ರಾಜ್ಯದಲ್ಲಿ 40 ಸಾವಿರ ಜನ ಇದ್ದರು: ಈಗ 20 ಸಾವಿರಕ್ಕೆ ಬಂದಿದೆ. ಈಗ ಮತ್ತೊಮ್ಮೆ ಕೈಮಗ್ಗ ನೇಕಾರರ ಸರ್ವೆ ನಡೆಸಲಾಗುವುದು ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಚರಕ ಸಂಸ್ಥೆ ಸಂಸ್ಥಾಪಕ ಪ್ರಸನ್ನ, ಸರ್ಕಾರ ಕೈಮಗ್ಗ ನೇಕಾರರ ಅನುಕೂಲಕ್ಕಾಗಿ ಮಹಾತ್ಮ ಗಾಂಧಿ ವಸ್ತ್ರೋದ್ಯಮ’ ಜಾರಿಗೆ ಮುಂದಾಗಿದೆ. ಇದು ಕೈಮಗ್ಗ ನೇಕಾರರ ಬದುಕಿನಲ್ಲಿ ಕ್ರಾಂತಿಕಾರಕ ಬದಲಾವಣೆ ತರಲಿದೆ ಎಂದರು.

ಭಾರತ ದೇಶ ಹತ್ತಿ ಕೈಮಗ್ಗದಲ್ಲಿ ಅತ್ಯಂತ ಪ್ರಖ್ಯಾತಿ ಹೊಂದಿದ್ದು, ಬ್ರಿಟಿಷರ ಕಾಲದಲ್ಲೇ ಗರಿಷ್ಠ ಪ್ರಮಾಣದಲ್ಲಿ ರಫ್ತು ಮಾಡಲಾಗುತ್ತಿತ್ತು. ಆದರೆ ಈಗ ಸಾಂಪ್ರದಾಯಕ ನೇಕಾರಿಕೆ ಸಂಕಷ್ಟದಲ್ಲಿದೆ. ಹೀಗಾಗಿ ಪರಿಹಾರ ಕಂಡುಕೊಳ್ಳಲು ಚರಕ ಸಂಸ್ಥೆ ಕಳೆದ 3೦ ವರ್ಷಗಳಿಂದ ಕೆಲಸ ಮಾಡುತ್ತಿದೆ ಎಂದರು.

ಸಮಾರಂಭದಲ್ಲಿ ನರ್ಬಾಡ್ ಮುಖ್ಯ ಪ್ರಧಾನ ವ್ಯವಸ್ಥಾಪಕ ಡಾ. ಸುರೇಂದ್ರ ಬಾಬು ಮಾತನಾಡಿದರು. ಕೈಮಗ್ಗ ಮತ್ತು ಜವಳಿ‌ ಇಲಾಖೆ ನಿವೃತ್ತ ಆಯುಕ್ತ ಬಿ.ಎಫ್. ಪಾಟೀಲ್, ನೇಕಾರ ಸೇವಾ ಕೇಂದ್ರದ ಮುಖ್ಯಸ್ಥ ಪ್ರಭಾಕರ್, ಚರಕ ಸಂಸ್ಥೆ ಅಧ್ಯಕ್ಷೆ ಮಹಾಲಕ್ಷ್ಮಿ, ಡಿಕನಿ ಡೈರಿಯ ಗೋಪಿ, ದೇಸಿ ಟ್ರಸ್ಟ್‌ನ ಶಾರದಾ ಮತ್ತಿತರರು ಉಪಸ್ಥಿತರಿದ್ದರು. ಪದ್ಮಶ್ರೀ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...