2025 ಮುಗಿಯುವುದರೊಳಗೆ ಸರ್ಕಾರದಲ್ಲಿ ಸಣ್ಣ ಪುಟ್ಟ ಬದಲಾವಣೆ ಖಚಿತ: ಸತೀಶ್ ಜಾರಕಿಹೊಳಿ

Date:

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಹುದ್ದೆ ಸೇರಿದಂತೆ ನಾನು ಪಕ್ಷದ ಯಾವುದೇ ಹುದ್ದೆಗೆ ಪ್ರಯತ್ನ ಮಾಡಿಲ್ಲ. 2025 ಮುಗಿಯುವುದರೊಳಗಾಗಿ ರಾಜ್ಯ ರಾಜಕಾರಣದಲ್ಲಿ ಸಣ್ಣ ಬದಲಾವಣೆಗಳಾಗಬಹುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾನು ಎಲ್ಲಿದ್ದೇನೋ ಅಲ್ಲಿಯೇ ಇದ್ದೇನೆ. ನಮ್ಮನ್ನು ಪುಷ್ ಮಾಡೋರು ಯಾರೂ ಇಲ್ಲ. ವರ್ಷಾಂತ್ಯಕ್ಕೆ ಕಾಂಗ್ರೆಸ್‌ನಲ್ಲಿ ಬದಲಾವಣೆ ಆಗಲಿದೆ. ಹಾಗಂತ ದೊಡ್ಡ ಬದಲಾವಣೆ ಏನಿಲ್ಲ. ಸಚಿವರ ಬದಲಾವಣೆ ಆಗಲಿದೆ” ಎಂದು ಹೇಳುವ ಮೂಲಕ ಪರೋಕ್ಷವಾಗಿ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂಬುದನ್ನು ಮಾರ್ಮಿಕವಾಗಿ ನುಡಿದರು.

“ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪ್ರಯತ್ನ ನಡಿಸಿಲ್ಲ. ಪ್ರಯತ್ನ ನಡೆಸಿದ್ದರೆ ಮುಂದುವರೆಸಬಹುದು. ನಾನು ಎಲ್ಲಿದ್ದೆನೋ ಅಲ್ಲೇ ಇದ್ದೇನೆ. ದೆಹಲಿಗೆ ಹೋದ ಮೇಲೆ ಸಕ್ರಿಯವಾಗುವುದು ಸ್ವಾಭಾವಿಕ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಆಗಿಲ್ಲ. ಯುದ್ಧ ಇದ್ದಾಗ ಶಸ್ತ್ರ ಹಿಡಿಯಬೇಕು. ಯುದ್ಧ ಇಲ್ಲದೇ ಇರುವಾಗ ಶಸ್ತ್ರ ಹಿಡಿಯುವ ಅಗತ್ಯ ಇಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರಸ್ಥರು ಅನ್ನ ತಿನ್ನುವವರೇ ಆದರೆ, ಭೂ ಸ್ವಾಧೀನ ಕೈಬಿಡಲಿ

“ಶಾಸಕ ಬಿ.ಆರ್. ಪಾಟೀಲ ಅವರ ಹೇಳಿಕೆ ವಿಚಾರವೂ ದೆಹಲಿಯಲ್ಲಿ ಚರ್ಚೆ ಆಗಿದೆ. ಈ ಬಗ್ಗೆ ಮುಖ್ಯಮಂತ್ರಿ ಜೊತೆ ವರಿಷ್ಠರು ಮಾತನಾಡಿದ್ದಾರೆ. ಅನುದಾನ, ವರ್ಗಾವಣೆ ಎಂದು ಹೇಳಲು ಆಗುವುದಿಲ್ಲ. ಕ್ಷೇತ್ರದಲ್ಲಿ ಬೇರೆ ಬೇರೆ ಸಮಸ್ಯೆಗಳು ಇರುತ್ತದೆ. ಶಾಸಕ ರಾಜು ಕಾಗೆ ಅವರು ಒಂದು ವರ್ಷದಿಂದ ನನ್ನ ಬಳಿಯೂ ಸಾಕಷ್ಟು ಹೇಳಿದ್ದಾರೆ. ಹಾಗೆಂದು, ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ. ಮುಖ್ಯಮಂತ್ರಿಗಳು ಎಲ್ಲವನ್ನೂ ಸರಿ ಮಾಡುತ್ತಾರೆ” ಎಂದು ತಿಳಿಸಿದರು.

ಜಲಸಂಪನ್ಮೂಲ ಇಲಾಖೆ ಮೇಲೆ ಶಾಸಕ ರಾಜು ಕಾಗೆ ಆರೋಪ ವಿಚಾರದ ಬಗ್ಗೆ ಮಾತನಾಡಿ, “ಮೊದಲಿನಿಂದ ನೀರಾವರಿ ಸಮಸ್ಯೆ ಬಗ್ಗೆ ರಾಜು ಕಾಗೆ ಹೇಳುತ್ತಲೇ ಇದ್ದಾರೆ. ಇದು ಸಿಎಂ ಗಮನಕ್ಕೆ ಕೂಡ ಬಂದಿದೆ. ಈ ಬಗ್ಗೆ ಸಿಎಂ ಅವರು ಡಿಸಿಎಂ ಕರೆದು ಹೇಳ್ತಾರೆ. ಜಲಸಂಪನ್ಮೂಲ ಇಲಾಖೆಯಲ್ಲಿ ಹಣವಿದೆ, ಹಣವಿಲ್ಲ ಅಂತ ಯಾರು ಹೇಳಿದ್ದು? ಬಾಕಿ ಬಿಲ್‌ಗಳು ಕೂಡ ಇದ್ದಾವೆ. ಸುಮಾರು 3 ವರ್ಷದಷ್ಟು ಬಿಲ್ ಬಾಕಿ ಇದ್ದೇ ಇರುತ್ತವೆ” ಎಂದರು.

ಸಚಿವ ಕೆ.ಎನ್. ರಾಜಣ್ಣ ನಾವು ಆಗಾಗ ಸೇರುತ್ತಲೇ ಇರುತ್ತೇವೆ. ಹುಲಿ ಯಾವತ್ತಿದ್ರೂ ಹುಲಿನೇ, ವಯಸ್ಸಾದ್ರೂ ಹುಲಿ ಹುಲಿನೇ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆ ನೋಡಿಕೊಂಡು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸುಳ್ಳು. ಬಿಜೆಪಿ ಫಾರ್ಮುಲಾ ಬೇರೆ ನಮ್ಮದು ಬೇರೆ. ಅವರ ತತ್ವ, ಸಿದ್ಧಾಂತ ಬೇರೆ ನಮ್ಮದು ಬೇರೆ. ಬಿಜೆಪಿಗೂ ನಮಗೂ ವ್ಯತ್ಯಾಸ ಇದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...