ಅಲ್ಪಸಂಖ್ಯಾತ ಸಮುದಾಯ ಶೆಟ್ಟರ್‌​ರನ್ನು ಒಪ್ಪಿರಲಿಲ್ಲ, ಹೋಗಿದ್ದು ಒಳ್ಳೆಯದಾಯಿತು: ಡಿಕೆ ಶಿವಕುಮಾರ್‌

Date:

ನೀತಿ, ಸಿದ್ಧಾಂತದಡಿ ರಾಜಕೀಯ ಮಾಡುವವರು ನಾವು. ಅಲ್ಪಸಂಖ್ಯಾತ ಸಮುದಾಯ ಕೂಡ ಜಗದೀಶ್ ಶೆಟ್ಟರ್‌ ಅವ​ರನ್ನು ಒಪ್ಪಿರಲಿಲ್ಲ. ಇದರಿಂದ ನಮ್ಮ ಪಕ್ಷ ಸಂಘಟನೆಗೂ ಕಷ್ಟ ಆಗುತ್ತಿತ್ತು. ಶೆಟ್ಟರ್​​​ ಹೋಗಿದ್ದೇ ಒಳ್ಳೆಯದು ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದರು.

ಜಗದೀಶ್ ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆ ವಿಚಾರ ಬಗ್ಗೆ ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷ ಸಮುದ್ರ ಇದ್ದಂತೆ. ನೂರಾರು ಜನ ಬರ್ತಾರೆ, ನೂರಾರು ಜನ ಹೋಗುತ್ತಾರೆ. ಜಗದೀಶ್ ಶೆಟ್ಟರ್ ಅವರು ಇದನ್ನು ಗಮನದಲ್ಲಿಟ್ಟುಕೊಳ್ಳಲಿ” ಎಂದರು.

“ಬಿಜೆಪಿ ವಿರುದ್ಧ ದೊಡ್ಡ ದೊಡ್ಡ ಆರೋಪ ಮಾಡಿ ಕಾಂಗ್ರೆಸ್ ಸೇರಿದ್ದರು. ನಮ್ಮ ಪಕ್ಷದ ಕಾರ್ಯಕರ್ತರ ಟಿಕೆಟ್ ಅವರಿಗಾಗಿ ನಾವು ತ್ಯಾಗ ಮಾಡಿದೆವು. ಮಾಜಿ ಸಿಎಂ ಎಂಬ ಘನತೆಗೆ ಗೌರವ ಕೊಟ್ಟು ಟಿಕೆಟ್ ನೀಡಿದೆವು. ಸೋತರೂ ಕೂಡ ಅವರನ್ನು ನಂಬಿ ನಾವು ಅವರನ್ನು ಎಂಎಲ್‌ಸಿ ಮಾಡಿದೆವು. ಏಕಾಏಕಿ ರಾಜೀನಾಮೆ ನೀಡಿ ಪಕ್ಷ ಬಿಟ್ಟು ಹೋಗಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧರ್ಮದ ಆಧಾರದಲ್ಲಿ ದೇಶ ಕಟ್ಟುವುದನ್ನು ಪ್ರಜಾಪ್ರಭುತ್ವ ನಂಬಿರುವ ಯಾರೂ ಒಪ್ಪಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

“ಬಿಜೆಪಿ ವಿರುದ್ದ ಅವರು ಆರೋಪ ಮಾಡಿದ್ದಕ್ಕೆ ಅವರೇ ಉತ್ತರ ಕೊಡಬೇಕು. ಬಿಜೆಪಿ ದೂರ ಇಡಬೇಕು ಅಂತ ನಾವು ಜೆಡಿಎಸ್ ಜೊತೆಗೆ ಸರ್ಕಾರ ಮಾಡಿದ್ದೆವು. ಆಪರೇಷನ್ ಕಮಲ ಮಾಡಿ ಯಾರು ಸಮ್ಮಿಶ್ರ ಸರ್ಕಾರ ತೆಗೆದರೋ ಅವರ ಜೊತೆಗೇ ಈಗ ಜೆಡಿಎಸ್ ತಬ್ಬಿಕೊಳ್ತಿಲ್ವಾ? ಬಿಜೆಪಿಯ ವಕ್ತಾರರಾಗಿಲ್ವಾ ಹೆಚ್ ​ಡಿ ಕುಮಾರಸ್ವಾಮಿ? ಹಾಗೆ ರಾಜಕಾರಣದಲ್ಲಿ ಎಲ್ಲವೂ ಆಗುತ್ತದೆ” ಎಂದು ಡಿಕೆ ಶಿವಕುಮಾರ್ ಹೇಳಿದರು.

ಲಕ್ಷ್ಮಣ ಸವದಿ ಭೇಟಿ ಬಗ್ಗೆ ಪ್ರತಿಕ್ರಿಯಿಸಿ, “ನಾನು ಕಾಂಗ್ರೆಸ್​​ಗೆ ವೈಯಕ್ತಿಕವಾಗಿ ಬಂದಿದ್ದೇನೆ. ಒಟ್ಟಿಗೆ ಕೆಲಸ ಮಾಡೋಣ” ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ. ಸವದಿ ದೊಡ್ಡ ಅಂತರದಲ್ಲಿ ಚುನಾವಣೆ ಗೆದ್ದಿದ್ದಾರೆ. ಅವರು ನಮ್ಮ ನಾಯಕರಾಗಿದ್ದಾರೆ. ಬಿಜೆಪಿಯವರು ಎಲ್ಲರನ್ನೂ ಸೆಳೆಯಲು ಪ್ರಯತ್ನ ಮಾಡುತ್ತಾರೆ. ನಮಗೆ ಗೊತ್ತಿದೆ, ಆ ಬಗ್ಗೆ ನಾನು ಮಾತನಾಡಲ್ಲ. ನಾವು ಮುಂದಾದರೆ ಎಷ್ಟು ಮನೆಗಳು ಖಾಲಿಯಾಗಬಹುದು ಎಂದು ಅವರು ಯೋಚನೆ ಮಾಡಲಿ” ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...