ಬಿಜೆಪಿಯಿಂದ ರಾಜಭವನ ದುರ್ಬಳಕೆ, ನಮ್ಮ ಸರ್ಕಾರ ಅಸ್ಥಿರಗೊಳಿಸಲು ಕೇಂದ್ರ ಪ್ರಯತ್ನ: ಸಿದ್ದರಾಮಯ್ಯ

Date:

ರಾಜ್ಯಪಾಲರು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಆರೋಪಿಸಿದರು.

ಅವರು ಇಂದು (ಆ.2) ಮೈಸೂರಿನಲ್ಲಿ ಕೊಡಗು ಜಿಲ್ಲೆಗೆ ತೆರಳುವ ಮುನ್ನ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಶೋಕಾಸ್ ನೋಟಿಸು ಕೊಟ್ಟಿರುವುದು ಕಾನೂನುಬಾಹಿರವಾಗಿದೆ. ಸಂವಿಧಾನಕ್ಕೆ ವಿರುದ್ಧವಾಗಿದೆ” ಎಂದರು.

“ಕೇಂದ್ರ ಸರ್ಕಾರವು ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ನೋಟಿಸನ್ನು ಹಿಂಪಡೆಯಬೇಕೆಂದು ರಾಜ್ಯಪಾಲರಿಗೆ ಸಲಹೆ ನೀಡಲು ನಿರ್ಧಾರ ಮಾಡಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾವುದೇ ಅಪರಾಧ ಮಾಡಿಲ್ಲ

“ಕೆ ಜೆ ಅಬ್ರಹಾಂ ಒಬ್ಬ ಬ್ಲಾಕ್ ಮೇಲರ್. ಆತನ ದೂರಿನ ಮೇಲೆ ಕ್ರಮ ಕೈಗೊಂಡಿರುವುದು ಕಾನೂನು ಬಾಹಿರ ವಿಚಾರ. ಆತ ಈ ರೀತಿ ಅನೇಕ ಜನರ ಮೇಲೆ ದೂರುಗಳನ್ನು ನೀಡಿದ್ದಾರೆ. ನಾನು ಯಾವುದೇ ಅಪರಾಧವನ್ನು ಮಾಡಿಲ್ಲ. 26-7.2024 ರಂದು 11.30ಕ್ಕೆ ದೂರು ನೀಡಿದ್ದು, ಅಂದೇ ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ. ಒಂದೇ ದಿನದಲ್ಲಿ ಕಾನೂನು ವಿಷಯವನ್ನು ಒಳಗೊಂಡ ವಿಚಾರವನ್ನು, 136 ಜನ ಶಾಸಕರನ್ನು ಜನ ಆಶೀರ್ವಾದ ಮಾಡಿ ಕಳಿಸಿರುವ ಚುನಾಯಿತ ಸರ್ಕಾರದ ಮುಖ್ಯಮಂತ್ರಿಗೆ ನೋಟಿಸ್‌ ಕೊಡುವಾಗ ಎಲ್ಲ ಕಾನೂನನ್ನು ಕೂಲಂಕುಷವಾಗಿ ಪರಿಶೀಲಿಸಬೇಕು” ಎಂದರು.

ಕಳೆದ ಸರ್ಕಾರದ ಸಚಿವರ ಮೇಲಿನ ದೂರಿನ ಬಗ್ಗೆ ಕ್ರಮ ಏಕಿಲ್ಲ?

“ಶಶಿಕಲಾ ಜೊಲ್ಲೆ , ಮುರುಗೇಶ್ ನಿರಾಣಿ , ಜನಾರ್ಧನ್ ರೆಡ್ಡಿಯವರುಗಳ ಮೇಲೆ ವರ್ಷಗಟ್ಟಲೇ ದೂರಿದೆ. ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ? ಏನೂ ಇಲ್ಲದೆ ಅನಗತ್ಯವಾಗಿ ಈ ರೀತಿ ಮಾಡುತ್ತಿದ್ದಾರೆ. ರಾಜ್ಯಪಾಲರಿಗೆ ಸಲಹೆ ನೀಡಬೇಕಿರುವುದು ನಮ್ಮ ಮಂತ್ರಿಮಂಡಲದವರು. ನಾವು ಸಲಹೆ ನೀಡಿಲ್ಲ. ಮುಖ ಕಾರ್ಯದರ್ಶಿಗಳು ವಿವರವಾದ ಪತ್ರವನ್ನು ಜುಲೈ 26 ರಂದು ಸಂಜೆ 6.30 ಗಂಟೆಗೆ ರಾಜ್ಯಪಾಲರಿಗೆ ತಲುಪಿಸಿದ್ದಾರೆ. ಅದನ್ನೂ ಅವರು ನೋಡಿಲ್ಲ ಅನ್ನಿಸುತ್ತೆ” ಎಂದು ಹೇಳಿದರು.

ಆರ್.ಅಶೋಕ್ ಹೆದರಿರಬೇಕು

ರಾಜ್ಯಪಾಲರು ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಹೆದರಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಅಶೋಕ್ ಅವರು ಹೆದರಿರಬಹುದು, ನನಗೆ ಯಾಕೆ ಹೆದರಿಕೆಯಾಗಬೇಕು. ಕಾನೂನಿನ ರೀತಿ ಅವರು ನೋಟಿಸ್‌ ನೀಡಿಲ್ಲ. ತಪ್ಪು ಮಾಡಿದ್ದರೆ ಹೆದರಬೇಕು. ನಾನು ತಪ್ಪೇ ಮಾಡಿಲ್ಲ” ಎಂದರು.

ಕುಮಾರಸ್ವಾಮಿ ಸ್ವ-ಇಚ್ಛೆ ಯಿಂದ ಪಾದಯಾತ್ರೆ ಮಾಡುತ್ತಿಲ್ಲ

“ಬಿಜೆಪಿ ಪಾದಯಾತ್ರೆ ಮಾಡುವ ಬಗ್ಗೆ ಅಭ್ಯಂತರವಿಲ್ಲ. ಹೆಚ್ ಡಿ ಕುಮಾರಸ್ವಾಮಿ ಈ ಪ್ರಕರಣದಲ್ಲಿ ಏನೂ ಇಲ್ಲ ಎಂದು ಪಾದಯಾತ್ರೆ ಬೇಡ ಎಂದಿದ್ದಾರೆ. ಕುಮಾರಸ್ವಾಮಿ ಸ್ವ ಇಚ್ಛೆಯಿಂದ ಪಾದಯಾತ್ರೆ ಮಾಡುತ್ತಿಲ್ಲ ಎಂದಾಯಿತು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...