ದಲಿತ ಸಚಿವರ ಮೇಲೆ ಕಳಂಕ ಹೊರಿಸಲು ಕಾಂಗ್ರೆಸ್‌ ಒಳಗೆ ಪಿತೂರಿ: ಛಲವಾದಿ ನಾರಾಯಣಸ್ವಾಮಿ

Date:

ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಘಟನೆಯಲ್ಲಿ ದಲಿತ ಶಾಸಕನ ಮನೆಗೆ ಬೆಂಕಿ ಹಾಕಿದ ಆರೋಪಿಗಳನ್ನು ಬಿಡುಗಡೆ ಮಾಡಲು ದಲಿತ ಗೃಹ ಸಚಿವರ ಮೇಲೆ ಒತ್ತಡ ತರಲಾಗಿದೆ. ಡಾ. ಜಿ ಪರಮೇಶ್ವರ್‌ ಅವರ ಮೇಲೆ ಕಳಂಕ ಹೊರಿಸಲು ಕಾಂಗ್ರೆಸ್ ಒಳಗೆ ಪಿತೂರಿ ನಡೆದಿದೆ ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ತನ್ವೀರ್ ಸೇಠ್ ಬರೆದ ಪತ್ರವನ್ನು ಸರ್ಕಾರಕ್ಕೆ ಕಳಿಸಿದ್ದು, ಪತ್ರ ವಾಪಸ್ ಪಡೆಯಲು ಆಗ್ರಹಿಸಿದರು. ಇದರಲ್ಲಿ ಗೃಹ ಸಚಿವರನ್ನು ಸಿಲುಕಿಸುವ ಯತ್ನ ನಡೆದಿದೆ. ತಪ್ಪಿತಸ್ಥರ ಬಿಡುಗಡೆಗೆ ಸೂಚಿಸಿದರೆ ಪಾಪ ಮಾಡಿದಂತಾಗುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

“ಘಟನೆ ನಡೆದಾಗ ಬಿಜೆಪಿ ನೇತೃತ್ವದ ಸರ್ಕಾರವು ಅರವಿಂದ ಲಿಂಬಾವಳಿ, ಗುತ್ತೇದಾರ್, ಶಂಕರಪ್ಪ, ನಾನು ಮತ್ತು ಕೆಲವರಿದ್ದ ಸತ್ಯಶೋಧನಾ ಸಮಿತಿ ಕಳಿಸಿತ್ತು. ನಾವು ಭಯಾನಕ ಘಟನೆ ಕುರಿತು ವರದಿ ನೀಡಿದ್ದೆವು. ಕಾಂಗ್ರೆಸ್‌ನ ಸತ್ಯಶೋಧನಾ ಸಮಿತಿಯ ಅಧ್ಯಕ್ಷತೆಯನ್ನು ಈಗಿನ ಗೃಹ ಸಚಿವ ಪರಮೇಶ್ವರ್‌ ಅವರೇ ವಹಿಸಿದ್ದರು. ಸ್ಪಷ್ಟ ಪ್ರಾಥಮಿಕ ಮಾಹಿತಿ ಅವರಿಗೂ ಇದೆ. ಆದರೆ, ಮರುಪರಿಶೀಲನೆಗೆ ಸೂಚಿಸುವ ಮೂಲಕ ದ್ರೋಹದ ಕೆಲಸವನ್ನು ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಸನ್ನು ರಾಜ್ಯ ಸರ್ಕಾರ ಹಿಂಪಡೆದರೆ ಕೇಂದ್ರ ಸರ್ಕಾರವು ಸ್ವಯಂಪ್ರೇರಣೆಯಿಂದ ಈ ಪ್ರಕರಣವನ್ನು ಸಿಬಿಐಗೆ ತನಿಖೆಗೆ ಒಪ್ಪಿಸಬೇಕು” ಎಂದು ಆಗ್ರಹಿಸಿದರು.

“ಗಲಭೆ ಕೇವಲ ಶಾಸಕರ ಮನೆಗೆ ಸೀಮಿತ ಆಗಿರಲಿಲ್ಲ. ಪೊಲೀಸ್ ಠಾಣೆಗೂ ಬೆಂಕಿ ಹಚ್ಚಲಾಗಿತ್ತು. ನಂತರ ಪೊಲೀಸ್ ವ್ಯಾನ್‍ಗಳು, 25 ರಿಂದ 30 ವಾಹನಗಳನ್ನು ಸುಟ್ಟು ಭಸ್ಮ ಮಾಡಲಾಗಿತ್ತು. ಅಂದಿನ ನಮ್ಮ ಸರ್ಕಾರದ ಕ್ರಮದಿಂದ ಎಫ್‍ಐಆರ್ ಆಗಿ, ಆರೋಪಿಗಳನ್ನು ಬಂಧಿಸಲಾಗಿತ್ತು. ಪ್ರಕರಣ ದಾಖಲಾಗಿತ್ತು. ಅನೇಕರು ಇದೀಗ ಜಾಮೀನಿನಡಿ ಹೊರಕ್ಕೆ ಬಂದಿದ್ದಾರೆ” ಎಂದು ತಿಳಿಸಿದರು.

“ಸುಮಾರು 200 ಜನರನ್ನು ಬಂಧಿಸಿದ್ದು, ಪ್ರಕರಣದಲ್ಲಿ ಭಾಗವಹಿಸದೆ ಇರುವ ಅನೇಕರನ್ನು ಅಂದೇ ಬಿಡುಗಡೆ ಮಾಡಲಾಗಿತ್ತು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕಿತ್ತು. ಈಗ ಗೃಹ ಸಚಿವ ಡಾ. ಪರಮೇಶ್ವರ್‌ ಮೇಲೆ ಒತ್ತಡ ಇರುವುದು ಸ್ಪಷ್ಟ. ಈ ಒತ್ತಡಕ್ಕೆ ಅವರು ಮಣಿಯಬಾರದಿತ್ತು. ಬೆಂಕಿ ಹಾಕಿದವರು ಅಮಾಯಕರಾಗಿದ್ದರೆ ಇದು ಹಾಸ್ಯಾಸ್ಪದ” ಎಂದು ಕಿಡಿ ಕಾರಿದರು.

ಈ ಸುದ್ದಿ ಓದಿದ್ದೀರಾ? ಡಿಜೆ ಹಳ್ಳಿ, ಕೆಜಿ ಹಳ್ಳಿ ಸೇರಿ ಇತರೆ ಹಿಂಸಾಚಾರ ಪ್ರಕರಣ ಪರಿಶೀಲಿಸಿ, ಹಿಂಪಡೆಯಲು ಗೃಹ ಸಚಿವ ಪರಮೇಶ್ವರ್‌ ಸೂಚನೆ

ತನ್ವೀರ್ ಸೇಠ್ ಉಗ್ರಗಾಮಿ ಸಂಘಟನೆ ಮುಖ್ಯಸ್ಥ: ಎಸ್ ಮುನಿಸ್ವಾಮಿ ಆರೋಪ

ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ಗಲಭೆ ಸೇರಿದಂತೆ ಇತರೆ ಕೋಮು ಗಲಭೆ ಕೇಸ್‌ಗಳಲ್ಲಿ ಬಂಧಿತರಾಗಿರುವವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರಿಗೆ ಪತ್ರ ಬರೆದಿರುವ ಶಾಸಕ ತನ್ವೀರ್ ಸೇಠ್ ಉಗ್ರಗಾಮಿ ಸಂಘಟನೆ ಮುಖ್ಯಸ್ಥ ಎಂದು ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಕೋಲಾರದಲ್ಲಿ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಮುನಿಸ್ವಾಮಿ, “ದೇಶಕ್ಕಾಗಿ ಸ್ವಾತಂತ್ರ್ಯ ಹೋರಾಟ ಮಾಡಿದವರ ಮೇಲೆ ಕೇಸ್‌ಗಳನ್ನು ಹಾಕಿದ್ದಾರೆ. ಸುಮಾರು 70 ರಿಂದ 80 ವರ್ಷಗಳಿಂದ ಇರುವವರ ಮೇಲಿನ ಪ್ರಕರಣಗಳನ್ನೇ ಇದುವರೆಗೂ ವಾಪಸ್ ತಗೊಂಡಿಲ್ಲ. ಇಂಥ ಸಂದರ್ಭದಲ್ಲಿ ಉಗ್ರಗಾಮಿ ಚಟುವಟಿಕೆಗಳಲ್ಲಿ ಇದ್ದು, ದೇಶವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿ, ಪೊಲೀಸರ ಜೀಪುಗಳಿಗೆ ಬೆಂಕಿ ಹಚ್ಚಿರುವವರ ಮೇಲಿನ ಕೇಸುಗಳನ್ನು ವಾಪಸ್ ತೆಗದುಕೊಳ್ಳಲು ಮುಂದಾಗಿದ್ದಾರೆ” ಎಂದು ಕಿಡಿ ಕಾರಿದರು.

“ಅವರದೇ ಸಂಘಟನೆ ಮುಖಂಡರು ಅವರನ್ನು ಕೊಲೆ ಮಾಡುವುದಕ್ಕೂ ಪ್ರಯತ್ನ ಪಟ್ಟಿದ್ದರು. ಅದನ್ನು ಸರಿ ಮಾಡಿಕೊಳ್ಳಲು, ಹೊಂದಾಣಿಕೆ ಮಾಡಿಕೊಳ್ಳಲು ಇವರ ಕೇಸುಗಳನ್ನು ವಾಪಸ್ ತೆಗೆಸಿದರೆ ನನ್ನನ್ನು ಬಿಟ್ಟು ಬಿಡ್ತಾರೆ ಎಂದುಕೊಂಡಿದ್ದಾರೆ. ತನ್ವೀರ್ ಸೇಠ್ ಅವರೇ, ನೀವು ಜೀವನ ಮಾಡುತ್ತಿರುವುದು ಭಾರತ ದೇಶದಲ್ಲಿ. ದೇಶವಿರೋಧಿಗಳು ಯಾರೇ ಇದ್ದರೂ ಅಂತಹವರ ಮೇಲಿನ ಕೇಸ್‌ಗಳನ್ನು ವಾಪಸ್ ತೆಗೆಸಿ ಎಂದು ಹೇಳುತ್ತಿರುವ ನಿಮಗೆ ನಾಚಿಕೆ ಆಗುವುದಿಲ್ಲವೆ? ನಿಮಗೆ ಜನ ಸತ್ಕಾರ ಮಾಡುವುದಿಲ್ಲ, ತಿರಸ್ಕಾರ ಮಾಡ್ತಾರೆ” ಎಂದು ತನ್ವೀರ್ ಸೇಠ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...