ಯಡಿಯೂರಪ್ಪ, ವಿಜಯೇಂದ್ರಗೆ ನೇರ ಎಚ್ಚರಿಕೆ ನೀಡಿದ ಶಾಸಕ ಯತ್ನಾಳ್

Date:

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೇರವಾಗಿ ಎಚ್ಚರಿಕೆ ನೀಡಿದ್ದಾರೆ.

ವಿಜಯಪುರ ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿ, “ನನ್ನನ್ನು ಮುಗಿಸಲು ಏನೇನು ಕುತಂತ್ರ ಮಾಡಿದ್ದಾರೆ ಎನ್ನುವುದು ನನಗೆ ಚೆನ್ನಾಗಿ ಗೊತ್ತಿದೆ. ಸುಮ್ಮನೆ ಇದ್ದರೆ ಲೇಸು, ಇಲ್ಲವಾದರೆ ನಮಗೂ ಆಟ ಆಡಲು ಬರುತ್ತದೆ” ಎಂದಿದ್ದಾರೆ.

“ಯಡಿಯರಪ್ಪ, ವಿಜಯೇಂದ್ರ ವಿರುದ್ಧ ಬಹಳ ದೊಡ್ಡ ಮಟ್ಟದಲ್ಲಿ ಅಸಮಾಧಾನದ ಅಲೆ ಸದ್ಯದಲ್ಲೇ ಏಳಲಿದೆ. ಸೋತ ಎಂಪಿಗಳು ಹೇಳಿಕೆ ನೀಡಲು ಪ್ರಾರಂಭಿಸಿದ್ದಾರೆ. ಅಲ್ಲಲ್ಲಿ ಆಟಂಬಾಂಬ್ ಗಳು ಬೀಳುತ್ತಿವೆ. ದಾವಣಗೆರೆಯಲ್ಲಿ ನಿನ್ನೆ ಬಿದ್ದಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಂದೆ ಕೊಪ್ಪಳದಲ್ಲಿ ಬೀಳುತ್ತದೆ. ನಂತರ ಬಳ್ಳಾರಿ, ಆಮೇಲೆ ರಾಯಚೂರು. ಎಲ್ಲೆಲ್ಲಿ ಸೋತಿದ್ದಾರಲ್ಲ, ಅದಕ್ಕೆ ಕಾರಣ ಯಾರು ಎನ್ನುವುದನ್ನು ವಿಜಯೇಂದ್ರ ಹೇಳಬೇಕು. ಯತ್ನಾಳ್ ಹಿರಿಯರು ಎನ್ನುವ ಡೈಲಾಗ್ ಎಲ್ಲ ಬಿಟ್ಟುಹಾಕಿ. ನನ್ನ ಜೊತೆ ಆಟವಾಡಲು ಬಂದರೆ ನಾನೂ ಆಟವಾಡುವೆ” ಎಂದು ಎಚ್ಚರಿಸಿದ್ದಾರೆ.

“ಬಿಜೆಪಿಯ ಶುದ್ಧೀಕರಣ ಆಗಬೇಕಿದೆ. ಈಶ್ವರಪ್ಪನವರಿಗೆ ಅನ್ಯಾಯ ಮಾಡಿದರು. ಅವರು ಏನು ತಪ್ಪು ಮಾಡಿದ್ದರು. ಆರೋಪ ಬಂದಾಗ ರಾಜೀನಾಮೆ ಕೊಟ್ಟಿದ್ದರು. ಪ್ರಧಾನ ಮಂತ್ರಿಯವರ ಒಂದೇ ಮಾತಿಗೆ ಬೆಲೆ ಕೊಟ್ಟು ವಿಧಾನಸಭಾ ಚುನಾವಣೆಗೆ ಅವರು ನಿಂತಿರಲಿಲ್ಲ. ಪಕ್ಷಕ್ಕಾಗಿ ಕೆಲಸ ಮಾಡಿದರು. ಆದರೆ ಈಶ್ವರಪ್ಪ ಹಾಗೂ ಒಳ್ಳೆಯವರನ್ನೆಲ್ಲಾ ಹೊರಗೆ ಹಾಕಿದ್ದಾರೆ. ಒಂದು ಕುಟುಂಬದ ಪಕ್ಷವಾಗಲು ನಾನಂತೂ ಬಿಡುವುದಿಲ್ಲ” ಎಂದು ಹೇಳಿದರು.

ಮುಡಾ ಹಗರಣಕ್ಕೆ ಸಂಬಂಧಿಸಿ ವಿಜಯೇಂದ್ರ ಅವರ ವರ್ತನೆಯ ವಿರುದ್ಧವೂ ಅವರು ಹರಿಹಾಯ್ದರು. ಸಿದ್ದರಾಮಯ್ಯ ಒಬ್ಬರನ್ನೇ ಟಾರ್ಗೆಟ್ ಮಾಡಬೇಡಿ. ಸಿದ್ದರಾಮಯ್ಯ ವಿರುದ್ಧ ಹೋರಾಟವಲ್ಲ. ಕಾಂಗ್ರೆಸ್ ವಿರುದ್ಧ ಹೋರಾಟ ಎಂದು ವಿಜಯೇಂದ್ರ ಅವರು ಹೇಳುತ್ತಾರೆ. ಹಾಗಿದ್ದರೆ ಸಿದ್ದರಾಮಯ್ಯನವರು ಬಿಜೆಪಿನಾ ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...