ಕಲಬುರಗಿ | ಮೋದಿ-ಅಮಿತ್ ಶಾ ಬಳಿ ಮನುಷ್ಯರನ್ನು ಶುದ್ಧಗೊಳಿಸಬಲ್ಲ ವಾಷಿಂಗ್ ಮಷೀನ್ ಇದೆ : ಮಲ್ಲಿಕಾರ್ಜುನ ಖರ್ಗೆ

Date:

ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಬಳಿ ವಾಷಿಂಗ್ ಮಷೀನ್ ಎಂಬ ದೊಡ್ಡ ಯಂತ್ರವಿದೆ. ಇದು ಎಷ್ಟು ದೊಡ್ಡ ಯಂತ್ರವೆಂದರೆ ಅದು ಬಟ್ಟೆಗಳನ್ನು ಮಾತ್ರವಲ್ಲ; ಮನುಷ್ಯರನ್ನು ಕೂಡ ಶುದ್ಧಗೊಳಿಸಬಲ್ಲದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ನಾಮಪತ್ರ ಸಲ್ಲಿಸಿದ ಬಳಿಕ ನಗರದ ಎನ್.‌ ವಿ.ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ಒಮ್ಮೆ ಬಿಜೆಪಿ ಸೇರಿದರೆ ಸಾಕು ವಾಷಿಂಗ್‌ ಮಷೀನ್ ಯಂತ್ರದ ಮೂಲಕ ಹಾದು ಎಲ್ಲರೂ ಪರಿಶುದ್ಧರಾಗುತ್ತಾರೆ. ಭ್ರಷ್ಟತೆಯ ಆರೋಪದ ಮೇಲೆ ಜೈಲಿಗೆ ಕಳುಹಿಸಲ್ಪಟ್ಟವರು, ಭ್ರಷ್ಟಾಚಾರ ಆರೋಪ ಪ್ರಕರಣ ದಾಖಲಾದವರು, ನೀವೇ ಜೈಲಿಗೆ ಕಳಿಸದವರೆಲ್ಲಾ ನಿಮ್ಮ ಪಕ್ಷಕ್ಕೆ ಸೇರಿದ ಮೇಲೆ ಅದು ಹೇಗೆ ಪರಿಶುದ್ಧರಾಗುತ್ತಾರೆ?‌” ಎಂದು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೋದಿ ಭ್ರಷ್ಟರನ್ನು ಎಂದಿಗೂ ಬಿಡುವುದಿಲ್ಲ ಎನ್ನುತ್ತಾರೆ. ಆದರೆ ಭ್ರಷ್ಟರು ಅವರ ಹೆಗಲ ಮೇಲೆಯೇ ಕುಳಿತಿದ್ದಾರೆ. ಅಂಥವರನ್ನು ನೀವು ಸಿಎಂ ಮಾಡುತ್ತೀರಿ. ಕರ್ನಾಟಕ, ಗೋವಾ, ಮಧ್ಯಪ್ರದೇಶ, ಮಹಾರಾಷ್ಟ್ರದಲ್ಲಿ ನೀವು ಇದನ್ನೇ ಮಾಡಿದ್ದೀರಿ. ಇದೇ ಮೋದಿ ಮತ್ತು ಶಾ ರ ಪ್ರಜಾಸತ್ತಾತ್ಮಕ ತತ್ವಗಳು” ಎಂದು ಕುಟುಕಿದರು.

ನಮ್ಮ ಭಾಗಕ್ಕೆ ಪ್ರಧಾನಿ ಮಂತ್ರಿಗಳು ಬರುವುದೇ ತುಂಬಾ ಕಡಿಮೆ, ಆದರೆ ಪ್ರಧಾನಿ ಮೋದಿ ಪದೇ ಪದೇ ಇಲ್ಲಿ ಬಂದು ಹೋಗಿದ್ದಾರೆ. ಹೊರತು ಹತ್ತು ವರ್ಷದ ಕೇಂದ್ರ ಬಿಜೆಪಿ ಆಡಳಿತ ಅವಧಿಯಲ್ಲಿ ಈ ಭಾಗಕ್ಕೆ ಏನು ಕೊಟ್ಟಿದ್ದಾರೆ ಎಂಬುದು ಮುಖ್ಯವಾಗಿದೆ. ನಾವು 371(J) ವಿಧಿಯನ್ನು ಜಾರಿಯಾದ ಬಳಿಕ ಈ ಭಾಗದ ಕೇಂದ್ರ ಸರ್ಕಾರ ಯಾವ ಅಭಿವೃದ್ಧಿ ಕಾರ್ಯಗಳನ್ನು ಕೈಗೆೊಂಡಿದೆ, ಯಾವ ಕಾರ್ಖಾನೆಗಳನ್ನು ತಂದಿದೆ ಹಾಗೂ ಯಾವ ಹೊಸ ಮೂಲಸೌಕರ್ಯ ಯೋಜನೆಗಳನ್ನು ಮಂಜೂರು ಮಾಡಿದೆ ಎಂಬುದನ್ನು ತಿಳಿಸಬೇಕು” ಎಂದರು.

“ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಇಲ್ಲಿ ನಡೆಯುತ್ತಿದ್ದ ಸಾಮಾನ್ಯ ಅಭಿವೃದ್ಧಿ ಕಾಮಗಾರಿಗಳನ್ನೂ ನಿಲ್ಲಿಸಿದ್ದಾರೆ. ಯಾದಗಿರಿಯಲ್ಲಿ ನಮ್ಮ ರೈಲ್ವೇ ಕೋಚ್ ಫ್ಯಾಕ್ಟರಿ ನಿಂತಿತು. ಅಲ್ಲಿ ಈಗ ಕೇವಲ 200-300 ಜನರು ಕೆಲಸ ಮಾಡುತ್ತಿದ್ದಾರೆ. ಕನಿಷ್ಠ 2,000 ಜನರಿಗೆ ಉದ್ಯೋಗ ಕಲ್ಪಿಸಲು ನಾನು ಆ ಕಾರ್ಖಾನೆಯನ್ನು ಆರಂಭಿಸಿದ್ದೆ. ಆದರೆ ಅವರು ಈ ಕಾರ್ಖಾನೆಯನ್ನು ಮುಂದುವರಿಸಲಿಲ್ಲ ಬದಲಿಗೆ ನಿಲ್ಲಿಸಿದರು. ನಾನು ಪ್ರಧಾನಿಯವರನ್ನು ಭೇಟಿಯಾದಾಗ ಈ ಭಾಗದಲ್ಲಿ ಅಭಿವೃದ್ಧಿ ಮೂಲಕ ಬದಲಾವಣೆ ತರಲು ಅವರಿಗೆ ಮನವಿ ಸಲ್ಲಿಸಿದರೂ ಸ್ಪಂದಿಸಲಿಲ್ಲ” ಎಂದರು.

ಕಲಬುರಗಿಯಲ್ಲಿ ಇಎಸ್‌ಐ ಆಸ್ಪತ್ರೆ ಇದೆ. ಇದು ಕಾರ್ಮಿಕರು, ಬಡವರು, ದಿನಗೂಲಿ ಕಾರ್ಮಿಕರು ಮುಂತಾದ ಇಎಸ್‌ಐ ಕೊಡುಗೆದಾರರಿಗೆ ದೊಡ್ಡ ಮಟ್ಟದಲ್ಲಿ ಉಪಯೋಗಕಾರಿಯಾಗಿದೆ. ಇದನ್ನು ದೆಹಲಿಯ ಏಮ್ಸ್ ನಂತೆ ಮೇಲ್ದರ್ಜೆಗೆ ಏರಿಸಬೇಕು ಎಂದರೂ ಸ್ಪಂದಿಸಲಿಲ್ಲ. ಕೇಂದ್ರ ಸರ್ಕಾರ, ಕರ್ನಾಟಕ, ಕಲ್ಯಾಣ ಕರ್ನಾಟಕಕ್ಕಾಗಿ ಯಾವುದೇ ಕೆಲಸ ಮಾಡಿಲ್ಲ. ಕಳೆದ ಐದು ವರ್ಷದಲ್ಲಿ ಕರ್ನಾಟಕಕ್ಕೆ ನನ್ನ ಕೊಡುಗೆಯ 10 ಪೈಸೆಯಷ್ಟಾದರೂ ಅವರು ಕೊಡುಗೆ ನೀಡಿದ್ದಾರಾ” ಎಂದು ಸವಾಲು ಹಾಕಿದರು.

“ಎಲ್ಲ ಕಡೆಗಳಲ್ಲಿ ಮೋದಿಯವರು ನಮ್ಮ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿನೇ ನಕಲು ಮಾಡಿ ಮೋದಿ ಗ್ಯಾರಂಟಿ ಎಂದು ಪ್ರಚಾರ ಮಾಡುತ್ತಿದ್ದಾರೆ. ಮೋದಿಯವರೇ ನಿಮ್ಮ ಗ್ಯಾರಂಟಿ ಎಲ್ಲಿದೆ?. ವರ್ಷಕ್ಕೆ ಎರಡು ಕೋಟಿ ಉದ್ಯೋಗ, ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಣ, ರೈತರ ಆದಾಯ ದುಪ್ಪಟ್ಟು ಮಾಡುತ್ತೇನೆ ಎಂದು ಹೇಳಿದ್ದರು, ಮಾಡಿದ್ದಾರಾ? ಎಂದು ಪ್ರಶ್ನಿಸಿದರು.

“ಈ ಚುನಾವಣೆಯು ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ನಡೆಯುತ್ತಿದ್ದು ಬಿಜೆಪಿಗೆ ಮತ ನೀಡಿದರೆ ಮೋದಿ ಅವರು ಎಲ್ಲಾ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ಪ್ರಜಾಪ್ರಭುತ್ವ ನಾಶಪಡಿಸುತ್ತಾರೆ. ಈಗಾಗಲೇ ಮೋದಿ ಅವರು ಎಲ್ಲಾ ಸಂಘಟನೆಗಳನ್ನು ನಾಶ ಮಾಡಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

“ಎಲ್ಲ ಸರ್ಕಾರಿ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರನ್ನು ನೇಮಿಸಿಕೊಂಡು ಇತರರನ್ನು ನಿರುದ್ಯೋಗಿಗಳು ಮತ್ತು ಶಕ್ತಿ ಹೀನರನ್ನಾಗಿ ಮಾಡಿದ್ದಾರೆ. ಪ್ರಜಾಪ್ರಭುತ್ವವನ್ನು ಉಳಿಸಬೇಕು, ಡಾ. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ರಕ್ಷಿಸಲು ಮತ್ತು ಸ್ಥಳೀಯ ಅಭಿವೃದ್ಧಿ ಆಗಬೇಕಾದರೆ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಿ” ಎಂದು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...