ಮೋದಿ ತಮ್ಮನ್ನು ತಾವೇ ದೇವದೂತ ಎನ್ನುತ್ತಿರುವುದು ಮೂಢನಂಬಿಕೆಯ ಸ್ಪಷ್ಟ ಹೆಜ್ಜೆ: ಸಚಿವ ಹೆಚ್ ಸಿ ಮಹದೇವಪ್ಪ

Date:

ಬುದ್ಧ ಹುಟ್ಟಿದ ನಾಡಿನಲ್ಲಿ, ವಿಜ್ಞಾನ ತಂತ್ರಜ್ಞಾನವು ಇಷ್ಟೊಂದು ಮುಂದುವರೆದ ಕಾಲದಲ್ಲಿ ಪ್ರಧಾನಿ ಆಗಿರುವ ಮೋದಿಯವರು ತಾನೊಬ್ಬ ದೇವದೂತ ಎಂದು ಬಹಿರಂಗವಾಗಿ ಹೇಳುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ ಸಂಗತಿ ಎಂದು ಸಚಿವ ಹೆಚ್‌ ಸಿ ಮಹದೇವಪ್ಪ ಹೇಳಿದ್ದಾರೆ.

ಈ ಕುರಿತು ಅವರು ಮಾಧ್ಯಮ ಪ್ರಕಟಣೆ ಹೊರಡಿಸಿ, “ಪ್ರಧಾನಿಗಳು ಜನ ಸಾಮಾನ್ಯರ ದೂತರೇ ಹೊರತು, ದೇವದೂತರಲ್ಲ ಎಂಬುದನ್ನು ಅಧಿಕಾರದ ಕೊನೆಯ ಹಂತದಲ್ಲಿರುವ ಪ್ರಧಾನಿಗಳು ಅರ್ಥ ಮಾಡಿಕೊಳ್ಳಬೇಕು” ಎಂದಿದ್ದಾರೆ.

“ಇನ್ನು ವಿದೇಶಕ್ಕೆ ಹೋದಾಗಲೆಲ್ಲಾ ತಾನು ಬುದ್ಧನ ನಾಡಿನಿಂದ ಬಂದಿದ್ದೇನೆ ಎಂದು ಹೇಳಿಕೊಳ್ಳುವ ಪ್ರಧಾನಿಗಳು ಬುದ್ಧ ಹೇಳಿದ ವಿಚಾರಗಳನ್ನು ಓದಿ ತಿಳಿದುಕೊಳ್ಳಬೇಕು. ಇಲ್ಲದೇ ಇದ್ದಾಗ ಇಂತಹದ್ದೇ ಅರ್ಥವಿಲ್ಲದ, ಮೂಢನಂಬಿಕೆಯ ಮಾತುಗಳನ್ನೇ ಜನರು ಕೇಳಬೇಕಾಗುತ್ತದೆ” ಎಂದು ಕುಟುಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಮಾನತೆ , ಸಾಮರಸ್ಯ ಮತ್ತು ಸೌಹಾರ್ದತೆಯ ಶತ್ರುವಾದ ಮೂಢನಂಬಿಕೆಯ ಮಾತುಗಳು ಪ್ರಜಾಪ್ರಭುತ್ವದ ಶತ್ರುಗಳು ಎಂಬುದನ್ನು ನಾನು ಮತ್ತೊಮ್ಮೆ ಹೇಳಬಯಸುತ್ತೇನೆ” ಎಂದಿದ್ದಾರೆ.

“ಬುದ್ದ ಪ್ರಪಂಚದ ಶ್ರೇಷ್ಠ ಸಂತ. ಆತನ ಬೋಧನೆಗಳ ಕುರಿತು ವಿಶ್ವದ ಮಹಾನ್ ವಿಜ್ಞಾನಿ ಆಲ್ಬರ್ಟ್ ಐನ್ ಸ್ಟೀನ್ ಅವರು ” ಮನುಕುಲದ ಉದ್ಧಾರಕ್ಕೆ ವಿಜ್ಞಾನವು ಅಗತ್ಯವಾಗಿರುವ ಹಾಗೆ ಮನುಕುಲದ ಉದ್ಧಾರಕ್ಕೆ ಬುದ್ಧನ ಉಪದೇಶಗಳೂ ಕೂಡಾ ಅಷ್ಟೇ ಉಪಯುಕ್ತವಾಗಿವೆ” ಎಂದು ಹೇಳುತ್ತಾರೆ. ಮನುಕುಲದ ಉದ್ಧಾರಕ್ಕಾಗಿ ಬಂದ ಬುದ್ಧ ಸ್ವಾರ್ಥಿಯಾಗದೇ ಮನುಷ್ಯರೆಲ್ಲರೂ ಸಮಾನರು ಎಂದು ಹೇಳಿ ಜಗದ ಕಣ್ಣು ತೆರೆಸಿದಾತ. ಎಲ್ಲರೂ ಆತನನ್ನು ದೇವರೆಂದು ಕರೆದರೂ ಕೂಡಾ ಆ ಕೂಗನ್ನು ಬದಿಗೊತ್ತಿ ಬಹಳಷ್ಟು ಸರಳವಾಗಿ ಜೀವಿಸಿದ್ಧ ಮಹಾವ್ಯಕ್ತಿ” ಎಂದು ಸ್ವಾಮಿ ವಿವೇಕಾನಂದರು ಹೇಳುತ್ತಾರೆ” ಎಂದು ತಿಳಿಸಿದ್ದಾರೆ.

“ಸ್ವತಃ ಗೌತಮ ಬುದ್ಧರೇ, ಎಷ್ಟೋ ಸಲ ಮಾತನಾಡುತ್ತಾ, ನಾನು ದೇವರೂ ಅಲ್ಲ, ದೇವದೂತನೂ ಅಲ್ಲ ಮಂತ್ರವಾದಿಯೂ ಅಲ್ಲ, ನಾನೂ ಕೂಡಾ ನಿಮ್ಮಂತೆಯೇ ಒಬ್ಬ ಮಹಾನ್ ವ್ಯಕ್ತಿ ಎಂದು ಅವರು ಹೇಳಿದ್ದರು. ಇದರ ಜೊತೆಗೆ ಬುದ್ಧನ ಬೋಧನೆಗಳೂ ಕೂಡಾ ಮೌಢ್ಯಕ್ಕೆ ವಿರುದ್ಧವಾಗಿ, ವೈಚಾರಿಕತೆಯ ಸಂದೇಶವನ್ನು ಸಾರುವಂತಹ ನಿಟ್ಟಿನಲ್ಲೇ ಸದಾ ಇವೆ” ಎಂದಿದ್ದಾರೆ.

ಇದನ್ನು ಓದಿದ್ದೀರಾ? ‘ಶಕ್ತಿ’ ಯೋಜನೆಯಿಂದ ಧರ್ಮಸ್ಥಳಕ್ಕೆ ಭಕ್ತರ ಸಂಖ್ಯೆ ಹೆಚ್ಚಳ; ಸಿಎಂ, ಡಿಸಿಎಂ ಸಂತಸ

“ಜನರಿಗೆ ನಿರಂತರವಾಗಿ ಸಹಾಯ ಮಾಡಿ ಅವರಿಂದಲೇ ಭಗವಾನ್ ಎಂದು ಕರೆಸಿಕೊಂಡ ಗೌತಮ ಬುದ್ಧರೇ ತನ್ನನ್ನು ತಾನು ಎಲ್ಲರಂತೆಯೇ ಸಾಮಾನ್ಯ ಎಂದು ಹೇಳಿಕೊಂಡಿರುವಾಗ ಜನರ ಬದುಕಿಗೆ ಎಲ್ಲ ರೀತಿಯಲ್ಲೂ ತೊಂದರೆ ಉಂಟು ಮಾಡಿ, ಅಸಮಾತೆಯ ಸಮಾಜದ ನಿರ್ಮಾಣದ ದಿಕ್ಕಿನೆಡೆ ಆಡಳಿತ ನಡೆಸಿರುವ ಮೋದಿಯವರು ತಮ್ಮನ್ನು ತಾವೇ ದೇವದೂತ ಎನ್ನುತ್ತಿರುವುದು ಮೂಢನಂಬಿಕೆಯ ಸಮಾಜದ ನಿರ್ಮಾಣದ ಸ್ಪಷ್ಟ ಹೆಜ್ಜೆ ಆಗಿದೆ” ಎಂದು ಟೀಕಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...