‘ವ್ಯಾಪಾರ ಒಪ್ಪಂದ ನಿಭಾಯಿಸಿ, ದೇಶ ರಕ್ಷಿಸುವಲ್ಲಿ ಮೋದಿ ಸರ್ಕಾರ ವಿಫಲ’

Date:

ಅಮೆರಿಕ ವಿಧಿಸಿದ ಹೆಚ್ಚುವರಿ ಸುಂಕಗಳು ಬುಧವಾರ ಜಾರಿಗೆ ಬಂದಿವೆ. ಈ ಬೆನ್ನಲ್ಲೇ, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ. ನರೇಂದ್ರ ಮೋದಿ ಅವರು ವ್ಯಾಪಾರ ಒಪ್ಪಂದವನ್ನು ನಿಭಾಯಿಸಲು ಮತ್ತು ದೇಶವನ್ನು ರಕ್ಷಿಸಲು ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

“ದುಬಾರಿ ಸುಂಕಗಳ ಮೊದಲ ಹೊಡೆತದಿಂದಲೇ ಕನಿಷ್ಠ 10 ವಲಯಗಳು 2.17 ಲಕ್ಷ ಕೋಟಿ ರೂ. ನಷ್ಟ ಅನುಭವಿಸ ಸಾಧ್ಯತೆ ಇದೆ. ಮೇಲ್ನೋಟದ ವಿದೇಶಾಂಗ ನೀತಿಯ ಪ್ರವೃತ್ತಿಗಳು (ನಗು, ಅಪ್ಪುಗೆ ಹಾಗೂ ಸೆಲ್ಫಿಗಳು) ರಾಷ್ಟ್ರೀಯ ಹಿತಾಸಕ್ತಿಗೆ ಹಾನಿ ಮಾಡಿವೆ” ಎಂದು ಹೇಳಿದ್ದಾರೆ.

“ಮೋದಿ ಅವರ ಆತ್ಮೀಯ ಸ್ನೇಹಿತ ‘ಅಬ್ಕಿ ಬಾರ್, ಟ್ರಂಪ್ ಸರ್ಕಾರ್’ ಭಾರತದ ಮೇಲೆ 50% ಸುಂಕಗಳನ್ನು ವಿಧಿಸಿದ್ದಾರೆ. ನಮ್ಮ ರೈತರು, ವಿಶೇಷವಾಗಿ ಹತ್ತಿ ಬೆಳೆವ ರೈತರು ತೀವ್ರವಾಗಿ ಹಾನಿಗೊಳಗಾಗಿದ್ದಾರೆ. ಅವರನ್ನು ರಕ್ಷಿಸಲು ಯಾವುದೇ ಕ್ರಮಕ್ಕೂ ಸಿದ್ದವೆಂದು ಮೋದಿ ಹೇಳಿದ್ದರು. ಆದರೆ, ಈ ನಷ್ಟವನ್ನು ತಡೆಯಲು ಮತ್ತು ರೈತರ ಜೀವನೋಪಾಯವನ್ನು ರಕ್ಷಿಸಲು ನೀವು (ಮೋದಿ) ಏನನ್ನೂ ಮಾಡಿಲ್ಲ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಾಗತಿಕ ವ್ಯಾಪಾರ ಸಂಶೋಧನಾ ಕಾರ್ಯಕ್ರಮ (GTRI) ವರದಿಯ ಪ್ರಕಾರ, ಟ್ರಂಪ್‌ ಹೇರಿರುವ ಸುಂಕವು GDPಯಲ್ಲಿ ಸುಮಾರು 1%ರಷ್ಟು ಕುಸಿತಕ್ಕೆ ಕಾರಣವಾಗಬಹುದು. ಇದರಿಂದ, ಚೀನಾ ಪ್ರಯೋಜನ ಪಡೆಯುತ್ತದೆ. MSMEಗಳು ಸೇರಿದಂತೆ ಹಲವಾರು ರಫ್ತುಆಧಾರಿತ ಪ್ರಮುಖ ವಲಯಗಳು ಭಾರಿ ಉದ್ಯೋಗ ನಷ್ಟ ಅನುಭವಿಸುತ್ತವೆ” ಎಂದು ಅವರು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಅಂಬಾನಿಯ ವಂತಾರ ಮೃಗಾಲಯದ ಕಾರ್ಯಾಚರಣೆ ತನಿಖೆಗೆ ಎಸ್‌ಐಟಿ ರಚನೆ

“ಭಾರತೀಯ ಜವಳಿ ರಫ್ತು ವಲಯವು ನೇರ ಮತ್ತು ಪರೋಕ್ಷ ಉದ್ಯೋಗ ಸೇರಿದಂತೆ ಸುಮಾರು 5,00,000 ಉದ್ಯೋಗ ನಷ್ಟ ಎದುರಿಸುವಂತಾಗಿದೆ” ಎಂದು ಖರ್ಗೆ ಹೇಳಿದ್ದಾರೆ.

“ಈ ಹಿಂದೆ, ಅಮೆರಿಕವು 10% ಸುಂಕವನ್ನು ಜಾರಿಗೆ ತಂದ ಏಪ್ರಿಲ್‌ನಲ್ಲಿಯೇ ಸೌರಾಷ್ಟ್ರ ಪ್ರದೇಶದಾದ್ಯಂತ ವಜ್ರ ಕತ್ತರಿಸುವ ಮತ್ತು ಹೊಳಪು ನೀಡುವ ಕೆಲಸ ಮಾಡುತ್ತಿದ್ದ ಸುಮಾರು 1,00,000 ಕಾರ್ಮಿಕರು ಈಗಾಗಲೇ ತಮ್ಮ ಉದ್ಯೋಗಗಳನ್ನು ಕಳೆದುಕೊಂಡಿದ್ದಾರೆ. ಈಗ 50% ಸುಂಕಗಳು ಮುಂದುವರಿದರೆ ವಜ್ರ ಮತ್ತು ಆಭರಣ ವಲಯದಲ್ಲಿ 1,50,000 ರಿಂದ 2,00,000 ಉದ್ಯೋಗಗಳು ನಷ್ಟವಾಗಬಹುದು” ಎಂದು ಖರ್ಗೆ ಎಚ್ಚರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...