11 ವರ್ಷಗಳ ಆಡಳಿತದಲ್ಲಿ 33 ತಪ್ಪುಗಳನ್ನು ಮಾಡಿದ ಮೋದಿ ಸರ್ಕಾರ: ಮಲ್ಲಿಕಾರ್ಜುನ ಖರ್ಗೆ ಟೀಕೆ

Date:

ಕಳೆದ 11 ವರ್ಷಗಳ ಆಡಳಿತದಲ್ಲಿ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ 33 ತಪ್ಪುಗಳನ್ನು ಮಾಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎನ್‌ಡಿಎ ಸರ್ಕಾರವನ್ನು ಟೀಕಿಸಿದ್ದಾರೆ.

ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ ಅವರು, “ಚುನಾವಣಾ ಅವಧಿಯಲ್ಲಿ ಪ್ರಧಾನಿ ಮೋದಿ ಅವರು ಎಷ್ಟು ಭರವಸೆಗಳನ್ನು ನೀಡಿದ್ದಾರೆ? ಮತ್ತು ಅವುಗಳಲ್ಲಿ ಎಷ್ಟು ಭರವಸೆಗಳನ್ನು ಅವರು ನಿಜವಾಗಿಯೂ ಪೂರೈಸಿದ್ದಾರೆ? ಎಂಬುದನ್ನು ಬಹಿರಂಗಪಡಿಸಬೇಕು” ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಗಡಿ ಭದ್ರತಾ ಪಡೆ ರಕ್ಷಣೆ ನೀಡದೆ ಜನರ ಜೀವ ತೆಗೆದಿದ್ದು ಮೋದಿ ಸರ್ಕಾರ: ಮಲ್ಲಿಕಾರ್ಜುನ ಖರ್ಗೆ ಆರೋಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“11 ವರ್ಷಗಳು ಕಳೆದಿವೆ ಮತ್ತು 33 ತಪ್ಪುಗಳನ್ನು ಮಾಡಲಾಗಿದೆ. ನಿಮಗೆ ಅದು ತಿಳಿದಿದೆ. ನಾನು ಸಂಸತ್ತಿನಲ್ಲಿಯೂ ಈ ತಪ್ಪುಗಳ ಬಗ್ಗೆ ಹೇಳುತ್ತಿದ್ದೇನೆ. ಇಷ್ಟೊಂದು ಸುಳ್ಳು ಹೇಳುವ, ಇಷ್ಟೊಂದು ತಪ್ಪುಗಳನ್ನು ಮಾಡುವ, ಜನರನ್ನು ಬಲೆಗೆ ಬೀಳಿಸುವ, ಯುವಕರನ್ನು ವಂಚಿಸುವ, ಬಡವರನ್ನು ಬಲೆಗೆ ಬೀಳಿಸುವ ಮತ್ತು ಮತಗಳನ್ನು ಪಡೆಯುವ ಪ್ರಧಾನಿಯನ್ನು ನಾನು ಎಂದಿಗೂ ನೋಡಿಲ್ಲ. ನಾನು 55 ವರ್ಷಗಳ ಕಾಲ ಅಧಿಕಾರದಲ್ಲಿದ್ದೇನೆ ಮತ್ತು 65 ವರ್ಷಗಳ ಕಾಲ ರಾಜಕೀಯದಲ್ಲಿದ್ದೇನೆ. ಈವರೆಗೂ ಈ ರೀತಿಯ ಪ್ರಧಾನಿಯನ್ನು ನೋಡಿಲ್ಲ” ಎಂದು ಖರ್ಗೆ ಹೇಳಿದರು.

“ಪ್ರಧಾನಿ ಎಲ್ಲಾ ವಿಚಾರದಲ್ಲಿಯೂ ಸುಳ್ಳು ಹೇಳುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಅವರು ಹೇಳಿದ ಯಾವುದನ್ನೂ ಜಾರಿ ಮಾಡಲ್ಲ. ನಾವು ಅದರ ಬಗ್ಗೆ ಪ್ರಶ್ನಿಸಿದರೆ ಅದಕ್ಕೆ ಯಾವುದೇ ಉತ್ತರ ನೀಡಲ್ಲ” ಎಂದರು.

“ನೋಟು ರದ್ದತಿಯಾಗಿರಲಿ, ಉದ್ಯೋಗ ಸೃಷ್ಟಿಯಾಗಿರಲಿ ಅಥವಾ ಎಂಎಸ್‌ಪಿ ಆಗಿರಲಿ – ಅಂತಹ ಹಲವು ವಿಷಯಗಳಿವೆ. ಅವರು ಎಂದಿಗೂ ಜನರಿಗೆ ಸುಳ್ಳು ಹೇಳಿದ್ದೇನೆ ಮತ್ತು ತಪ್ಪು ಮಾಡಿದ್ದೇನೆ ಎಂದು ಒಪ್ಪಿಕೊಂಡಿಲ್ಲ ಮತ್ತು ಅದಕ್ಕಾಗಿ ಎಂದಿಗೂ ಕ್ಷಮೆಯಾಚಿಸಿಲ್ಲ. ಆದರೆ ಹನ್ನೊಂದು ವರ್ಷಗಳಿಂದ ಒಂದರ ನಂತರ ಒಂದು ಸುಳ್ಳನ್ನು ಹೇಳುತ್ತಲೇ ಇದ್ದಾರೆ” ಎಂದು ಹೇಳಿದರು.

“ಯುಪಿಎ ಮತ್ತು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಲೋಕಸಭೆಯಲ್ಲಿ ಉಪಸಭಾಪತಿ ಸ್ಥಾನವನ್ನು ನೀಡುವ ಮೂಲಕ ವಿರೋಧ ಪಕ್ಷದ ನಾಯಕರಿಗೆ ಅವಕಾಶ ಮಾಡಿಕೊಟ್ಟರು. ಆದರೆ ಪ್ರಸ್ತುತ ಎನ್‌ಡಿಎ ಸರ್ಕಾರವು ಕಳೆದ 11 ವರ್ಷಗಳಿಂದ ಆ ಹುದ್ದೆಯನ್ನು ಖಾಲಿ ಬಿಟ್ಟಿದೆ. ಪ್ರಮುಖ ಸಂಸದೀಯ ಪಾತ್ರಗಳಲ್ಲಿ ವಿರೋಧ ಪಕ್ಷಗಳನ್ನು ಒಳಗೊಳ್ಳುವ ಸಂಪ್ರದಾಯವನ್ನು ಮುರಿದಿದೆ” ಎಂದು ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಅವರು ವಾಗ್ದಾಳಿ ನಡೆಸಿದರು.

ಇದನ್ನು ಓದಿದ್ದೀರಾ? ಮೋದಿ ಸರ್ಕಾರ ‘ಯುಟರ್ನ್‌’ಗಳ ಸರ್ಕಾರ: ಮಲ್ಲಿಕಾರ್ಜುನ್ ಖರ್ಗೆ

“ಮೋದಿಯವರ ಕೃತ್ಯ ಕಾನೂನುಬಾಹಿರ, ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಅವರು ವಿರೋಧ ಪಕ್ಷಕ್ಕೆ ಉಪಸಭಾಪತಿ ಹುದ್ದೆಯನ್ನು ನೀಡಲು ಬಯಸುವುದಿಲ್ಲ. ಇದು ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂದು ತೋರಿಸುತ್ತದೆ” ಎಂದರು.

“ವಾಜಪೇಯಿ ಸರ್ಕಾರ ಮಾಡಿದ ಉತ್ತಮ ಕೆಲಸಗಳಿಗೆ ಯುಪಿಎ ಆಗಾಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಆದರೆ ಎನ್‌ಡಿಎ ಸರ್ಕಾರ ಕಾಂಗ್ರೆಸ್ ನೇತೃತ್ವದ ಯುಪಿಎಯನ್ನು ನಿರಂತರವಾಗಿ ಟೀಕಿಸುತ್ತಿದೆ. ಜೊತೆಗೆ ಮನಮೋಹನ್ ಸಿಂಗ್ ಯುಗದಲ್ಲಿ ಪ್ರಾರಂಭಿಸಲಾದ ಅನೇಕ ಯೋಜನೆಗಳನ್ನು ಸ್ಥಗಿತಗೊಳಿಸಿದೆ” ಎಂದು ಖರ್ಗೆ ದೂರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...