ಅದಾನಿ, ಅಂಬಾನಿಗೆ ಸಹಾಯ ಮಾಡಲು ಮೋದಿಯವರನ್ನು ಆ ಪರಮಾತ್ಮನೇ ಕಳುಹಿಸಿದ್ದು: ರಾಹುಲ್ ಲೇವಡಿ

Date:

ಗೌತಮ್ ಅದಾನಿ ಮತ್ತು ಮುಕೇಶ್ ಅಂಬಾನಿಯಂತಹ ಕೈಗಾರಿಕೋದ್ಯಮಿಗಳಿಗೆ ಸಹಾಯ ಮಾಡಲು ನರೇಂದ್ರ ಮೋದಿ ಅವರನ್ನು ಪರಮಾತ್ಮನೇ ಕಳುಹಿಸಿದ್ದಾರೆ. ಬಡವರಿಗೆ ಸಹಾಯ ಮಾಡಲು ಕಳುಹಿಸಿಲ್ಲ ಎಂದು ‘ನಾನು ಜೈವಿಕವಾಗಿ ಜನಿಸಿಲ್ಲ, ಪರಮಾತ್ಮನೇ ನನ್ನನ್ನು ಕಳುಹಿಸಿದ್ದು’ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ಯಾಂಗ್ ನೀಡಿದ್ದಾರೆ.

ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ಚುನಾವಣಾ ಪ್ರಚಾರವನ್ನು ನಡೆಸಿದ ರಾಹುಲ್ ಗಾಂಧಿ ಅವರು, “ಎಲ್ಲರೂ ಜೈವಿಕವಾಗಿ ಜನಿಸುತ್ತಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಜೈವಿಕವಾಗಿ ಜನಿಸಿಲ್ಲ. ಅಂಬಾನಿ ಮತ್ತು ಅದಾನಿಗೆ ಸಹಾಯ ಮಾಡಲು ಅವರ ಪರಮಾತ್ಮನೇ ಅವರನ್ನು ಕಳುಹಿಸಿದ್ದಾರೆ. ರೈತರು ಮತ್ತು ಕಾರ್ಮಿಕರಿಗೆ ಸಹಾಯ ಮಾಡಲು ಕಳುಹಿಸಲ್ಲ” ಎಂದು ಲೇವಡಿ ಮಾಡಿದ್ದಾರೆ.

ಇದನ್ನು ಓದಿದ್ದೀರಾ?  ‘ನಾನು ಜೈವಿಕವಾಗಿ ಜನಿಸಿಲ್ಲ, ಪರಮಾತ್ಮನೇ ನನ್ನನ್ನು ಕಳುಹಿಸಿದ್ದು’ ಎಂದ ಪ್ರಧಾನಿ ಮೋದಿ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪರಮಾತ್ಮ ಅವರನ್ನು ಕಳುಹಿಸಿದ್ದರೆ ಅವರು ಬಡವರಿಗೆ ಮತ್ತು ರೈತರಿಗೆ ಸಹಾಯ ಮಾಡುತ್ತಿದ್ದರು. ಆದರೆ ಇದು ಯಾವ ರೀತಿಯ ದೇವರು? ಇದು ಪ್ರಧಾನಿ ಮೋದಿಯ ದೇವರು ಆಗಿರಬಹುದು” ಎಂದು ರಾಹುಲ್ ಗಾಂಧಿ ವ್ಯಂಗ್ಯವಾಡಿದರು.

ದ್ವೇಷ ಭಾಷಣಗಳ ಮೂಲಕವೇ ಸುದ್ದಿಯಾಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ “ನಾನು ಜೈವಿಕವಾಗಿ ಜನಿಸಿಲ್ಲ, ದೇವರೇ ನನ್ನನ್ನು ಕಳುಹಿಸಿದ್ದು” ಎಂದು ಹೇಳುವ ಮೂಲಕ ಟ್ರೋಲ್ ಆಗಿದ್ದಾರೆ. ವಿಪಕ್ಷಗಳು ಕೂಡಾ ಪ್ರಧಾನಿಯವರ ಈ ಹೇಳಿಕೆಯನ್ನು ಲೇವಡಿ ಮಾಡುತ್ತಿದ್ದಾರೆ.

ನ್ಯೂಸ್‌18ನ ರುಬಿಕಾ ಲಿಯಾಖತ್ ಜೊತೆ ಸಂದರ್ಶನದಲ್ಲಿ ಮಾತನಾಡುತ್ತಾ ಪ್ರಧಾನಿ ಮೋದಿ ಈ ಹೇಳಿಕೆಯನ್ನು ನೀಡಿದ್ದಾರೆ. ರುಬಿಕಾ ಲಿಯಾಖತ್ “ನಿಮಗೆ ಸುಸ್ತು ಅನ್ನೋದೆ ಆಗುದಿಲ್ವೆ” ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿದ ಮೋದಿ, ತನ್ನನ್ನು ದೇವರೇ ಕಳುಹಿಸಿದ್ದು ಎಂದಿದ್ದಾರೆ.

ಇದನ್ನು ಓದಿದ್ದೀರಾ?  ಮೋದಿ ಸುಳ್ಳುಗಳು | ಶೋಷಣೆಯಿಂದ ಮುಕ್ತಿ ನೀಡದ ಮೋದಿ, ಬುಡಕಟ್ಟುಗಳ ಅಭಿವೃದ್ಧಿಗೆ ನಿಲ್ಲುತ್ತಾರೆಯೇ?  

“ನನ್ನ ತಾಯಿ ಜೀವಂತವಾಗಿರುವವರೆಗೂ ನಾನು ಜೈವಿಕವಾಗಿ ಜನಿಸಿದ್ದೇನೆ ಎಂದು ನಾವು ನಂಬಿದ್ದೆ. ನನ್ನ ತಾಯಿ ಮರಣ ಹೊಂದಿದ ಬಳಿಕ ನಾನು ನನ್ನ ಎಲ್ಲಾ ಅನುಭವಗಳನ್ನು ಜೊತೆಗೂಡಿಸಿ ನೋಡುತ್ತೇನೆ. ನನ್ನನ್ನು ಪರಮಾತ್ಮನೇ ಕಳುಹಿಸಿದ್ದು ಎಂದು ನನಗೆ ಮನವರಿಕೆಯಾಗಿದೆ” ಎಂದು ಮೋದಿ ಹೇಳಿದ್ದಾರೆ.

“ಈ ಶಕ್ತಿ ನನಗೆ ಜೈವಿಕ ದೇಹದಿಂದ ಸಿಗುವುದಲ್ಲ. ಈ ಶಕ್ತಿ ನನಗೆ ದೇವರಿಂದ ನನಗೆ ದಯಪಾಲಿಸಲಾಗಿದೆ. ದೇವರು ತನ್ನ ಕೆಲಸವನ್ನು ನನ್ನ ಮೂಲಕ ಮಾಡಿಸಲು ನನಗೆ ಶಕ್ತಿ, ಸಾಮರ್ಥ್ಯ, ಉದ್ದೇಶವನ್ನು, ಪ್ರೇರಣೆಯನ್ನು ನನಗೆ ನೀಡಿದ್ದಾನೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...