ಮೋದಿಗೆ ‘ಗಟ್ಸ್’ ಇಲ್ಲ, ಇಂದು ಅವರು ಸದನಕ್ಕೆ ಬರಲ್ಲ: ರಾಹುಲ್ ಗಾಂಧಿ ಲೇವಡಿ

Date:

ಪ್ರಧಾನಿ ಮೋದಿ ಅವರಿಗೆ ಬುಧವಾರ ಲೋಕಸಭೆಗೆ ಬರಲು ಗಟ್ಸ್‌ ಇಲ್ಲ. ಅವರು ಸದನಕ್ಕೆ ಬರುವುದಿಲ್ಲ. ಒಂದು ವೇಳೆ, ಅವರು ಸದನಕ್ಕೆ ಬಂದರೆ, ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ ನರವಾಣೆ ಅವರ ಆತ್ಮಚರಿತ್ರೆ ”ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಪುಸ್ತಕದ ಪ್ರತಿಯನ್ನು ನಾನೇ ಖುದ್ದು ಅವರಿಗೆ ಹಸ್ತಾಂತರಿಸುತ್ತೇನೆ ಎಂದು ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸವಾಲು ಹಾಕಿದ್ದಾರೆ.

ಭಾರತದ ಭೂಮಿಯನ್ನು ಚೀನಾ ಅತಿಕ್ರಮಣ ಮಾಡಿಕೊಂಡಿರುವ ಮತ್ತು ಭಾರತೀಯ ಸೈನಿಕರ ಮೇಲಿನ ಚೀನಾ ದಾಳಿಯ ಕುರಿತು ಉಲ್ಲೇಖಿಸಿರುವ, ಇನ್ನೂ ಸಾರ್ವಜನಿಕವಾಗಿ ಪ್ರಕಟಗೊಳ್ಳದ ನರವಾಣೆ ಅವರ ಪುಸ್ತಕವನ್ನು ಮಂಗಳವಾರ ಲೋಕಸಭೆಯಲ್ಲಿ ರಾಹುಲ್‌ ಗಾಂಧಿ ಉಲ್ಲೇಖಿಸಿದ್ದರು. ಅದರೆ, ಅವರ ಭಾಷಣವನ್ನು ತಡೆಯಲಾಯಿತು. ಸದನದಲ್ಲಿ ರಾಹುಲ್‌ ಗಾಂಧಿ ಮಾತನಾಡಲು ಅವಕಾಶವನ್ನು ನಿರಾಕರಿಸಲಾಯಿತು.

ಬುಧವಾರ, ಪುಸ್ತಕದ ಮುದ್ರಿತ ಪ್ರತಿಯನ್ನು ಕೈಯಲ್ಲಿಡಿದುಕೊಂಡ ಸಂಸತ್‌ಗೆ ಬಂದ ರಾಹುಲ್‌ ಗಾಂಧಿ, “ಪ್ರಧಾನಿಯವರು ಇಂದು ಲೋಕಸಭೆಗೆ ಬರಲು ಧೈರ್ಯ ಮಾಡುತ್ತಾರೆ ಎಂದು ನಾನು ಭಾವಿಸುವುದಿಲ್ಲ. ಏಕೆಂದರೆ ಅವರು ಬಂದರೆ, ನಾನು ಅವರಿಗೆ ಈ ಪುಸ್ತಕವನ್ನು ನೀಡಲಿದ್ದೇನೆ. ಪ್ರಧಾನಿ ಬಂದರೆ, ನಾನು ನೇರವಾಗಿ ಹೋಗಿ ಈ ಪುಸ್ತಕವನ್ನು ಅವರಿಗೆ ಹಸ್ತಾಂತರಿಸುತ್ತೇನೆ. ಅವರು ಪುಸ್ತಕವನ್ನು ಓದಬಹುದು ಮತ್ತು ದೇಶವು ಸತ್ಯವನ್ನು ತಿಳಿದುಕೊಳ್ಳಬಹುದು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶದ ಪ್ರತಿಯೊಬ್ಬ ಯುವಜನರು ಈ ಪುಸ್ತಕವನ್ನು ಓದಬೇಕೆಂದು ಮನವಿ ಮಾಡಿದ ರಾಹುಲ್‌ ಗಾಂಧಿ, “ಇದು ನರವಾಣೆ ಅವರ ಪುಸ್ತಕ. ಅವರು ಈ ಪುಸ್ತಕದಲ್ಲಿ ಲಡಾಖ್‌ನ ಸಂಪೂರ್ಣ ವಿವರಣೆಯನ್ನು ನೀಡಿದ್ದಾರೆ. ಈ ಪುಸ್ತಕವನ್ನು ಸದನದಲ್ಲಿ ನಾನು ಉಲ್ಲೇಖಿಸಲು ಸಾಧ್ಯವಿಲ್ಲವೆಂದು ಹೇಳಲಾಗಿದೆ” ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಗಡಿ ಉದ್ವಿಗ್ನತೆ ಮತ್ತು ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’: ಜನರಲ್ ನರವಣೆ ಪುಸ್ತಕದ ಸುತ್ತ ಏಕೆ ಈ ನಿಗೂಢ ಮೌನ?

“(ಮಾಜಿ) ಸೇನಾ ಮುಖ್ಯಸ್ಥ ಜನರಲ್ ನರವಾಣೆ ಅವರು ರಾಜನಾಥ್ ಸಿಂಗ್ ಅವರಿಗೆ ಕರೆ ಮಾಡಿ ‘ಚೀನಾದ ಟ್ಯಾಂಕ್‌ಗಳು ಕೈಲಾಸ ಪರ್ವತವನ್ನು ತಲುಪಿವೆ. ನಾವು ಏನು ಮಾಡಬೇಕು’ ಎಂದು ಕೇಳಿದಾಗ, ಮೊದಲು, ರಾಜನಾಥ್ ಸಿಂಗ್ ಅವರಿಗೆ ಪ್ರತಿಕ್ರಿಯಿಸಲಿಲ್ಲ. ಬಳಿಕ, ನರಾವಣೆ ಅವರು ಜೈಶಂಕರ್, ಎನ್‌ಎಸ್‌ಎಅನ್ನು ಕೇಳಿದರು. ಆದರೆ ಯಾವುದೇ ಉತ್ತರ ಬರಲಿಲ್ಲ. ನಂತರ ಅವರು ಮತ್ತೊಮ್ಮೆ ರಾಜನಾಥ್ ಸಿಂಗ್ ಅವರಿಗೆ ಕರೆ ಮಾಡಿದರು. ರಾಜನಾಥ್ ಸಿಂಗ್ ಅವರು ‘ಮೇಲಿನವರನ್ನು’ ಕೇಳುವುದಾಗಿ ಹೇಳಿದರು” ಎಂದು ರಾಹುಲ್‌ ಗಾಂಧಿ ವಿವರಿಸಿದ್ದಾರೆ.

“ಚೀನಾದ ಪಡೆಗಳು ನಮ್ಮ ಗಡಿಗಳ ಒಳಗೆ ಬಂದರೆ, ನಾವು ಅವರ ಅನುಮತಿಯಿಲ್ಲದೆ ಅವರ ಮೇಲೆ ಗುಂಡು ಹಾರಿಸಬಾರದು ಎಂಬುದು ‘ಮೇಲಿನ’ ಅಧಿಕಾರಿಗಳ ಸ್ಥಾಯಿ ಆದೇಶವಾಗಿತ್ತು. ನರವಣೆ ಮತ್ತು ನಮ್ಮ ಸೈನ್ಯವು ಆ ಟ್ಯಾಂಕ್‌ಗಳು ನಮ್ಮ ಪ್ರದೇಶವನ್ನು ಪ್ರವೇಶಿಸಿದ್ದರಿಂದ ಅವುಗಳ ಮೇಲೆ ಗುಂಡು ಹಾರಿಸಲು ಬಯಸಿದ್ದರು. ನರೇಂದ್ರ ಮೋದಿ ಅವರು ‘ಜೋ ಉಚಿತ್ ಸಂಜೋ ವೋ ಕರೋ’ (ನೀವು ಬಯಸ್ಸಿದ್ದನ್ನು ಮಾಡಿ) ಎಂಬ ಸಂದೇಶವನ್ನು ನೀಡಿದರು. ಇದರರ್ಥ ನರೇಂದ್ರ ಮೋದಿ ತಮ್ಮ ಜವಾಬ್ದಾರಿಯನ್ನು ಪೂರೈಸಲಿಲ್ಲ. ಇದರಿಂದಾಗಿ, ‘ನಾನು ನಿಜವಾಗಿಯೂ ಒಂಟಿತನ ಅನುಭವಿಸಿದೆ, ಇಡೀ ವ್ಯವಸ್ಥೆಯಿಂದ ನಾನು ಕೈಬಿಡಲ್ಪಟ್ಟಿದ್ದೇನೆ’ ಎಂಬುದಾಗಿ ನರವಣೆ ಅವರು ಬರೆದಿದ್ದಾರೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...