ಮೋದಿಯವರೇ, ಒಮ್ಮೆ ನಂದಿನಿ ಬ್ರ್ಯಾಂಡ್‌ನ ರುಚಿ ನೋಡಿ: ಗೌರವ್ ವಲ್ಲಭ್‌

Date:

  • ನಂದಿನಿ ಉತ್ಪನ್ನಗಳ ರುಚಿ ಸವಿಯುವಂತೆ ಮೋದಿಗೆ ಆಗ್ರಹ
  • ರಾಜ್ಯ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದ ಗೌರವ್ ವಲ್ಲಭ್‌

ನಂದಿನಿ ಬ್ರ್ಯಾಂಡ್‌ನಲ್ಲಿ ಯಾವ ಲೋಪದೋಷವಿದೆ ಎಂದು ಬಿಜೆಪಿ ನಾಯಕರು ಅದರ ವಿರುದ್ಧ ನಿಂತಿದ್ದಾರೆ ಎಂದು ಎಐಸಿಸಿ ವಕ್ತಾರ ಗೌರವ್ ವಲ್ಲಭ್‌ ಪ್ರಶ್ನಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಪ್ರಧಾನಿ ಮೋದಿ ಅವರ ಸರ್ಕಾರ ಪ್ರತಿ ರಾಜ್ಯಗಳಲ್ಲಿ ಅದರದೇ ಆದ ಹೆಮ್ಮೆಯ ಸಂಸ್ಥೆಗಳನ್ನು ನಾಶ ಮಾಡಲು ಮುಂದಾಗುತ್ತಿದೆ. ಇದಕ್ಕೆ ಸೂಕ್ತ ಉದಾಹರಣೆ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ವಿರುದ್ಧದ ದಾಳಿ” ಎಂದಿದ್ದಾರೆ.

“ನಂದಿನಿ ಬ್ರ್ಯಾಂಡ್‌ನಲ್ಲಿ ಯಾವ ಲೋಪದೋಷವಿದೆ ಎಂದು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ನಂದಿನಿ ವಿರುದ್ಧ ನಿಂತಿದ್ದಾರೆ? ನಂದಿನಿ ಉತ್ಪನ್ನಗಳಲ್ಲಿ ಯಾವ ದೋಷವಿದೆ? ಈ ಉತ್ಪನ್ನಗಳ ಮೇಲೆ ಕನ್ನಡ ಭಾಷೆ ಬಳಸಲಾಗಿದೆ ಎಂಬುದು ನಿಮ್ಮ ಸಮಸ್ಯೆಯೇ?” ಎಂದು ವ್ಯಂಗ್ಯವಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೋದಿ ಹಾಗೂ ಅಮಿತ್ ಶಾ ಅವರು ನಂದಿನ ಉತ್ಪನ್ನಗಳ ರುಚಿ ನೋಡಬೇಕು. ಇದು ಕರ್ನಾಟಕದ ಹೆಮ್ಮೆ. ಆರೂವರೆ ಕೋಟಿ ಜನರ ಈ ಹೆಮ್ಮೆಯನ್ನು ಯಾಕೆ ತುಳಿಯಲು ಹೊರಟಿದ್ದೀರಿ? ಇದರಿಂದ ಏನು ಸಾಧಿಸಲು ಹೊರಟಿದ್ದೀರಿ? ಅಮಿತ್ ಶಾ ಅವರೇ ಸಹಕಾರಿ ಸಚಿವಾಲಯದ ಮೂಲ ಉದ್ದೇಶವೇನು?” ಎಂದು ಪ್ರಶ್ನಿಸಿದ್ದಾರೆ.

“ನೀವು ಸಹಕಾರ ಕ್ಷೇತ್ರದಲ್ಲೂ ಸ್ಪರ್ಧೆ ತರಲು ಹೊರಟಿದ್ದೀರಿ. ಉದ್ದೇಶಪೂರ್ವಕವಾಗಿ ಇದನ್ನು ಯಾಕೆ ಮಾಡುತ್ತಿದ್ದೀರಿ. ನಂದಿನಿ ಆಶ್ರಯದಲ್ಲಿ ಸುಮಾರು ₹2 ಕೋಟಿ ಜನರು ಆಶ್ರಯ ಪಡೆದಿದ್ದಾರೆ” ಎಂದು ಹೇಳಿದ್ದಾರೆ.

“ಮೋದಿ ಅವರೇ ಇನ್ನು ಒಂದು ತಿಂಗಳು ಮೂರು ದಿನಗಳು ಮಾತ್ರ ಬಾಕಿ ಇವೆ. ನಂತರ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ನಂತರ ಕರ್ನಾಟಕದ ಹೆಮ್ಮೆಯ ಸಂಸ್ಥೆಗಳನ್ನು ಯಾರೂ ಕೂಡ ಮುಟ್ಟಲು ಸಾಧ್ಯವಿಲ್ಲ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? 40% ಸರ್ಕಾರದಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ: ಶಶಿ ತರೂರ್

“ದೆಹಲಿಯಲ್ಲಿ ಕೂತು ಕರ್ನಾಟಕದ ಹೆಮ್ಮೆಯ ಸಂಸ್ಥೆಗಳ ಭವಿಷ್ಯ ನಿರ್ಧರಿಸಲು ಬಿಡುವುದಿಲ್ಲ. ನಂದಿನಿ ಬ್ರ್ಯಾಂಡ್ ರೈತರು, ಕಾರ್ಮಿಕರ ಪರಿಶ್ರಮದ ಫಲ. ಮೋದಿ ಅವರು ಒಮ್ಮೆ ಇದರ ರುಚಿ ನೋಡಲಿ, ಅವರು ತಮ್ಮ ನಿಲುವು ಬದಲಿಸಬಹುದು” ಎಂದು ಹೇಳಿದ್ದಾರೆ.

ನಂದಿನಿ ವಿನಾಶಕ್ಕೆ ಬಿಜೆಪಿ ಯಾಕೆ ಮುಂದಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಗೌರವ್ ವಲ್ಲಭ್‌, “ಈ ನಂದಿನಿ ಉತ್ಪನ್ನಗಳಲ್ಲಿ ಯಾವ ದೋಷವಿದೆ? ಎಂಬುದು ನನ್ನ ಮೂಲಭೂತ ಪ್ರಶ್ನೆ. ಇದು ರುಚಿ ಇಲ್ಲವೇ? ತಾಜವಾಗಿಲ್ಲವೇ? ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿಲ್ಲವೇ? ಇದನ್ನು ಸೇವಿಸುತ್ತಿರುವ ಜನರು ಇದನ್ನು ಆಸ್ವಾದಿಸುತ್ತಿಲ್ಲವೇ? ಯಾವ ಕಾರಣಕ್ಕೆ ನಂದಿನಿಗೆ ಜತೆ ಸ್ಪರ್ಧೆ ಮಾಡಲು ಅವಕಾಶ ಮಾಡಿಕೊಡುತ್ತಿದ್ದಾರೆ” ಎಂದು ಕೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...