ಮೋದಿ ಅವರೇ, ರಾಜ್ಯ ಬಿಜೆಪಿಗೆ ‘ಬಿಎಸ್‌ವೈ & ಸನ್ಸ್ ಪಾರ್ಟಿ’ ಎಂದು ನಾಮಕರಣ ಮಾಡಿ: ಕಾಂಗ್ರೆಸ್‌ ಲೇವಡಿ

Date:

ಪ್ರಧಾನಿ ನರೇಂದ್ರ ಅವರೇ, ವಿಧಾನಸಭಾ ಚುನಾವಣೆಗಾಗಿ ಮೂರು ದಿನಕ್ಕೊಮ್ಮೆ ಕೈಬೀಸಿ ಹೋದರೂ ಕನ್ನಡಿಗರು ಕ್ಯಾರೇ ಅಂದಿಲ್ಲ. ಈಗ ನಿಮ್ಮ ತಗಡು ಚುನಾವಣಾ ಭಾಷಣ ಕೇಳುವರೇ” ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ.

ಎಕ್ಸ್‌ ತಾಣದಲ್ಲಿ ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, “ಎಸ್‌ಬಿಐ ಬ್ಯಾಂಕನ್ನೇ ಏಟಿಎಂ ಮಾಡಿಕೊಂಡಿರುವ ತಾವು ಕಾಂಗ್ರೆಸ್ ಸರ್ಕಾರದ ಬಗ್ಗೆ ಮಾತಾಡುವ ಅರ್ಹತೆ ಹೊಂದಿಲ್ಲ. ದಮ್ಮು ತಾಕತ್ತು ಇದ್ದರೆ ಚುನಾವಣಾ ಬಾಂಡ್ ಬಗ್ಗೆ ಮಾತಾಡಿ” ಎಂದು ಸವಾಲು ಹಾಕಿದೆ.

“ಹಿಪಾಕ್ರಸಿಗೆ ಮತ್ತೊಂದು ಹೆಸರೇ ಮೋದಿ! ಶಿವಮೊಗ್ಗದಲ್ಲಿ ವೇದಿಕೆ ಮೇಲೆ ಯಡಿಯೂರಪ್ಪರನ್ನು ಕೂರಿಸಿಕೊಂಡು, ಆ ಕಡೆ ಅಭ್ಯರ್ಥಿಯಾಗಿರುವ ದೊಡ್ಡ ಮಗ, ಈ ಕಡೆ ರಾಜ್ಯಾಧ್ಯಕ್ಷನಾದ ಚಿಕ್ಕ ಮಗನನ್ನು ಕೂರಿಸಿಕೊಂಡಿದ್ದ ಮೋದಿ ಅವರೇ ನಿಮ್ಮ ಡೋಂಗಿತನ ಬಯಲಾಗಿದೆ. ನಿಮ್ಮ ಟೆಲಿಪ್ರಾಂಪ್ಟರ್ ನಿಂದ “ಕುಟುಂಬ ರಾಜಕೀಯ“ ಎಂಬ ಪದವನ್ನು ಅಳಿಸಿಬಿಡಿ. ಅಥವಾ ರಾಜ್ಯ ಬಿಜೆಪಿಗೆ “BSY & ಸನ್ಸ್ ಪಾರ್ಟಿ” ಎಂದು ನಾಮಕರಣ ಮಾಡಿಬಿಡಿ” ಎಂದು ಟೀಕಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನರೇಂದ್ರ ಅವರೇ, ನೀವು ಮತ ಕೇಳುತ್ತಿರುವುದು ಯಡಿಯೂರಪ್ಪನವರ ಮಗ ಎನ್ನುವುದು ತಿಳಿದಿದೆಯೇ? ನಿಮ್ಮ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪನವರ ಮಗ ಎನ್ನುವುದು ತಿಳಿದಿದೆಯೇ? ಇದು ಕುಟುಂಬ ರಾಜಕಾರಣ ಅಲ್ಲವೇ? “ಕುಟುಂಬ ರಾಜಕಾರಣ“ ಎಂದು ಟೀಕಿಸಿ ಈಗ ರಾಜಕೀಯ ಕುಟುಂಬದ ಪರ ಮತ ಕೇಳುವ ಮೋದಿಯದ್ದು ಹಿಪಾಕ್ರಸಿ ಅಲ್ಲದೆ ಇನ್ನೇನು” ಎಂದು ಕುಟುಕಿದೆ.

“ಕಷ್ಟಕ್ಕೆ ಬರಲಿಲ್ಲ, ಚುನಾವಣೆಗೆ ಬಾರದೆ ಇರುವುದಿಲ್ಲ“ ಇದು ಮೋದಿ ಅವರ ಧ್ಯೇಯವಾಕ್ಯ! ಕರ್ನಾಟಕಕ್ಕೆ ಬರ ಪರಿಹಾರ ನೀಡಿ ಎಂದು ಪತ್ರ ಬರೆದಿದ್ದು ಆಯ್ತು, ಮುಖ್ಯಮಂತ್ರಿಗಳು ಭೇಟಿಯಾಗಿ ಮನವಿ ಮಾಡಿದ್ದೂ ಆಯ್ತು, ಆದರೂ ನಯಾಪೈಸೆ ಹಣ ಬಿಡುಗಡೆ ಮಾಡದೆ ಯಾವ ಮುಖವಿಟ್ಟುಕೊಂಡು ಮತ ಕೇಳಲು ಬಂದಿದ್ದೀರಿ? ಕೇಂದ್ರ ಬರ ಅಧ್ಯಯನ ತಂಡ ಮಾಡಿದ ಅಧ್ಯಯನ ವರದಿ ಎಲ್ಲಿ ಹೋಯ್ತು, ಫಲಶೃತಿ ಏನಾಯ್ತು ಮೋದಿಯವರೇ” ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

“ಬರದಿಂದ ಕಂಗಾಲಾಗಿರುವ ಕನ್ನಡಿಗರಿಗೆ ಕೇಂದ್ರ ಸರ್ಕಾರ ನೀಡಿದ ಒಂದೇ ಒಂದು ನೆರವು ನೀಡಿದ ಉದಾಹರಣೆ ಇದ್ದರೆ ಮೋದಿ ಅವರು ಜನತೆಗೆ ತಿಳಿಸಲಿ. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ದಿನಗಳನ್ನು 100ರಿಂದ 150 ದಿನಗಳಿಗೆ ಏರಿಸುವಂತೆ ನಮ್ಮ ಸರ್ಕಾರ ಮನವಿ ಮಾಡಿದ್ದರೂ ಕೂಲಿ ದಿನಗಳನ್ನು ಏರಿಸಲಿಲ್ಲವೇಕೆ? ಭಾರತದ ಬಡ ಜನರು “ಚುನಾವಣಾ ಬಾಂಡ್” ಖರೀದಿಸಲಿಲ್ಲ ಎನ್ನುವ ಅಸಹನೆಯೇ?” ಎಂದು ವಾಗ್ದಾಳಿ ನಡೆಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...