ಸಂವಿಧಾನದ ಧರ್ಮನಿರಪೇಕ್ಷ ಸಿದ್ಧಾಂತ ಅವಮಾನಿಸಿದ ಮೋದಿ: ಬಿ ಕೆ ಹರಿಪ್ರಸಾದ್‌ ಕಿಡಿ

Date:

ಸಾಂವಿಧಾನಿಕ ಹುದ್ದೆಯಲ್ಲಿದ್ದೂ, ಸಂವಿಧಾನ ವಿರೋಧಿ ಸಂಘಟನೆಯ ಪ್ರಚಾರ ನಡೆಸುವುದು ಪ್ರಧಾನಿ ಹುದ್ದೆಗೆ ಶೋಭೆಯಲ್ಲ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಆರ್‌ಎಸ್‌ಎಸ್‌ ಸಂಘಟನೆಯ ಪ್ರಚಾರ ಪ್ರಮುಖ್ ಜವಾಬ್ದಾರಿ ವಹಿಸಿಕೊಳ್ಳಲಿ ಎಂದು ಎಐಸಿಸಿ ಮುಖಂಡ ಮತ್ತು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಆಗ್ರಹಿಸಿದ್ದಾರೆ.

“ಆರ್‌ಎಸ್‌ಎಸ್‌ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ನೂರು ವರ್ಷದ ನೆನಪಿಗೆ ಅಂಚೆ ಚೀಟಿ ಹಾಗೂ ನಾಣ್ಯ ಬಿಡುಗಡೆ ಮಾಡಿರುವುದು ಸಂವಿಧಾನಕ್ಕೆ ಬಗೆದ ದ್ರೋಹ ಹಾಗೂ ಇತಿಹಾಸಕ್ಕೆ ಮಾಡಿದ ಅಪಚಾರ” ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

“ಸ್ವತಂತ್ರ ಚಳುವಳಿಯ ವಿರೋಧಿಯಾಗಿದ್ದ ಆರ್‌ಎಸ್‌ಎಸ್‌ ಸಂವಿಧಾನ ವಿರೋಧಿ ಚಟುವಟಿಕೆಯಲ್ಲಿ ನೂರುವರ್ಷದಿಂದಲೂ ಸಕ್ರೀಯವಾಗಿ ತೊಡಗಿಸಿಕೊಂಡಿದೆ. ದೇಶದ ಸೌಹಾರ್ದತೆ, ಐಕ್ಯತೆ, ಪ್ರಜಾಪ್ರಭುತ್ವ ಹಾಗೂ ಜಾತ್ಯಾತೀತ ಆಶಯಗಳಿಗೆ ಸಂಘಪರಿವಾರ ಮಾಡಿರುವ ಗಾಯಗಳಿಗೆ ಲೆಕ್ಕವಿಲ್ಲ. ಭಾರತದ ಸಂವಿಧಾನದ ಬದಲು ಮನುಸ್ಮೃತಿಯನ್ನು ಜಾರಿ ಮಾಡಲು ಹೊರಟಿರುವ ಮನುವಾದಿ ಸಂಘಟನೆಯನ್ನು ಪ್ರಧಾನಿ ಹುದ್ದೆಯಲ್ಲಿದ್ದು ಪ್ರಚಾರ ನಡೆಸುವುದು ಅಕ್ಷಮ್ಯ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೋಮುದ್ವೇಷ,ಕೊಲೆ,ಪಿತೂರಿ,ಸಮಾಜದ ಸ್ವಾಸ್ಥ್ಯವನ್ನೇ ಹಾಳುಗೆಡವುತ್ತಿರುವ ಸಂಘಟನೆಯ ಶತಮಾನೋತ್ಸದಲ್ಲಿ ಅಂಚೆ ಹಾಗೂ ನಾಣ್ಯ ಬಿಡುಗಡೆ ಮಾಡಿದ್ದು ಯಾವ ಪುರುಷಾರ್ಥಕ್ಕಾಗಿ? 1963ರಲ್ಲಿ ಗಣರಾಜ್ಯೋತ್ಸವದಲ್ಲಿ ಭಾಗವಹಿಸಿರುವ ಸಂಘದ ಚಿತ್ರವನ್ನು ಅಂಚೆಯಲ್ಲಿ ಹಾಕಿರುವುದು ಇತಿಹಾಸದ ವ್ಯಂಗ್ಯ, ಸಂಘ ಸುಳ್ಳನ್ನೇ ಸತ್ಯವನ್ನಾಗಿಸುವ ವ್ಯರ್ಥ ಪ್ರಯತ್ನವಷ್ಟೇ” ಎಂದಿದ್ದಾರೆ.

“ನಾಣ್ಯದಲ್ಲಿ ಆರ್.ಎಸ್.ಎಸ್.ಪ್ರತಿಪಾದಿಸುವ ಭಾಗವಧ್ವಜವನ್ನು ಸೇರಿಸುವ ಮೂಲಕ ಸಂವಿಧಾನದ ಧರ್ಮನಿರಪೇಕ್ಷ ಸಿದ್ಧಾಂತವನ್ನು ಅವಮಾನಿಸಿದೆ. ಇಂತಹ ಕೃತ್ಯಗಳನ್ನ ಬಲವಾಗಿ ಖಂಡಿಸಿ, ಸಂವಿಧಾನ ವಿರೋಧಿ ಶಕ್ತಿಗಳನ್ನು ಮಟ್ಟ ಹಾಕಬೇಕಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...