ರಾಮನಿಗಿಂತಲೂ ದೊಡ್ಡದಾದ ಮೋದಿ ಫೋಟೋ: ಬಿಜೆಪಿ ಐಟಿ ಸೆಲ್ ಎಡವಟ್ಟು!

Date:

2024ರ ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ರಾಮಮಂದಿರದ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ.

ರಾಮಮಂದಿರ ಆಂದೋಲನದ ಮುಂಚೂಣಿಯಲ್ಲಿದ್ದ ಬಿಜೆಪಿಯ ಹಿರಿಯರಾದ ಎಲ್‌ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರು ಮುಂದಿನ ತಿಂಗಳು ನಡೆಯಲಿರುವ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಬರದಂತೆ ಟ್ರಸ್ಟ್‌ ಸೂಚಿಸಿದ್ದು ಇತ್ತೀಚೆಗೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಆ ಬಳಿಕ ವಿಶ್ವ ಹಿಂದೂ ಪರಿಷತ್‌ನ ಮುಖಂಡರು ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಮನೆಗೆ ತೆರಳಿ ಆಹ್ವಾನ ಪತ್ರಿಕೆ ಕೂಡ ನೀಡಿತ್ತು. ಈ ಬೆಳವಣಿಗೆ ಮಾಸುವ ಮುನ್ನವೇ ಕರ್ನಾಟಕದ ಬಿಜೆಪಿ ಐಟಿ ಸೆಲ್ ಎಡವಟ್ಟು ಮಾಡಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಟ್ಟಿದೆವು ನಾವು ರಾಮ ಮಂದಿರ” ಎಂಬ ಶೀರ್ಷಿಕೆ ಬಳಸಿ, ಕರ್ನಾಟಕದ ಬಿಜೆಪಿ ಐಟಿ ಸೆಲ್ AI ಟೂಲ್ ಅನ್ನು ಬಳಸಿಕೊಂಡು ಫೋಟೋವೊಂದನ್ನು ಡಿ.24ರ ಮಧ್ಯಾಹ್ನ 12:15ರ ಸುಮಾರಿಗೆ ಹಂಚಿಕೊಂಡಿದೆ.

ಈ ಫೋಟೋದಲ್ಲಿ ‘ಶತಮಾನಗಳ ಕಾಯುವಿಕೆಗೆ ತೆರೆ’ ಎಂದು ಬರೆದುಕೊಂಡು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದ ದಿನಾಂಕ 2024ರ ಜನವರಿ 22 ದಿನಾಂಕವನ್ನು ಬರೆದುಕೊಂಡಿದೆ. ಜೊತೆಗೆ, ಈ ಫೋಟೊದಲ್ಲಿ ರಾಮ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಿನ್ನೆಲೆಯಲ್ಲಿ ರಾಮಮಂದಿರವನ್ನು ಬಳಸಿಕೊಳ್ಳಲಾಗಿದೆ. ಆದರೆ, ರಾಮನಿಗಿಂತಲೂ ಮೋದಿ ಫೋಟೋ ದೊಡ್ಡದಾಗಿ ಹಾಕಿ ಎಡವಟ್ಟು ಮಾಡಿಕೊಂಡಿದೆ. ಇದು ನೆಟ್ಟಿಗರು ಸೇರಿದಂತೆ ರಾಮನ ಅನುಯಾಯಿಗಳ ಕಣ್ಣು ಕೆಂಪಗಾಗಿಸಿದೆ.

@Bhai_saheb ಎನ್ನುವ ಟ್ವಿಟ್ಟರ್ ಬಳಕೆದಾರೊಬ್ಬರು ಟ್ವೀಟ್ ಮಾಡಿದ್ದು, ರಾಮನಿಗಿಂತಲೂ ಮೋದಿ ಫೋಟೋ ದೊಡ್ಡದಾಗಿ ಚಿತ್ರಿಸಲಾಗಿದೆ. ಇದನ್ನು ಬಿಜೆಪಿಯವರು ಮಾಡಿದ್ದಾರೆ. ಒಂದು ವೇಳೆ ಬೇರೆಯವರು ಯಾರಾದರೂ ಮಾಡಿದ್ದಿದ್ದರೆ ಇಷ್ಟೊತ್ತಿಗೆ ವಿಶ್ವ ಹಿಂದೂ ಪರಿಷತ್, ಭಜರಂಗದಳದವರು ಇದನ್ನು ದೇಶಾದ್ಯಂತ ವಿವಾದ ಮಾಡಿಬಿಡುತ್ತಿದ್ದರು. ಅಷ್ಟಕ್ಕೂ, ರಾಮನಿಗಿಂತಲೂ ಮೋದಿ ದೊಡ್ಡವರಾದರೇ? ಎಂದು ಪ್ರಶ್ನಿಸಿದ್ದಾರೆ.

ಈ ಫೋಟೋವನ್ನು ಹಂಚಿಕೊಂಡಿರುವ ದೇಶದ ಖ್ಯಾತ ಪತ್ರಕರ್ತ ಹಾಗೂ ಆಲ್ಟ್‌ ನ್ಯೂಸ್‌ನ ಸಹ ಸಂಸ್ಥಾಪಕ ಮುಹಮ್ಮದ್ ಝುಬೇರ್, ಕರ್ನಾಟಕ ಬಿಜೆಪಿ ಐಟಿ ಸೆಲ್ ಅನ್ನು ನೋಡಿಕೊಳ್ಳುತ್ತಿರುವವರು ಯಾರು? ಎಂದು ಪ್ರಶ್ನಿಸಿ ಬೆಂಗಳೂರು ದಕ್ಷಿಣದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಟ್ಯಾಗ್ ಮಾಡಿದ್ದಾರೆ.

ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಸ್ಥಾನಕ್ಕೆ ಇತ್ತೀಚೆಗೆ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯುಯೆನ್ಸರ್‌ ಹಾಗೂ ಕರ್ಲಿ ಟೇಲ್ಸ್‌ ಯೂಟ್ಯೂಬ್ ಚಾನೆಲ್ ನಡೆಸುತ್ತಿರುವ ಕಾಮಿಯಾ ಜಾನಿ ಭೇಟಿ ಕೊಟ್ಟಿದ್ದರು. ಆಕೆ ಗೋಮಾಂಸದ ಪ್ರಚಾರಕಿ, ಆಕೆಯನ್ನು ದೇವಸ್ಥಾನಕ್ಕೆ ಹೇಗೆ ಬಿಟ್ರು? ಅಪವಿತ್ರಗೊಳಿಸಿದ ಆಕೆಯನ್ನು ಬಂಧಿಸಬೇಕು ಎಂದು ಆಗ್ರಹಿಸಿ ಬಲಪಂಥೀಯರು ದ್ವೇಷ ಹರಡಿದ್ದರು. ಅದನ್ನು ದೊಡ್ಡ ವಿವಾದ ಮಾಡಿದವರಿಗೆ ಈ ಫೋಟೋ ಯಾಕೆ ಕಾಣಿಸುತ್ತಿಲ್ಲ? ಎಂದು ಹಲವರು ಪ್ರಶ್ನಿಸಿದ್ದಾರೆ.

ಈ ನಡುವೆ ಈ ಫೋಟೋವನ್ನು ಬಿಜೆಪಿ ಬೆಂಬಲಿಗರು ಹಾಗೂ ಬಲಪಂಥೀಯ ಮಂದಿ, ಅದು ಬಾಲ ರಾಮ ಎನ್ನುವ ಮೂಲಕ ಸಮರ್ಥಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...