‘Make in India’: ಚಿಪ್ಸ್‌ನಿಂದ ಹಡಗುಗಳವರೆಗೆ ಎಲ್ಲವನ್ನು ತಯಾರಿಸುವ ಗುರಿ ಸರ್ಕಾರದ್ದು: ಪ್ರಧಾನಿ ಮೋದಿ

Date:

11 ವರ್ಷಗಳ ‘ಮೇಕ್ ಇನ್ ಇಂಡಿಯಾ’ ಅಭಿಮಾನವು ಚಿಪ್‌ಗಳಿಂದ ಹಿಡಿದು ಹಡಗುಗಳವರೆಗೆ ಎಲ್ಲವನ್ನೂ ಭಾರತದಲ್ಲಿಯೇ ತಯಾರಿಸುವ ಗುರಿಯನ್ನು ಹೊಂದಿದೆ. ‘ಆತ್ಮನಿರ್ಭರ ಭಾರತ’ ಘೋಷಣೆಗೆ ಸಹಕಾರಿಯಾಗಿದೆ. ಭಾರತದ ಆರ್ಥಿಕ ಬೆಳವಣಿಗೆಯು ದ್ವಿಗುಣಗೊಳ್ಳಲು ನೆರವು ನೀಡುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಉತ್ತರ ಪ್ರದೇಶದ ಗೇಟರ್ ನೋಯ್ಡಾದಲ್ಲಿ ನಡೆದ ‘ಅಂತರರಾಷ್ಟ್ರೀಯ ವ್ಯಾಪಾರ ಪ್ರದರ್ಶನ-2025’ (ಯುಪಿಐಟಿಎಸ್-2025) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಭಾರತವು ಸ್ವಾವಲಂಬಿಯಾಗಬೇಕು. ಜಾಗತಿಕ ಅಡೆತಡೆಗಳು ಮತ್ತು ವ್ಯಾಪಾರ ಸಂಬಂಧಗಳ ಅನಿಶ್ಚಿತತೆಗಳ ಹೊರತಾಗಿಯೂ, ಭಾರತದ ಬೆಳವಣಿಗೆ ಆಕರ್ಷಕವಾಗಿದೆ. ಅಡೆತಡೆಗಳು ನಮಗೆ ಅಡ್ಡಿಯಾಗುವುದಿಲ್ಲ. ಆದರೆ ಆ ಸಂದರ್ಭಗಳಲ್ಲಿಯೂ ಸಹ, ನಾವು ಹೊಸ ದಿಕ್ಕುಗಳನ್ನು ಹುಡುಕುತ್ತಿದ್ದೇವೆ. ಈ ಎಲ್ಲ ಅಡೆತಡೆಗಳ ನಡುವೆ, ಭಾರತವು ಮುಂಬರುವ ದಶಕಗಳಿಗಾಗಿ ಸದೃಢ ಅಡಿಪಾಯವನ್ನು ಬಲಪಡಿಸುತ್ತಿದೆ” ಎಂದು ಹೇಳಿದರು.

“ನಮ್ಮ ಸಂಕಲ್ಪ ಮತ್ತು ಮಂತ್ರ – ‘ಆತ್ಮನಿರ್ಭರ ಭಾರತ’. ಇತರರ ಮೇಲೆ ಅವಲಂಬಿತವಾಗಿರುವುದಕ್ಕಿಂತ ಅಸಹಾಯಕತೆ ಬೇರೆಯಿಲ್ಲ. ಒಂದು ದೇಶವು ಇತರರ ಮೇಲೆ ಹೆಚ್ಚು ಅವಲಂಬಿತವಾದಷ್ಟೂ, ಅದರ ಬೆಳವಣಿಗೆಯಲ್ಲಿ ಹೆಚ್ಚಿನ ರಾಜಿಯಾಗುತ್ತದೆ” ಎಂದು ಮೋದಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತ ಸರ್ಕಾರವು ದೇಶದಲ್ಲಿ ‘ಚಿಪ್ಸ್‌ನಿಂದ ಹಡಗು’ಗಳ ವರೆಗೆ ಎಲ್ಲವನ್ನೂ ತಯಾರಿಸುವ ಗುರಿಯನ್ನು ಹೊಂದಿದೆ. ಭಾರತದಲ್ಲಿ ತಯಾರಿಸಬಹುದಾದ ಪ್ರತಿಯೊಂದು ಉತ್ಪನ್ನವನ್ನು ಇಲ್ಲಿ ತಯಾರಿಸಬೇಕು” ಎಂದರು.

“ರಷ್ಯಾದ ಸಹಯೋಗದೊಂದಿಗೆ ಉತ್ತರ ಪ್ರದೇಶದ ಕಾರ್ಖಾನೆಯಲ್ಲಿ ‘AK-203’ ರೈಫಲ್‌ಗಳ ಉತ್ಪಾದನೆಯು ಶೀಘ್ರದಲ್ಲೇ ಪ್ರಾರಂಭವಾಗಲಿದೆ. ನಾವು ರಕ್ಷಣಾ ವಲಯವನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. ಪ್ರತಿಯೊಂದು ಘಟಕವು ‘ಮೇಡ್ ಇನ್ ಇಂಡಿಯಾ’ ಗುರುತು ಹೊಂದಿರುವ ವ್ಯವಸ್ಥೆಯನ್ನು ಸೃಷ್ಟಿಸುತ್ತಿದ್ದೇವೆ” ಎಂದು ಪ್ರತಿಪಾದಿಸಿದರು.

ಈ ಲೇಖನ ಓದಿದ್ದೀರಾ?: ಜಿಎಸ್‌ಟಿ 2.0 | ವಸ್ತುಗಳ ಬೆಲೆಯೇ 50% ಕಡಿತ; ತಪ್ಪು ಲೆಕ್ಕ ಹೇಳಿ ಪೇಚಿಗೆ ಸಿಲುಕಿದ ಬಿಜೆಪಿ ಸಂಸದ

“ನಮ್ಮ ಫಿನ್‌ಟೆಕ್ ವಲಯವು ಅಂತರ್ಗತ ಅಭಿವೃದ್ಧಿಯನ್ನು ಬಲಪಡಿಸಿದೆ. UPI, ಆಧಾರ್ ಸೇರಿದಂತೆ ನಾವು ಮಾಡಿದ ಮುಕ್ತ ವೇದಿಕೆಗಳು ಎಲ್ಲರಿಗೂ ಅಂತರ್ಗತವಾಗಿವೆ. ಇದರ ಪ್ರಭಾವ ಎಲ್ಲೆಡೆ ಕಂಡುಬರುತ್ತದೆ. ಮಾಲ್‌ನಲ್ಲಿ ಶಾಪಿಂಗ್ ಆಗಿರಲಿ ಅಥವಾ ಚಹಾ ಮಾರಾಟಗಾರರಾಗಿರಲಿ, ಎಲ್ಲರೂ ಯುಪಿಐ ಬಳಸುತ್ತಿದ್ದಾರೆ” ಎಂದು ಅವರು ಹೇಳಿದರು.

“ಭಾರತದಲ್ಲಿ ತಯಾರಾಗುವ ಎಲ್ಲ ಮೊಬೈಲ್ ಫೋನ್‌ಗಳಲ್ಲಿ, 55% ಫೋನ್‌ಗಳು ಉತ್ತರ ಪ್ರದೇಶದಲ್ಲಿ ತಯಾರಾಗುತ್ತಿವೆ. ಉತ್ತರ ಪ್ರದೇಶದ ಸೆಮಿಕಂಡಕ್ಟರ್ ವಲಯವು ಭಾರತದ ಸ್ವಾವಲಂಬನೆಯನ್ನು ಬಲಪಡಿಸುತ್ತದೆ. ನಮ್ಮ ಪಡೆಗಳು ಇತರ ರಾಷ್ಟ್ರಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಬಯಸುತ್ತವೆ” ಎಂದರು.

“ಇಂದು, ಸರ್ಕಾರಿ ಇ-ಮಾರ್ಕೆಟ್‌ಪ್ಲೇಸ್ (GeM) ಪೋರ್ಟಲ್ ಮೂಲಕ, ಸುಮಾರು 25 ಲಕ್ಷ ಮಾರಾಟಗಾರರು ಮತ್ತು ಸೇವಾ ಪೂರೈಕೆದಾರರು ತಮ್ಮ ಉತ್ಪನ್ನಗಳನ್ನು ಸರ್ಕಾರಕ್ಕೆ ಸರಬರಾಜು ಮಾಡುತ್ತಿದ್ದಾರೆ. ಹಿಂದಿನ ಸರ್ಕಾರಗಳಲ್ಲಿ, ಇದನ್ನು ನಿರೀಕ್ಷಿಸುವುದು ಅಸಾಧ್ಯವಾಗಿತ್ತು. ಆದರೆ, ಇಂದು, ಸಣ್ಣ ಅಂಗಡಿಯವರು ಸಹ ಈ ಪೋರ್ಟಲ್ ಮೂಲಕ ತಮ್ಮ ಸರಕುಗಳನ್ನು ಮಾರಾಟ ಮಾಡುತ್ತಿದ್ದಾರೆ. ಭಾರತವು 2047ರ ವೇಳೆಗೆ ‘ವಿಕ್ಷಿತ್ ಭಾರತ’ ಗುರಿಯನ್ನು ಸಾಧಿಸುವ ಗುರಿಯೊಂದಿಗೆ ಮುನ್ನಡೆಯುತ್ತಿದೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...