ಮೋದಿ ಮತ್ತೆ ಪ್ರಧಾನಿಯಾಗಬೇಕು; ಮರಳಿ ಬಿಜೆಪಿಗೆ ಬಂದಿದ್ದೇನೆ: ಜಗದೀಶ್‌ ಶೆಟ್ಟರ್

Date:

ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಲಿಂಗಾಯತ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಲೋಕಸಭಾ ಚುನಾವಣೆಗೂ ಮುನ್ನವೇ ಮರಳಿ ಮಾತೃ ಪಕ್ಷ ಬಿಜೆಪಿಗೆ ಮರಳಿದ್ದಾರೆ.

ಗುರುವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಶೆಟ್ಟರ್‌ ಅವರು ದಿಢೀರ್‌ ಮಾತುಕತೆ ನಡೆಸಿದ್ದು, ಅದು ಈಗ ಯಶಸ್ವಿಯಾಗಿದೆ.

ಜಗದೀಶ್ ಶೆಟ್ಟರ್ ಅವರು ಬಿಜೆಪಿಯ ದೆಹಲಿ ಕಚೇರಿಯಲ್ಲಿ ಅಧಿಕೃತವಾಗಿ ಮಾತೃಪಕ್ಷಕ್ಕೆ ಮರಳಿದರು. ಈ ವೇಳೆ ಮಾತನಾಡಿದ ಅವರು, “ವಿಧಾನಸಭಾ ಚುನಾವಣೆ ವೇಳೆ ಕೆಲವು ಕಾರಣಗಳಿಗಾಗಿ ಬಿಜೆಪಿ ತೊರೆದಿದ್ದೆ. ಮತ್ತೆ ನಮ್ಮ ನಾಯಕರು ಮರಳಿ ಪಕ್ಷಕ್ಕೆ ಬಾ ಎಂದು ವಿನಂತಿಸಿಕೊಂಡರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮರಳಿ ಪಕ್ಷಕ್ಕೆ ಬಂದಿರುವೆ. ಮೋದಿಯವರು ಮತ್ತೆ ಪ್ರಧಾನಿಯಾಗಬೇಕು. ಹೀಗಾಗಿ ಪಕ್ಷಕ್ಕೆ ಮತ್ತೆ ದುಡಿಯುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್‌ ನಾಯಕಾರದ ಡಿಸಿಎಂ ಡಿಕೆ ಶಿವಕುಮಾರ್‌ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚೆನ್ನಾಗಿ ತಮ್ಮ ಪಕ್ಷದಲ್ಲಿ ನಡೆಸಿಕೊಂಡಿದ್ದಾರೆ. ಅವರಿಗೆ ಈ ಮೂಲಕ ಧನ್ಯವಾದ ತಿಳಿಸುತ್ತೇನೆ. ಅಮಿತ್‌ ಶಾ ಅವರು ಗೌರವಯುತವಾಗಿ ನಡೆಸಿಕೊಂಡಿದ್ದಾರೆ. ಲೋಕಸಭೆಯಲ್ಲಿ ಮತ್ತೆ ಬಿಜೆಪಿ ಗೆಲ್ಲಬೇಕು” ಎಂದು ಹೇಳಿದರು.

“ಈಗಾಗಲೇ ಇ-ಮೇಲ್‌ ಮೂಲಕ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಕಳುಹಿಸಿದ್ದೇನೆ. ಕಾಂಗ್ರೆಸ್‌ನ ಎಲ್ಲ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದೇನೆ” ಎಂದರು.

ಪಕ್ಷಕ್ಕೆ ಹೆಚ್ಚಿನ ಶಕ್ತಿ: ವಿಜಯೇಂದ್ರ

ಹಿರಿಯ ಮುಖಂಡ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ್ದರಿಂದ ಪಕ್ಷಕ್ಕೆ ಹೆಚ್ಚಿನ ಶಕ್ತಿ ಬಂದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ದೆಹಲಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ತಮ್ಮ ವಿಧಾನಪರಿಷತ್ ಸ್ಥಾನಕ್ಕೂ ರಾಜೀನಾಮೆ ನೀಡಿ ಮತ್ತೊಮ್ಮೆ ಬಿಜೆಪಿ ಸೇರಿದ್ದಾರೆ. ಅವರ ಮನೆಗೇ ಅವರು ಮರಳಿ ಬಂದಿದ್ದಾರೆ” ಎಂದರು.

“ರಾಜ್ಯ ಬಿಜೆಪಿ ಬೆಳವಣಿಗೆ ದೃಷ್ಟಿಯಿಂದ ಇದೊಂದು ದೊಡ್ಡ ಶಕ್ತಿ ಎಂದ ಅವರು, ಪಕ್ಷದ ಹಿರಿಯರು, ಕಾರ್ಯಕರ್ತರ ಅಪೇಕ್ಷೆ ಇದಾಗಿತ್ತು. ಈ ಕುರಿತು ಹಲವಾರು ದಿನಗಳಿಂದ ಚರ್ಚೆ ಆಗಿತ್ತು. ಇವತ್ತು ಬೆಳಿಗ್ಗೆ ಬಿಜೆಪಿ ವರಿಷ್ಠರಾದ, ಮಾನ್ಯ ಗೃಹ ಸಚಿವ ಅಮಿತ್ ಶಾ ಅವರನ್ನು ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಮತ್ತಿತರ ಹಿರಿಯರೊಂದಿಗೆ ಭೇಟಿ ಮಾಡಿ, ಚರ್ಚಿಸಿ ಯಾವುದೇ ಅಪೇಕ್ಷೆ ಇಲ್ಲದೆ ಬಿಜೆಪಿ ಸೇರಿದ್ದಾರೆ ಎಂದು ತಿಳಿಸಿದರು. ರಾಷ್ಟ್ರೀಯ ಅಧ್ಯಕ್ಷ ನಡ್ಡಾಜೀ, ಅಮಿತ್ ಶಾಜೀ, ರಾಜ್ಯದ ಕಾರ್ಯಕರ್ತರು ಅವರ ಮರಳುವಿಕೆಗೆ ಸಂತೋಷ ವ್ಯಕ್ತಪಡಿಸಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...