ಮೋದಿ ಉಪನಾಮ ಪ್ರಕರಣ | ಸಂಸದರಾಗಿ ಅನರ್ಹಗೊಳಿಸುವ ಶಿಕ್ಷೆ ವಿಧಿಸಲಾಗಿದೆ: ರಾಹುಲ್ ಗಾಂಧಿ

Date:

  • ಮೋದಿ ಉಪನಾಮ ಪ್ರಕರಣದಲ್ಲಿ ರಾಹುಲ್‌ಗೆ ಶಿಕ್ಷೆ
  • ಪೂರ್ಣೇಶ್ ಮೋದಿಗೆ ದೂರು ಸಲ್ಲಿಸುವ ಹಕ್ಕಿಲ್ಲ

ಮೋದಿ ಉಪನಾಮ ಪ್ರಕರಣದ ಕುರಿತ ಸೂರತ್ ನ್ಯಾಯಾಲಯ ತೀರ್ಪು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಿದ್ದಾರೆ. ನ್ಯಾಯಾಲಯ ತೀರ್ಪಿನ ಕುರಿತು ಅಸಮಾಧಾನ ಹೊರಹಾಕಿದ್ದಾರೆ.

ಮೋದಿ ಉಪನಾಮ ವಿವಾದಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ಪರಿಣಾಮ ಸಂಸತ್ ಸಚಿವಾಲಯ, ರಾಹುಲ್ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದೆ.

ತಮಗೆ ವಿಧಿಸಲಾಗಿರುವ ಜೈಲು ಶಿಕ್ಷಯನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿರುವ ರಾಹುಲ್‌ಗಾಂಧಿ, “ಸಂಸತ್ ಸ್ಥಾನವನ್ನು ಗಣನೆಗೆ ತೆಗೆದುಕೊಂಡು ಶಿಕ್ಷೆಯ ನಿರ್ಣಯದ ಹಂತದಲ್ಲಿ ಕಠಿಣವಾಗಿ ನಡೆಸಿಕೊಳ್ಳಲಾಗಿದೆ. ಇದು ಭರಿಸಲಾಗದ ನಷ್ಟ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಧಿಸಿರುವ ಶಿಕ್ಷೆಯ ಪ್ರಮಾಣವು ತಮ್ಮನ್ನು ಸಂಸತ್ ಸ್ಥಾನದಿಂದ ಅನರ್ಹತೆಗೊಳಿಸಲು ದಾರಿ ಮಾಡಿಕೊಟ್ಟಿದೆ” ಎಂದು ರಾಹುಲ್ ಗಾಂಧಿ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

“ನ್ಯಾಯಾಲಯ ವಿಧಿಸಿರುವ ಗರಿಷ್ಠ ಶಿಕ್ಷೆಯ ತೀರ್ಪು ಕಾನೂನಿಗೆ ವಿರುದ್ಧವಾಗಿದೆ. ಪ್ರಸ್ತುತ ಪ್ರಕರಣದಲ್ಲಿ ಅನಗತ್ಯವಾಗಿ ರಾಜಕೀಯ ಸ್ಥಾನಮಾನ ಮತ್ತು ಇನ್ನಿತರೆ ವಿಷಯಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

“ಮೋದಿ ಉಪನಾಮ ಕುರಿತ ಹೇಳಿಕೆ ತಪ್ಪು ಎನ್ನುವುದಕ್ಕೆ ಪೂರಕವಾದ ಸಾಕ್ಷಿ ಒದಗಿಸಿಲ್ಲ. ಅಪರಾಧವನ್ನು ಕಾನೂನಿನ ಪ್ರಕಾರ ಸಾಬೀತುಪಡಿಸಲಾಗಿಲ್ಲ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹೊಸ ಸಂಸತ್ತಿನ ಹೊರಗೆ ಪ್ರಧಾನಿ ಮೋದಿ ಪದವಿ ದಾಖಲೆಗಳ ಪ್ರದರ್ಶನವಾಗಲಿ; ಸಂಜಯ್‌ ರಾವುತ್ ಆಗ್ರಹ

“ಸಂಸತ್ ಸ್ಥಾನದ ಅನರ್ಹತೆಯು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯಲ್ಲಿನ ಮತದಾರರ ಆಯ್ಕೆಗೆ ಅಡ್ಡಿಪಡಿಸುತ್ತದೆ. ಉಪ ಚುನಾವಣೆಯು ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗಲಿದೆ” ಎಂದು ಮೇಲ್ಮನವಿಯಲ್ಲಿ ವಿವರಿಸಿದ್ದಾರೆ.

“ದೂರುದಾರ ಪೂರ್ಣೇಶ್ ಮೋದಿ ದೂರು ಸಲ್ಲಿಸಲು ಯಾವುದೇ ಹಕ್ಕನ್ನು ಹೊಂದಿಲ್ಲ. ‘ಕಳ್ಳರೆಲ್ಲ ಮೋದಿ ಎನ್ನುವ ಉಪನಾಮ ಹೊಂದಿದ್ದಾರೆ’ ಎನ್ನುವ ಒಂದೇ ಒಂದು ಹೇಳಿಕೆಗೆ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇದು ಅತ್ಯಂತ ಕಠಿಣ ನಿರ್ಧಾರ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...