ಸಂಸದರಾಗಿ ಮೋದಿ ಪ್ರಮಾಣ ವಚನ: ಸಂವಿಧಾನದ ಪ್ರತಿ ಪ್ರದರ್ಶಿಸಿ ನೆನಪಿಸಿದ ‘ಇಂಡಿಯಾ’ ಒಕ್ಕೂಟ

Date:

ನೂತನ ಸಂಸತ್‌ ಭವನ ಸೆಂಟ್ರಲ್ ವಿಸ್ಟಾದಲ್ಲಿ ಇಂದಿನಿಂದ(ಜೂನ್ 24) 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭಗೊಂಡಿದೆ. ನೂತನ ಸಂಸದರಿಗೆ ಹಂಗಾಮಿ ಸ್ಪೀಕರ್ ಭತೃಹರಿ ಮಹತಾಬ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಪ್ರಮಾಣ ವಚನ ಸ್ವೀಕಾರದ ಸಂಪ್ರದಾಯದಂತೆ ಲೋಕಸಭೆಯ ನಾಯಕ ಹಾಗೂ ಪ್ರಧಾನಿಯಾಗಿರುವ ನರೇಂದ್ರ ಮೋದಿಯವರು ಮೊದಲಿಗೆ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ಲೋಕಸಭಾ ಸ್ಪೀಕರ್ ಮುಂದಿದ್ದ ಪೀಠದ ಮುಂದೆ ಬಂದು ನಿಂತರು. ಈ ವೇಳೆ ಎದುರು ಬದಿಯಲ್ಲಿ ಕುಳಿತಿದ್ದ ರಾಹುಲ್ ಗಾಂಧಿ ನೇತೃತ್ವದ ಇಂಡಿಯಾ ಒಕ್ಕೂಟದ ಸದಸ್ಯರು ಸಂವಿಧಾನದ ಪ್ರತಿಯನ್ನು ಪ್ರದರ್ಶಿಸುವ ಮೂಲಕ ‘ಚಾರ್ ಸೌ ಪಾರ್’ ಭಾಷಣವನ್ನು ನೆನಪಿಸಿದ ಪ್ರಸಂಗ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸತ್‌ನ ಒಳಗೂ ಹೊರಗೂ ಒಗ್ಗಟ್ಟು ಪ್ರದರ್ಶಿಸಿದ ವಿಪಕ್ಷದ ಸಂಸದರು

18ನೇ ಲೋಕಸಭೆಯ ಮೊದಲ ಅಧಿವೇಶನದ ಮೊದಲ ದಿನವೇ ಸಂಸತ್‌ನ ಒಳಗಡೆ ಮಾತ್ರವಲ್ಲದೇ, ಹೊರಗಡೆ ಕೂಡ ವಿಪಕ್ಷದ ಸಂಸದರು ಒಗ್ಗಟ್ಟು ಪ್ರದರ್ಶಿಸಿದ್ದಾರೆ.

 

18ನೇ ಲೋಕಸಭೆಯ ಮೊದಲ ಅಧಿವೇಶನಕ್ಕೆ ಇಂಡಿಯಾ ಮೈತ್ರಿಕೂಟದ ನಾಯಕರು ಜೊತೆಯಾಗಿ ಸಂಸತ್ ಪ್ರವೇಶಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಈ ವೇಳೆ ಎಲ್ಲ ನಾಯಕರು ಸಂವಿಧಾನ ಪುಸ್ತಕವನ್ನು ಹಿಡಿದುಕೊಂಡಿದ್ದರು. “ನಾವು ಸಂವಿಧಾನ ಉಳಿಸುತ್ತೇವೆ’, ‘ಪ್ರಜಾಪ್ರಭುತ್ವ ಉಳಿಸಿ’, ‘ಲಾಂಗ್ ಲೈವ್ ಕಾನ್‌ಸ್ಟಿಟ್ಯೂಷನ್” ಎಂಬ ಘೋಷಣೆಗಳನ್ನು ಕೂಡ ಕೂಗಿದರು.

ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ, “ಸಂವಿಧಾನ ಉಳಿಸಲು ನಾವು ಕಟಿಬದ್ಧರಾಗಿದ್ದೇವೆ. ಅದ್ದರಿಂದ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಸಂವಿಧಾನ ಪುಸ್ತಕ ಹಿಡಿದಿದ್ದೇವೆ. ಯಾವ ಶಕ್ತಿಯು ಭಾರತದ ಸಂವಿಧಾನವನ್ನು ಮುಟ್ಟಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ನಾವು ಸಾರುತ್ತಿದ್ದೇವೆ” ಎಂದರು.

ಜೂನ್ 26ರಂದು ಲೋಕಸಭಾ ಸ್ಪೀಕರ್ ಆಯ್ಕೆ ನಡೆಯಲಿದ್ದು, 27ರಂದು ರಾಷ್ಟ್ರಪತಿ ದೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

‘ಸಂವಿಧಾನದ ಬದಲಾವಣೆಗೆ 400 ಸೀಟುಗಳು ಬೇಕು’ ಎಂದಿದ್ದ ಬಿಜೆಪಿಯ ನಾಯಕರು

ಬಿಜೆಪಿ ಈ ದೇಶದ ಸಂವಿಧಾನ ಬದಲಿಸಬೇಕಾದರೆ 400 ಸೀಟುಗಳು ನರೇಂದ್ರ ಮೋದಿಯವರ ನೇತೃತ್ವದಲ್ಲಿ ಗೆಲ್ಲಬೇಕಿದೆ ಎಂದು ಬಿಜೆಪಿಯ ಅನಂತ್ ಕುಮಾರ್ ಹೆಗಡೆ ಸೇರಿದಂತೆ ಹಲವು ಮುಖಂಡರು 2024ರ ಲೋಕಸಭಾ ಚುನಾವಣೆಗೂ ಮುನ್ನ ಹೇಳಿದ್ದರು.

ಇದು ಚುನಾವಣೆಯಲ್ಲಿ ವಿಪಕ್ಷಗಳು ಅಸ್ತ್ರವಾಗಿ ಬಳಸಿಕೊಂಡಿತ್ತು. ಸಂವಿಧಾನ ಬದಲಾವಣೆ ಹೇಳಿಕೆಯು ಬಹುಮುಖ್ಯ ಪಾತ್ರ ವಹಿಸಿದ್ದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ತಿರುಗು ಬಾಣವಾಗಿತ್ತು. ಅಲ್ಲದೇ, 272ರ ಸರಳ ಬಹುಮತ ಪಡೆಯಲು ಕೂಡ ವಿಫಲವಾಗಿತ್ತು. ಸದ್ಯ ಎನ್‌ಡಿಎ ಮಿತ್ರ ಪಕ್ಷಗಳ ಬೆಂಬಲದಿಂದ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ, ಅಧಿಕಾರ ಸ್ವೀಕರಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...