ಜ.19ರಂದು ಕರ್ನಾಟಕಕ್ಕೆ ಮೋದಿ ಭೇಟಿ; ‘ನಿದ್ದೆಯಿಂದ ಎದ್ದೇಳಿ ಮೋದಿ’ ಪೋಸ್ಟರ್‌ಗಳು ವೈರಲ್

Date:

ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 19 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಕಲಬುರಗಿ ಮತ್ತು ಬೆಂಗಳೂರಿಗೆ ಅವರು ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬೆನ್ನಲ್ಲೇ, ‘ನಿದ್ದೆಯಿಂದ ಎದ್ದೇಳಿ ಮೋದಿ’ ಎಂಬ ಟ್ಯಾಗ್‌ಲೈನ್ ಜೊತೆಗೆ ಹಲವಾರು ಪೋಸ್ಟರ್‌ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿವೆ.

ಕರ್ನಾಟಕಕ್ಕೆ ಬರಲಿರುವ ಮೋದಿ ಬೆಂಗಳೂರಿನ ದೇವನಹಳ್ಳಿ ತಾಲೂಕಿನ ಭಟ್ಟರ ಮಾರನಹಳ್ಳಿಯಲ್ಲಿ ಬಿಐಇಟಿಸಿ ಉದ್ಘಾಟನೆ ಮತ್ತು ಬೋಯಿಂಗ್ ಸುಕನ್ಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಅಲ್ಲದೆ, ಬೆಂಗಳೂರಿನಲ್ಲಿ ರೋಡ್‌ಶೋ ನಡೆಸುವ ಸಾಧ್ಯತೆಗಳೂ ಇವೆ ಎನ್ನಲಾಗಿದೆ.

ಬರದ ಸಮಯದಲ್ಲಿಯೂ ರಾಜ್ಯಕ್ಕೆ ಬಾರದ ಮೋದಿ ಅವರು ಇದೀಗ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದು, ಅವರು ವಿರುದ್ಧ ಪೋಸ್ಟರ್‌ಗಳು ವೈರಲ್ ಅಗುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವರು ಪೋಸ್ಟರ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೋದಿ ಅವರು ನಿದ್ರಿಸುತ್ತಿರುವಂತೆ ವ್ಯಂಗ್ಯವಾಗಿ ಚಿತ್ರಿಸಲಾಗಿರುವ ಪೋಸ್ಟರ್‌ಗಳಲ್ಲಿ, “ಬಿಜೆಪಿ ಸಚಿವರ ಕಮಿಷನ್ ಕಿರುಕುಳದಿಂದ ಗುತ್ತಿಗೆದಾರ ಆತ್ಮಹತ್ಯೆ. ಬೇಸತ್ತ ಜೀವವೊಂದು ಕೊನೆಯಾಯ್ತು. ಪ್ರಧಾನಿ ಪ್ರತಿಕ್ರಿಯೆ ಎಂಬುದು ಹಾರಿಹೋಯ್ತು” ಎಂದು ಬರೆಯಲಾಗಿದೆ.

ಮತ್ತೊಂದರಲ್ಲಿ, “ಕೋವಿಡ್-19 ನಿರ್ವಹಣೆ ವೇಳೆ 40,000 ಕೋಟಿ ರೂ. ಅವ್ಯವಹಾರ ನಡೆದಿದೆ. 45 ರೂ. ಮಾಸ್ಕ್‌ಅನ್ನು 485 ರೂ.ಗೆ ಮಾರಾಟ ಮಾಡಿದ್ದಾರೆ. ಪ್ರಧಾನಿಗಳು ಪ್ರತಿಕ್ರಿಯಿಸದೆ ಗೊರಕೆ ಹೊಡೆಯುತ್ತಿದ್ದಾರೆ” ಎಂದು ವ್ಯಂಗ್ಯ ಮಾಡಲಾಗಿದೆ.

 

ಇನ್ನೊಂದರಲ್ಲಿ, “ಕರ್ನಾಟಕವು ಬಾಯಾರಿಕೆಯಿಂದ ಮನವಿ ಮಾಡಿದರೂ ಪ್ರಮುಖ ಯೋಜನೆಗಳಾದ ಕೃಷ್ಣಾ ಮೇಲ್ದಂಡೆ ಮತ್ತು ಮಹದಾಯಿ ಬರಿದಾಗಿಯೇ ಉಳಿದವು. ಪ್ರಧಾನಿ ಪರಿಹಾರಗಳನ್ನು ತಲೆಯಡಿಗಿಟ್ಟುಕೊಂಡು ಮಲಗಿದರು” ಎಂದು ಕಿಡಿಕಾರಲಾಗಿದೆ.

ಈ ಸುದ್ದಿ ಓದಿದ್ದೀರಾ?: ಮೋದಿ ಪದವಿ ಪ್ರಕರಣ: ಕೇಜ್ರಿವಾಲ್ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ತಡೆ

ಮತ್ತೊಂದೆಡೆ, “47 ವರ್ಷಗಳ ಇತಿಹಾಸದಲ್ಲೇ ಕರ್ನಾಟಕವು ಅತ್ಯಂತ ಕೆಟ್ಟ ಬರ ಪರಿಸ್ಥಿತಿ ಎದುರಿಸುತ್ತಿದೆ. 30,000 ಕೋಟಿ ರೂ. ನಷ್ಟವಾಗಿದೆ. ಕರ್ನಾಟಕದ ಬರ ಪರಿಸ್ಥಿತಿಗೆ ಸ್ಪಂದಿಸುವ ಬದಲು ಪ್ರಧಾನಿ ಗಾಢ ನಿದ್ರೆಗೆ ಜಾರಿದ್ದಾರೆ” ಎಂದು ಟೀಕಿಸಲಾಗಿದೆ.

ಸದ್ಯ ಈ ಪೋಸ್ಟರ್‌ಗಳನ್ನು ಹಲವಾರು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಪೋಸ್ಟರ್‌ಗಳು ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.

ಈ ಸುದ್ದಿ ಓದಿದ್ದೀರಾ?: ‘ಹಸಿದ ಹೊಟ್ಟೆಯಲ್ಲಿ ಭಜನೆ ಮಾಡಲಾರೆವು’: ಅಯೋಧ್ಯೆಯ ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡವರ ಅಳಲು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...