ಕರ್ನಾಟಕಕ್ಕೆ ಇಂದು ಮೋದಿ; ಹಾಸನ ಪೆನ್‌ಡ್ರೈವ್ ಪ್ರಕರಣದ ಬಗ್ಗೆ ಮಾತಾಡ್ತಾರಾ ಪ್ರಧಾನಿ?

Date:

ಮಹಿಳೆಯರ ರಕ್ಷಣೆಗಾಗಿ ‘ಬೇಟಿ ಬಚೋವೋ – ಬೇಟಿ ಪಡಾವೋ’ ಎಂಬ ಘೋಷಣೆಯನ್ನು ಮೊಳಗಿಸಿದ್ದ ಪ್ರಧಾನಿ ಮೋದಿ ಅವರು ಭಾನುವಾರ ಕರ್ನಾಟಕಕ್ಕೆ ಬರಲಿದ್ದಾರೆ. ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಬೃಹತ್‌ ಚುನಾವಣಾ ರ್‍ಯಾಲಿ ನಡೆಸಲಿದ್ದಾರೆ. ಇದೇ ಸಮಯದಲ್ಲಿ ಅವರು ಹಾಸನದ ಪೆನ್‌ಡ್ರೈವ್ ಪ್ರಕರಣದ ಬಗ್ಗೆ ಮಾತನಾಡುತ್ತಾರೆಯೇ ಎಂಬ ಪ್ರಶ್ನೆ ದೇಶಾದ್ಯಂತ ವ್ಯಕ್ತವಾಗಿದೆ.

ಹಾಸನದಲ್ಲಿ ಸುಮಾರು 2,900 ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ಗಳನ್ನು ಎಸೆಯಾಗಿದ್ದರು. ಆ ವಿಡಿಯೋಗಳಲ್ಲಿರುವುದು ಸಂಸದ ಪ್ರಜ್ವಲ್ ರೇವಣ್ಣ ಎಂದು ಹೇಳಲಾಗುತ್ತಿದೆ. ವಿಡಿಯೋದಲ್ಲಿ ಕಾಮುಕ ಯುವ ನಾಯಕ ನೂರಾರು ಹೆಣ್ಣು ಮಕ್ಕಳನ್ನು ಪುಸಲಾಯಿಸಿ, ಆಮಿಷವೊಡ್ಡಿ, ಬೆದರಿಸಿ ತನ್ನ ಕಾಮವಾಂಚೆ ತೀರಿಸಿಕೊಂಡಿದ್ದಾರೆ. ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿಸಿದೆ.

ಕೃತ್ಯ ಎಸಗಿರುವ ಕಾಮುಕ ಸಂಸದ ಪ್ರಜ್ವಲ್ ರೇವಣ್ಣ ಎನ್ನಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಆತ ದೇಶಬಿಟ್ಟು ಪರಾರಿಯಾಗಿದ್ದಾನೆ. ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ಬಿಜೆಪಿ-ಜೆಡಿಎಸ್‌ನ ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅಲ್ಲದೆ, ಮೈಸೂರಿನಲ್ಲಿ ನಡೆದ ರ್‍ಯಾಲಿಯಲ್ಲಿ ಮೋದಿ ಅವರು ಪ್ರಜ್ವಲ್‌ಗೆ ಮತ ಹಾಕುವಂತೆ ಜನರಲ್ಲಿ ಮನವಿ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೋದಿ ಮತ ಯಾಚನೆ ಮಾಡಿದ್ದ ಪ್ರಜ್ವಲ್‌, ಈಗ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ತನ್ನ ಕೃತ್ಯವನ್ನು ತಾನೇ ವಿಡಿಯೋ ಮಾಡಿಟ್ಟುಕೊಂಡಿದ್ದಾನೆ. ಈಗ ಆತನ ವಿಕೃತ ಕಾಮವಾಂಚೆ ಬಯಲಾಗಿದೆ. ಆದರೂ, ಬಿಜೆಪಿ ಈವರೆಗೆ ಕೃತ್ಯವನ್ನು ಖಂಡಿಸಿಲ್ಲ. ಬಿಜೆಪಿಯ ಯಾವುದೇ ನಾಯಕ ಕೃತ್ಯದ ಬಗ್ಗೆ ಒಂದೇ ಒಂದು ಹೇಳಿಕೆಯನ್ನೂ ನೀಡಿಲ್ಲ.

ಈಗ ಸ್ವತಃ ಪ್ರಧಾನಿ ಮೋದಿ ಅವರೇ ಕರ್ನಾಟಕಕ್ಕೆ ಬರುತ್ತಿದ್ದಾರೆ. ಸ್ತ್ರೀ ಶಕ್ತಿ ಬಗ್ಗೆ ಮಾತನಾಡುವ, ಬೇಟಿ ಬಚಾವೋ – ಬೇಟಿ ಪಡಾವೋ ಎನ್ನುವ ಮೋದಿ ಅವರು ಇಂತಹದೊಂದು ಮಹಾ ಕೃತ್ಯದ ಬಗ್ಗೆ ಮಾತನಾಡದಿದ್ದರೆ, ಪ್ರಧಾನಿಯಾಗಿ ಅವರಿಗೆ ಶ್ರೇಯಸ್ಸಲ್ಲ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದೇಶದ ಜವಬ್ದಾರಿ ಹೊತ್ತಿರುವ ಮೋದಿ ಅವರು ಕೃತ್ಯದ ಬಗ್ಗೆ ಮಾತನಾಡಬೇಕು. ವಿಕೃತ ಕಾಮುಕನಿಗೆ ಶಿಕ್ಷೆ ವಿಧಿಸುವ ಹಾಗೂ ಸಂತ್ರಸ್ತ ಹೆಣ್ಣು ಮಕ್ಕಳಿಗೆ ನ್ಯಾಯ ಒದಗಿಸುವ ಭರವಸೆ ನೀಡಬೇಕೆಂದು ಹಲವರು ಆಗ್ರಹಿಸಿದ್ದಾರೆ.

ಆದರೆ, ತಮ್ಮದೇ ಎನ್‌ಡಿಎ ಅಭ್ಯರ್ಥಿಯೇ ಇಂತಹ ವಿಕೃತ ಕೃತ್ಯ ನಡೆಸಿದ್ದಾರೆ ಎನ್ನಲಾಗುತ್ತಿರುವ ಸಮಯದಲ್ಲಿ, ಮೋದಿ ಅವರು ಕೃತ್ಯದ ಬಗ್ಗೆ ಮಾತನಾಡುವರೇ ಎಂಬುದು ಅನುಮಾನ ಹುಟ್ಟಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...