ಸಿಜೆಐ ಮನೆಗೆ ಮೋದಿ ಭೇಟಿ ಹಿಂದಿದೆಯೇ ರಾಜಕೀಯ ದುರುದ್ದೇಶ?

Date:

ಸಿಜೆಐ ಚಂದ್ರಚೂಡ್ ಅವರು ಮಹಾರಾಷ್ಟ್ರ ಮೂಲದವರು. ಆ ರಾಜ್ಯದಲ್ಲಿ ಗಣಪತಿ ಪೂಜೆ ಬೇರೆಲ್ಲಡೆಗಿಂತ ಜನಪ್ರಿಯ ಹಬ್ಬ. ಈ ವರ್ಷದ ಅಂತ್ಯದಲ್ಲಿ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆಯೂ ನಡೆಯಲಿದೆ. ಇಂತಹ ಸಮಯದಲ್ಲಿ ಚಂದ್ರಚೂಡ್ ಮನೆಗೆ ಮಹಾರಾಷ್ಟ್ರದ ಮರಾಠಿಗರ ಉಡುಗೆ ಧರಿಸಿ ಮೋದಿ ಅವರು ಭೇಟಿ ನೀಡಿದ್ದಾರೆ. ಪೂಜೆಯಲ್ಲಿ ಭಾಗವಹಿಸಿದ್ದಾರೆ. ಇದು, ಮಹಾರಾಷ್ಟ್ರ ಜನರಿಗೆ ರಾಜಕೀಯ ಸಂದೇಶವನ್ನೂ ನೀಡುತ್ತದೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಗಣಪತಿ ಪೂಜೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದಾರೆ. ಸಿಜೆಐ ಅವರ ಮನೆಗೆ ಮೋದಿ ಭೇಟಿ ನೀಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ನೆಟ್ಟಿಗರಂತು ಮೋದಿ ಮತ್ತು ಸಿಜೆಐ ಇಬ್ಬರನ್ನು ತರಾಟೆಗೆ ತೆಗೆದುಕೊಂಡಿದಾರೆ. ಏಕೆಂದರೆ, ಉನ್ನತ ಹುದ್ದೆಯಲ್ಲಿರುವವರು ಹೀಗೆ ನ್ಯಾಯಮೂರ್ತಿಗಳನ್ನು ಭೇಟಿ ಮಾಡುವಂತಿಲ್ಲ. ಈ ಬಗ್ಗೆ ಭಾರತದ ಕಾನೂನು ಪುಸ್ತಕದಲ್ಲಿಯೇ ವಿವರಿಸಲಾಗಿದೆ. ಹೀಗಾಗಿಯೇ, ಮೋದಿ ಅವರು ಸಿಜೆಐ ನಿವಾಸಕ್ಕೆ ಭೇಟಿ ನೀಡಿರುವುದು ಭಾರೀ ಪರ-ವಿರೋಧ ಚರ್ಚೆಗಳನ್ನು ಹುಟ್ಟುಹಾಕಿದೆ.

ಅಂದಹಾಗೆ, ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳು ಗೌಪ್ಯವಾಗಿ ದೇಣಿಗೆ ಪಡೆಯುವುದು ಅಸಂಬದ್ಧ ಎಂದು ಹೇಳಿದ್ದ ನ್ಯಾಯಮೂರ್ತಿಗಳ ಮನೆಯಲ್ಲಿ ಪ್ರಧಾನಿ ಮೋದಿ ಪ್ರತ್ಯಕ್ಷ ಆಗಿದ್ದಾರೆ. ನ್ಯಾಯಮೂರ್ತಿಗಳು ಅಥವಾ ಸರ್ಕಾರಿ ನೌಕರರು ಸರ್ಕಾರದ ಪರವಾಗಿ ಯಾವುದೇ ಹೇಳಿಕೆಗಳನ್ನು ನೀಡುವಂತಿಲ್ಲ. ಅದರಲ್ಲೂ ನ್ಯಾಯಮೂರ್ತಿಗಳು ಹೆಚ್ಚಿನ ಜವಾಬ್ದಾರಿ ಹೊಂದಿರುವುದರಿಂದ, ಅವರು ಅಧಿಕಾರದಲ್ಲಿರುವವರೊಂದಿಗೆ ಹೆಚ್ಚಿನ ಬಾಂಧವ್ಯ ಬಳೆಸುವಂತಿಲ್ಲ. ನ್ಯಾಯಮೂರ್ತಿಗಳು ಹೇಗಿರಬೇಕು ಎಂಬುದನ್ನು ಸಂವಿಧಾನದಲ್ಲಿಯೇ ವಿವರಿಸಲಾಗಿದೆ. ಅದರಂತೆಯೇ ಅವರು ನಡೆದುಕೊಳ್ಳಬೇಕು.

ಆದರೆ, ಮೋದಿ ಅವರು ಸಿಜೆಐ ಮನೆಗೆ ಖಾಸಗಿ ಭೇಟಿ ನೀಡಿದ್ದಾರೆ. ಇದರ ವಿರುದ್ಧ ನ್ಯಾಯವಾದಿಗಳು, ವಿಪಕ್ಷಗಳ ನಾಯಕರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು, ”ಸಿಜೆಐ ಚಂದ್ರಚೂಡ್ ಅವರು ಮೋದಿಯವರನ್ನು ಅವರ ನಿವಾಸಕ್ಕೆ ಖಾಸಗಿ ಭೇಟಿ ಮಾಡಲು ಅವಕಾಶ ಮಾಡಿಕೊಟ್ಟಿರುವುದು ಆಘಾತಕಾರಿಯಾಗಿದೆ. ಇದು ಸರ್ಕಾರ ಸಂವಿಧಾನದ ಮಿತಿಯಲ್ಲಿ ಕಾರ್ಯಾಚರಿಸುತ್ತಿದೆ ಅಂತ ಖಚಿತಪಡಿಸುವ ಮತ್ತು ಕಾರ್ಯಾಂಗದಿಂದ ನಾಗರಿಕರ ಮೂಲಭೂತ ಹಕ್ಕನ್ನು ರಕ್ಷಿಸುವ ಜವಾಬ್ದಾರಿಯನ್ನು ಹೊಂದಿರುವ ನ್ಯಾಯಾಂಗಕ್ಕೆ ಕೆಟ್ಟ ಸಂದೇಶವನ್ನು ರವಾನಿಸುತ್ತದೆ. ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವೆ ದೀರ್ಘವಾದ ಅಂತರ ಇರಬೇಕು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧಿಕಾರದಲ್ಲಿರುವ ಪ್ರಧಾನಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ನಿವಾಸಕ್ಕೆ ಭೇಟಿ ನೀಡುವುದು ನ್ಯಾಯಾಂಗದ ಸ್ವತಂತ್ರತೆ ಮೇಲೆ ಅನುಮಾನಗಳನ್ನೂ, ನ್ಯಾಯಾಂಗದ ಸ್ವಾತಂತ್ರ್ಯ ಮತ್ತು ನಿಷ್ಪಕ್ಷಪಾತದ ಬಗ್ಗೆ ಕಳವಳವನ್ನೂ ಉಂಟುಮಾಡುತ್ತದೆ. ಪ್ರಧಾನಿಯ ಭೇಟಿಯು ನ್ಯಾಯಾಂಗದ ಮೇಲೆ ಪ್ರಭಾವ ಬೀರಬಹುದು. ಮಾತ್ರವಲ್ಲದೆ, ಜಾತ್ಯತೀತ ರಾಷ್ಟ್ರದಲ್ಲಿ ಜಾತ್ಯತೀತತೆಯನ್ನು ಪ್ರತಿನಿಧಿಸುವ ಸಿಜೆಐ, ಒಂದು ಧಾರ್ಮಿಕತೆಯನ್ನು ಸಾಮಾಜಿಕವಾಗಿ ಪ್ರತಿಪಾದಿಸುವುದು, ಒಂದು ಧರ್ಮವನ್ನು ಪೂಜಿಸುವುದು ಸರಿಯಲ್ಲ. ಮುಖ್ಯವಾಗಿ, ನ್ಯಾಯಾಂಗದ ಕೆಲಸ ಪ್ರಜೆಗಳ ಭದ್ರತೆಯನ್ನ ಕಾಪಾಡುವುದು, ಹಕ್ಕುಗಳನ್ನು ರಕ್ಷಿಸುವುದು. ಆದರೆ, ಸಿಜೆಐ ಚಂದ್ರಚೂಡ್ ಅವರು ಒಂದು ಸಮುದಾಯದ ಧಾರ್ಮಿಕತೆಯನ್ನು ಪ್ರಧಾನಿಯೊಂದಿಗೆ ಪ್ರತಿನಿಧಿಸಿದ್ದಾರೆ. ಅದೂ, ಕೋಮುದ್ವೇಷದೊಂದಿಗೆ ಚುನಾವಣೆಯನ್ನು ಎದುರಿಸಿದ ಮೋದಿ ಅವರೊಂದಿಗೆ ಸಿಜೆಐ ಧಾರ್ಮಿಕತೆಯನ್ನು ಪ್ರತಿನಿಧಿಸುವುದು ದೇಶಕ್ಕೆ ಬೇರೆಯದ್ದೇ ರೀತಿಯ ಸಂದೇಶವನ್ನು ರವಾನಿಸುತ್ತದೆ. ಈ ಎಚ್ಚರಿಕೆ ಸಿಜೆಐ ಅವರಲ್ಲಿ ಕಾಣದೇ ಇರುವುದು ವಿಷಾಧನೀಯ ಸಂಗತಿ. ಜೊತೆಗೆ, ಕಾನೂನಿನ ಉಲ್ಲಂಘನೆಯೂ ಕೂಡ.

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲೆ ಇಂದಿರಾ ಜೈಸಿಂಗ್, ”ಭಾರತದ ಮುಖ್ಯ ನ್ಯಾಯಾಧೀಶರು ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವಿನ ಅಧಿಕಾರದ ಅಂತರದಲ್ಲಿ ರಾಜಿ ಮಾಡಿಕೊಂಡಿದ್ದಾರೆ. ಸಿಜೆಐ ಸ್ವತಂತ್ರ ಅನ್ನೋದರ ಮೇಲಿನ ನಂಬಿಕೆಯನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದೇನೆ. ಸ್ವತಂತ್ರ ಸಿಜೆಐ ಕಾರ್ಯಾಂಗದ ಜೊತೆ ಸಾರ್ವಜನಿಕವಾಗಿ ರಾಜಿ ಮಾಡಿಕೊಂಡಿರುವುದನ್ನು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್ ಖಂಡಿಸಬೇಕು” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಈ ವರದಿ ಓದಿದ್ದೀರಾ?: ವಾಲ್ಮೀಕಿ ನಿಗಮ ಹಗರಣ | ಅಕ್ರಮ ಸ್ಪಷ್ಟ- ತನಿಖೆ ಮೂರು, ತಪ್ಪಿತಸ್ಥರು ಯಾರು?

ವಕೀಲ, ಹೋರಾಟಗಾರ ವಿನಯ್ ಕೂರಗಾಯಲ ಶ್ರೀನಿವಾಸ ಅವರು, ”ಇದು ನ್ಯಾಯಾಧೀಶರ ಒಂದು ಭಯಾನಕ ಉದಾಹರಣೆಯಾಗಿದೆ. ಸಿದ್ದರಾಮಯ್ಯ ಅವರ ಪ್ರಕರಣ ವಿಚಾರಣೆಯಲ್ಲಿರುವಾಗ, ಅವರು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯ ಮನೆಗೆ ಊಟಕ್ಕೆ ಹೋದರೆ ಒಪ್ಪಿಕೊಳ್ಳಬಹುದೇ? ಸಂವಿಧಾನವನ್ನು ಎತ್ತಿ ಹಿಡಿಯಬೇಕಾದ ವ್ಯಕ್ತಿಯೇ ಅದನ್ನು ದುರ್ಬಲಗೊಳಿಸಿದ್ದಾರೆ. ಸಿಜೆಐ ಚಂದ್ರಚೂಡ್ ಕ್ಷಮೆಯಾಚಿಸಬೇಕು ಅಥವಾ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

”ಸಿಜೆಐ ಚಂದ್ರಚೂಡ್ ಅವರೇ ನೀವು ಚುನಾವಣಾ ಬಾಂಡ್ ಕುರಿತು ತೀರ್ಪು ನೀಡಿದಾಗಿನಿಂದ ನಿಮ್ಮ ಮೇಲೆ ಅತೀವ ಗೌರವ ಇತ್ತು. ಅದು ಇವತ್ತು ಹೊರಟುಹೋಯಿತು” ಅಂದು ನೆಟ್ಟಿಗರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸಿದ್ದವರ ಈ ನಡೆ ಹಲವಾರು ಪ್ರಶ್ನೆಗಳನ್ನು ಎತ್ತಿದೆ. ಬಿಜೆಪಿಯ ಬ್ರಿಜ್‌ ಭೂಷನ್‌ ಸಿಂಗ್‌ ಪ್ರಕರಣ, ಕರ್ನಾಟಕದ ಬಿಜೆಪಿ-ಜೆಡಿಎಸ್‌ ಮೈತ್ರಿಯಲ್ಲಿದ್ದ ಪ್ರಜ್ವಲ್‌ ರೇವಣ್ಣ ಪ್ರಕರಣ – ಹೀಗೆ ಹೈಪ್ರೊಫೈಲ್ ಕೇಸ್‌ಗಳು ಕೋರ್ಟ್‌ ಮುಂದಿವೆ. ಅವರಿಗೆ ಜಾಮೀನು ಕೊಡಬೇಕೋ-ಬೇಡವೋ, ಅವರ ವಿರುದ್ಧದ ಆರೋಪ ಸಾಬೀತಾದರೆ, ಅವರಿಗೆ ಯಾವ ಶಿಕ್ಷ ನೀಡಬೇಕು ಎಂಬ ಸಂಪೂರ್ಣ ಹೊಣೆ ನ್ಯಾಯಾಧೀಶರ ಕೈಯಲ್ಲಿರುತ್ತದೆ. ಇಂತಹ ಸಂದರ್ಭದಲ್ಲಿ ಮೋದಿ-ಚಂದ್ರಚೂಡ್ ಭೇಟಿಯು ಬಿಜೆಪಿಗೆ ಸಂಬಂಧಿಸಿದ ಯಾವುದೇ ಪ್ರಕರಣದಲ್ಲಿ ನ್ಯಾಯಾಲಯ ಯಾವುದೇ ತೀರ್ಪು ನೀಡಿದರೂ, ಅದು ಮೋದಿ ಪ್ರಭಾವವಾ ಅನ್ನುವ ಅನುಮಾನಗಳನ್ನು ಹುಟ್ಟುಹಾಕುತ್ತದೆ. ಈ ಅನುಮಾನಗಳಿಗೆ ಸ್ವತಃ ನ್ಯಾಯಮೂರ್ತಿ ಚಂದ್ರಚೂಡ್ ಅವರೇ ಅಡಿಪಾಯ ಹಾಕಿಕೊಟ್ಟಿದ್ದಾರೆ.

ನ್ಯಾಯಮೂರ್ತಿಗಳು ಕಾರ್ಯಾಂಗದ ಜೊತೆಗೆ ಯಾವ ರೀತಿಯಲ್ಲೂ ಖಾಸಗಿ ಆವರಣಗಳಲ್ಲಿ ಗುರುತಿಸಿಕೊಳ್ಳದ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆದಾಗ್ಯೂ, ಸಿಜೆಐ ಚಂದ್ರಚೂಡ್ ಅವರು ಮಹಾರಾಷ್ಟ್ರ ಮೂಲದವರು. ಆ ರಾಜ್ಯದಲ್ಲಿ ಗಣಪತಿ ಪೂಜೆ ಬೇರೆಲ್ಲಡೆಗಿಂತ ಜನಪ್ರಿಯ ಹಬ್ಬ. ಈ ವರ್ಷದ ಅಂತ್ಯದಲ್ಲಿ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆಯೂ ನಡೆಯಲಿದೆ. ಇಂತಹ ಸಮಯದಲ್ಲಿ ಚಂದ್ರಚೂಡ್ ಮನೆಗೆ ಮಹಾರಾಷ್ಟ್ರದ ಮರಾಠಿಗರ ಉಡುಗೆ ಧರಿಸಿ ಮೋದಿ ಅವರು ಭೇಟಿ ನೀಡಿದ್ದಾರೆ. ಪೂಜೆಯಲ್ಲಿ ಭಾಗವಹಿಸಿದ್ದಾರೆ. ಇದು, ಮಹಾರಾಷ್ಟ್ರ ಜನರಿಗೆ ರಾಜಕೀಯ ಸಂದೇಶವನ್ನೂ ನೀಡುತ್ತದೆ ಎಂದು ಹೇಳಲಾಗುತ್ತಿದೆ. ನ್ಯಾಯಮೂರ್ತಿಗಳನ್ನು ಮೋದಿ ಅವರು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಂಡಿದ್ದಾರೆ ಎಂಬ ಆರೋಪಗಳೂ ಇವೆ. ಈ ಸೂಕ್ಷ್ಮ ವಿಚಾರ ಚಂದ್ರಚೂಡ್ ಅವರಿಗೆ ತಿಳಿಯಲಿಲ್ಲವೇ ಎಂಬ ಪ್ರಶ್ನೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಕೇಳಿಬರುತ್ತಿದೆ. ಇದಕ್ಕೆ, ಚಂದ್ರಚೂಡ್ ಅವರೇ ಉತ್ತರಿಸಬೇಕು. ತಮ್ಮಿಂದಾದ ಕಾನೂನು ಉಲ್ಲಂಘನೆಗೆ ಅವರೇ ಬೆಲೆತೆರಬೇಕು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

84.56 ಲಕ್ಷ ಕೋಟಿ ರೂ. ನಷ್ಟದ ಅಮೆರಿಕ – ಇರಾನ್ ಸಂಘರ್ಷದಲ್ಲಿ ನಿಜಕ್ಕೂ ಗೆದ್ದವರಾರು?

ಅಮೆರಿಕದ ಬಹುಕೋಟಿ ಡಾಲರ್ ವೆಚ್ಚದ 'ಪೇಟ್ರಿಯಾಟ್' ಮತ್ತು 'ಥಾಡ್' ಕ್ಷಿಪಣಿ ನಿರೋಧಕ...