ಚುನಾವಣೆ ಬಂದಾಗ ಮಾತ್ರ ಮೋದಿಯವರಿಗೆ ಕನ್ನಡಿಗರ ನೆನಪಾಗುತ್ತದೆ: ಸಿಎಂ ಸಿದ್ದರಾಮಯ್ಯ ಕಿಡಿ

Date:

“ಕನ್ನಡ ನಾಡಿನ ಜನರ ಸಂಕಷ್ಟಗಳಿಗೆ ಸ್ಪಂದಿಸದ ನರೇಂದ್ರ ಮೋದಿಯವರಿಗೆ ಲೋಕಸಭಾ ಚುನಾವಣೆ ಬಂದಾಗ ಮಾತ್ರ ಕನ್ನಡಿಗರ ನೆನಪಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಆನಂದಸ್ವಾಮಿ ಗಡ್ಡದೇವರಮಠ ಅವರ ಪರವಾಗಿ ಆಯೋಜಿಸಲಾಗಿದ್ದ ಪ್ರಜಾಧ್ವನಿ-02 ಲೋಕಸಭಾ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

“ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಕ್ಷೇತ್ರವನ್ನು ತಮ್ಮ ಪ್ರತಿಷ್ಠೆಯ ಕಣವಾಗಿಸಿಕೊಂಡಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಎರಡು ವರ್ಷಗಳ ಕಾಲ ಇದ್ದರೂ, ಈ ಭಾಗಕ್ಕೆ ಅವರ ಕೊಡುಗೆ ಶೂನ್ಯ. ಈ ಲೋಕಸಭಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿಯನ್ನು ಮಾಡದ ಬಸವರಾಜ ಬೊಮ್ಮಾಯಿಯವರನ್ನು ಸೋಲಿಸುವುದು ಎಲ್ಲರ ಕರ್ತವ್ಯ. ರೋಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಗೆ 25 ಸಾವಿರಕ್ಕಿಂತಲೂ ಹೆಚ್ಚು ಮತವನ್ನು ಕೊಡುತ್ತೀರೆಂಬ ವಿಶ್ವಾಸವಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೋದಿಯವರು 10 ವರ್ಷಗಳ ಪ್ರಧಾನಿಯಾಗಿದ್ದರೂ, ಅವರು ಕೊಟ್ಟ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಆದ್ದರಿಂದ ಮತ್ತೊಮ್ಮೆ ಜನರ ಬಳಿ ಮತ ಕೇಳುವ ನೈತಿಕತೆ ಅವರಿಗೆ ಇಲ್ಲ ಎಂದು ಜನರು ಹೇಳಬೇಕು. 2014ರಲ್ಲಿ ವಿದೇಶಿ ಕಪ್ಪು ಹಣವನ್ನು ಎಲ್ಲರ ಖಾತೆಗೆ 15 ಲಕ್ಷ ನೀಡುವ ಭರವಸೆ, ಪ್ರತಿ ವರ್ಷ 2 ಕೋಟಿ ಉದ್ಯೋಗ, ರೈತರ ಆದಾಯ ದ್ವಿಗುಣಗೊಳಿಸುವ ಸುಳ್ಳನ್ನು ಹೇಳಿದ್ದಾರೆ. ಪೆಟ್ರೋಲ್, ಗ್ಯಾಸ್, ಆಹಾರವಸ್ತುಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳು ಇನ್ನೂ ಹೆಚ್ಚಾಗಿದೆ. ಅವರು ಹೇಳಿದ ಅಚ್ಛೇ ದಿನ್ ಬರಲೇ ಇಲ್ಲ” ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

“2014ರಲ್ಲಿ ಒಂದು ಡಾಲರ್ ಬೆಲೆ 58 ರೂ. ಇತ್ತು, ಇಂದು 83 ರೂ. ಆಗಿದೆ. ರೂಪಾಯಿ ಮೌಲ್ಯ ಮತ್ತಷ್ಟು ಕುಸಿದಿದ್ದು, ರೂಪಾಯಿ ಮೌಲ್ಯ ಹೆಚ್ಚಿಸುವ ಅವರ ಭರವಸೆ ಮೋದಿಯ ಮತ್ತೊಂದು ಸುಳ್ಳಾಗಿದೆ. ಮೇಲಿನ ಐದೂ ಭರವಸೆಗಳನ್ನು ಸುಳ್ಳಾಗಿಸಿರುವ ನರೇಂದ್ರ ಮೋದಿಯವರಿಗೆ ಜನರು ಮತ ನೀಡಬೇಕೇ ? ಸುಳ್ಳು ಹೇಳಿದ ನರೇಂದ್ರ ಮೋದಿಗೆ ಈ ಬಾರಿ ಮತ ನೀಡಬಾರದು” ಎಂದು ಸಿಎಂ ಸಿದ್ದರಾಮಯ್ಯರಿಗೆ ಕರೆ ನೀಡಿದರು.

“ಕಳೆದ ಬಾರಿ ರಾಜ್ಯದಿಂದ ಬಿಜೆಪಿಯ 25 ಸಂಸದರು ಇದ್ದರೂ, ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಕೇಂದ್ರದಲ್ಲಿ ಎಂದೂ ಧ್ವನಿ ಎತ್ತಲಿಲ್ಲ. ಕಾಂಗ್ರೆಸ್ ನ ಸಂಸದ ಡಿ.ಕೆ.ಸುರೇಶ್ ಒಬ್ಬರೇ ಕೇಂದ್ರದ ವಿರುದ್ಧ ಧ್ವನಿ ಎತ್ತಿದ್ದವರು. ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಕೇಂದ್ರ ಅನ್ಯಾಯ ಮಾಡಿದೆ. ರಾಜ್ಯದ 223 ತಾಲ್ಲೂಕುಗಳಲ್ಲಿ ಬರಗಾಲವಿದ್ದರೂ ಕೇಂದ್ರ ಬರ ಪರಿಹಾರ ನೀಡಲಿಲ್ಲ” ಎಂದರು.

ಇದನ್ನು ಓದಿದ್ದೀರಾ? ಹಾಸನದ ‘ಪೆನ್‌ಡ್ರೈವ್’ ನಮಗೂ ತಲುಪಿದೆ; ಎಸ್ಐಟಿ ರಚಿಸಲು ಸಿಎಂಗೆ ಮನವಿ: ಮಹಿಳಾ ಆಯೋಗ

ನಮ್ಮ ಸಂಪನ್ಮೂಲದಿಂದ ಕುಡಿಯುವ ನೀರು, ಮೇವು ನೀಡುತ್ತಿದ್ದು, 24 ಲಕ್ಷ ರೈತರಿಗೆ ತಲಾ 2000 ರೂ. ನಂತೆ 650 ಕೋಟಿ ರೂ.ಗಳನ್ನು ನೀಡಲಾಗಿದೆ.ಕರ್ನಾಟಕದ ಬಗ್ಗೆ ಕೆಂಗಣ್ಣನ್ನು ಕೇಂದ್ರ ಸರ್ಕಾರ ಬೀರಿದೆ. ರಾಜ್ಯವನ್ನು ಕಡೆಗಣಿಸಿರುವ ಬಿಜೆಪಿಗೆ ಯಾವತ್ತೂ ಮತ ಹಾಕಬಾರದು ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...