ರಾಮಮಂದಿರ ನಿರ್ಮಾಣದಲ್ಲಿ ಮೋದಿಯವರ ಕೊಡುಗೆ ಶೂನ್ಯ: ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ

Date:

ಅಯೋಧ್ಯೆಯಲ್ಲಿ ರಾಮಮಂದಿರದ ಮೂರ್ತಿ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರಿಂದ ರಾಮಮಂದಿರ ಉದ್ಘಾಟನೆಯನ್ನು ಪ್ರಶ್ನಿಸಿದ್ದ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ, ಮತ್ತೊಮ್ಮೆ ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದಾರೆ.

ಇಂದು(ಜ.19) ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, “ಅಯೋಧ್ಯೆಯಲ್ಲಿ ರಾಮಮಂದಿರದ ಕರ್ತೃ ಮತ್ತು ನಿರ್ಮಾತೃ ನಾನೇ ಎಂದು ಪ್ರಧಾನಿ ಹೇಳಿಕೊಳ್ಳುತ್ತಿದ್ದಾರೆ. ಆದರೆ ಇದರಲ್ಲಿ ಅವರ ಕೊಡುಗೆ ಶೂನ್ಯ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದುವರಿದು, “ನರೇಂದ್ರ ಮೋದಿಯವರು ರಾಮಮಂದಿರದ ವಿಚಾರದ ಬದಲಿಗೆ ತಮ್ಮ ಕ್ಷೇತ್ರವಾಗಿರುವ ವಾರಣಾಸಿಯಲ್ಲಿರುವ ಜ್ಞಾನವಾಪಿ ಜ್ಯೋತಿರ್ಲಿಂಗ ಕಾಶಿ ದೇವಸ್ಥಾನವನ್ನು ಪುನರ್ನಿರ್ಮಾಣ ಮಾಡಲಿ. ಆ ವಿಷಯದ ಮೇಲೆ ಮೋದಿಯವರು ತಮ್ಮ ಗಮನವನ್ನು ಕೇಂದ್ರೀಕರಿಸಬೇಕು” ಎಂದು ಸಲಹೆ ನೀಡಿದ್ದಾರೆ.

ಪತ್ನಿಯನ್ನು ತೊರೆದ ಮೋದಿ ರಾಮಮಂದಿರ ಉದ್ಘಾಟನೆಗೆ ಅರ್ಹರೇ? ಎಂದು ಕೇಳಿದ್ದ ಸ್ವಾಮಿ

ಇತ್ತೀಚೆಗಷ್ಟೇ ಮಾಡಿದ್ದ ಟ್ವೀಟ್‌ವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ರಾಮಮಂದಿರ ಉದ್ಘಾಟನೆಯನ್ನು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಪ್ರಶ್ನಿಸಿದ್ದರು.

“ಸೀತೆಯನ್ನು ರಕ್ಷಿಸಲು ಯುದ್ಧ ಮಾಡಿ, ಕಷ್ಟಗಳನ್ನು ಎದುರಿಸಿದ ರಾಮನ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣವಾಗುತ್ತಿದೆ. ಆದರೆ ಪತ್ನಿಯನ್ನೇ ತೊರೆದ ಪ್ರಧಾನಿ ನರೇಂದ್ರ ಮೋದಿ ಅವರು ಇದರ ಉದ್ಘಾಟನಾ ಪೂಜೆ ಹೇಗೆ ನೆರವೇರಿಸುತ್ತಾರೆ” ಎಂದು ಪ್ರಶ್ನಿಸಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನ ಈ ಕಚ್ಚಾಟ, ‘ಆತ್ಮಹತ್ಯೆ’ಯ ಹುಚ್ಚಾಟ

“ರಾಮ ಸುಮಾರು ಒಂದೂವರೆ ದಶಕದಷ್ಟು ಕಾಲ ವನವಾಸವನ್ನು ಅನುಭವಿಸಿದ. ಅಪಹರಣಗೊಂಡ ಸೀತೆಯನ್ನು ರಕ್ಷಿಸಲು ಯುದ್ಧ ಮಾಡಿದ. ಆದರೆ ಮೋದಿ ಅವರು ತಮ್ಮ ಪತ್ನಿಯನ್ನು ತ್ಯಜಿಸಿದವರು ಎಂಬುದು ಎಲ್ಲರಿಗೂ ತಿಳಿದ ವಿಷಯ. ಹಾಗಿದ್ದರೆ ಅವರು ಹೇಗೆ ಈ ಪೂಜೆ ನೆರವೇರಿಸುತ್ತಾರೆ? ಶ್ರೀರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನಾ ಕಾರ್ಯವನ್ನು ಮೋದಿ ಅವರು ನೆರವೇರಿಸಲು ರಾಮನ ಭಕ್ತರು ಹೇಗೆ ಅವಕಾಶ ನೀಡುತ್ತಾರೆ” ಎಂದೂ ಸುಬ್ರಮಣಿಯನ್ ಸ್ವಾಮಿ ಕೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...