ಚುನಾವಣೆ ಬಳಿಕ ವಿಪಕ್ಷಗಳನ್ನು ಜೈಲು ಪಾಲಾಗಿಸುವುದೇ ಮೋದಿ ಗ್ಯಾರಂಟಿ: ಮಮತಾ ಬ್ಯಾನರ್ಜಿ

Date:

ಮೋದಿ ಗ್ಯಾರಂಟಿಯನ್ನು ಲೇವಡಿ ಮಾಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ವಿಪಕ್ಷಗಳನ್ನು ಜೈಲು ಪಾಲಾಗಿಸುವುದೇ ‘ಮೋದಿ ಗ್ಯಾರಂಟಿ’ ಎಂದು ತಿರುಗೇಟು ನೀಡಿದ್ದಾರೆ.

ಈ ಬಾರಿಯ ಲೋಕಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ‘ಮೋದಿ ಗ್ಯಾರಂಟಿ’ ಬಗ್ಗೆ ತನ್ನ ಹೆಚ್ಚಿನ ಭಾಷಣಗಳಲ್ಲಿ ಪ್ರಸ್ತಾಪ ಮಾಡುತ್ತಿದ್ದಾರೆ. ಉತ್ತರ ಬಂಗಾಳದ ಜಲಪೈಗುರಿಯಲ್ಲಿ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದಾಗಲೂ ಪ್ರಧಾನಿ ಮೋದಿ ಈ ಗ್ಯಾರಂಟಿಗಳ ಪ್ರಸ್ತಾಪ ಮಾಡಿದ್ದರು. ಇದಾದ ಒಂದು ದಿನದ ಬಳಿಕ ಬಂಕೂರಾದಲ್ಲಿ ನಡೆದ ಪ್ರಚಾರ ಕಾರ್ಯದ ವೇಳೆ ಮೋದಿಗೆ ಬ್ಯಾನರ್ಜಿ ತಿರುಗೇಟು ನೀಡಿದರು.

ಇದನ್ನು ಓದಿದ್ದೀರಾ?   ಮೋದಿಯ ಭ್ರಷ್ಟಾಚಾರ ಗ್ಯಾರಂಟಿ; ಬಿಜೆಪಿಯ ‘ವಾಷಿಂಗ್ ಮೆಷಿನ್’ ಹೇಗೆ ಕೆಲಸ ಮಾಡುತ್ತದೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅವರು ಎಷ್ಟು ಬೇಕಾದರೂ ಪಿತೂರಿ ಮಾಡಲಿ. ಜೂನ್ 4 ರ ನಂತರ ಭ್ರಷ್ಟರ ವಿರುದ್ಧ ಕ್ರಮ ಹೆಚ್ಚಾಗುತ್ತದೆ ಎಂದು ನಾನು ನಿಮಗೆ ಗ್ಯಾರಂಟಿ ನೀಡಲು ಬಯಸುತ್ತೇನೆ. ನೀವು ಹೇಳಿ, ನಾವು ಈ ದೇಶದಿಂದ ಭ್ರಷ್ಟಾಚಾರವನ್ನು ತೊಡೆದುಹಾಕಬೇಕೇ ಅಥವಾ ಬೇಡವೇ? ಭ್ರಷ್ಟರನ್ನು ಜೈಲಿಗೆ ಕಳುಹಿಸುವುದು ಬೇಡವೇ? ಟಿಎಂಸಿಯ ಭ್ರಷ್ಟಾಚಾರವನ್ನು ತೊಲಗಿಸಬೇಕಲ್ಲವೇ? ಇದು ಮೋದಿ ಗ್ಯಾರಂಟಿ” ಎಂದು ಹೇಳಿದ್ದರು.

ಇಂದು ಬಂಕುರಾದಲ್ಲಿ ನಡೆದ ರ‍್ಯಾಲಿಯಲ್ಲಿ ಬ್ಯಾನರ್ಜಿ ಮೋದಿ ಗ್ಯಾರಂಟಿಯನ್ನು ಟೀಕಿಸಿದರು. “ಮೋದಿಯವರ ಗ್ಯಾರಂಟಿ ಏನು? ಜೂನ್ ನಂತರ ಎಲ್ಲರನ್ನೂ ಜೈಲಿಗೆ ಹಾಕುತ್ತಾರೆ. ಇದು ಪ್ರಧಾನಿಯಾದವರ ಮಾತನಾಡುವ ಶೈಲಿಯೇ? ಜೂನ್‌ನಲ್ಲಿ ಚುನಾವಣೆ ಮುಗಿದ ನಂತರ ಜನರನ್ನು ಆರಿಸಿ ಬಂಧಿಸುತ್ತಾರೆ? ಎಲ್ಲರನ್ನೂ ಜೈಲಿಗೆ ಹಾಕುತ್ತಾರೆಯೇ” ಎಂದು ತಿರುಗೇಟು ನೀಡಿದ್ದಾರೆ.

ಇದನ್ನು ಓದಿದ್ದೀರಾ?   ಕಲಬುರಗಿ | ಮೋದಿ ಗ್ಯಾರಂಟಿ ಟಿವಿಯಲ್ಲಿದೆ, ನಮ್ಮ ಗ್ಯಾರಂಟಿ ಜನರ ಕೈಯಲ್ಲಿದೆ: ಸಚಿವ ಪ್ರಿಯಾಂಕ್‌ ಖರ್ಗೆ

ಬಿಜೆಪಿ ಮತ್ತು ಪ್ರಧಾನ ಮಂತ್ರಿಗಳು ಹಿಂದೂಸ್ತಾನವನ್ನು ಜೈಲಾಗಿ ಪರಿವರ್ತಿಸಿದ್ದಾರೆ ಎಂದು ಆರೋಪಿಸಿದ ಅವರು, “ನೀವು ಎಲ್ಲೆಂದರಲ್ಲಿ ಜೈಲುಗಳನ್ನು ಮಾಡಿದ್ದೀರಿ. ನಿಮ್ಮ ಜೇಬಿನಲ್ಲಿ ಎನ್ಐಎ ಮತ್ತು ಇನ್ನೊಂದು ಜೇಬಿನಲ್ಲಿ ಸಿಬಿಐ ಇದೆ. ಒಂದು ಜೇಬಿನಲ್ಲಿ ಇಡಿ ಮತ್ತು ಇನ್ನೊಂದು ಜೇಬಿನಲ್ಲಿ ಆದಾಯ ತೆರಿಗೆ ಇಲಾಖೆಯಿದೆ” ಎಂದು ದೂರಿದರು.

“ಎನ್‌ಐಎ ಮತ್ತು ಸಿಬಿಐ ಬಿಜೆಪಿಯ ಸಹೋದರರು. ಆದಾಯ ತೆರಿಗೆ ಮತ್ತು ಇಡಿ ತೆರಿಗೆಗಳು ಬಿಜೆಪಿ ನಿಧಿ ಸಂಗ್ರಹದ ಪೆಟ್ಟಿಗೆಯಾಗಿದೆ,” ಎಂದು ಹೇಳುವ ಮೂಲಕ ಮಮತಾ ಬ್ಯಾನರ್ಜಿ ಅವರು ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂಬ ವಿರೋಧ ಪಕ್ಷದ ಆರೋಪಕ್ಕೆ ಇನ್ನಷ್ಟು ಬಲತುಂಬಿದರು.

ಪಶ್ಚಿಮ ಬಂಗಾಳದ 42 ಲೋಕಸಭಾ ಸ್ಥಾನಗಳಲ್ಲಿ ಏಳು ಹಂತಗಳ ಚುನಾವಣೆ ನಡೆಯಲಿದೆ. 2019 ರಲ್ಲಿ 18 ಸ್ಥಾನಗಳನ್ನು ಗೆದ್ದು ಎರಡನೇ ಸ್ಥಾನ ಪಡೆದಿರುವ ಬಿಜೆಪಿ, ಆಡಳಿತಾರೂಢ ತೃಣಮೂಲ ವಿರುದ್ಧ ಈಗ ಮತ್ತೆ ಕಣಕ್ಕೆ ಇಳಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...