ಕೇರಳ | ಅಭ್ಯರ್ಥಿ ಇಲ್ಲದೆಯೇ ಮೋದಿ ರೋಡ್‌ಶೋ; ‘ನನ್ನ ಕರೆದಿಲ್ಲ’ ಎಂದ ಸಲಾಮ್!

Date:

ಈ ವರ್ಷದ ಮೂರು ತಿಂಗಳಲ್ಲೇ ಐದನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಕೇರಳಕ್ಕೆ ಭೇಟಿ ನೀಡಿದ್ದಾರೆ. ಮಂಗಳವಾರ ಕೇರಳದ ಪಾಲಕ್ಕಾಡ್‌ನಲ್ಲಿ ಮೋದಿ ಮುಂದಿನ ಲೋಕಸಭೆ ಚುನಾವಣೆಯ ರೋಡ್‌ಶೋ ನಡೆಸಿದ್ದಾರೆ. ಆದರೆ ಅಭ್ಯರ್ಥಿ ಇಲ್ಲದೆಯೇ ರೋಡ್‌ಶೋ ನಡೆಸಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

ಪ್ರಧಾನಿ ಮೋದಿ ಚಾಪರ್ ಮೂಲಕ ಪಾಲಕ್ಕಾಡ್‌ಗೆ ತಲುಪಿದ್ದು, ಅರ್ಧ ಗಂಟೆಗಳ ಕಾಲ ಬಿಜೆಪಿ ಕಾರ್ಯಕರ್ತರೊಂದಿಗೆ ರೋಡ್‌ಶೋ ನಡೆಸಿದ್ದಾರೆ. ಪಾಲಕ್ಕಾಡ್‌ನ ಬಿಜೆಪಿ ಅಭ್ಯರ್ಥಿಯಾದ ಸಿ ಕೃಷ್ಣಕುಮಾರ್, ಪೊನ್ನಾನಿ ಅಭ್ಯರ್ಥಿ ನಿವೇದಿತಾ ಸುಬ್ರಮನಿಯನ್, ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಕೂಡ ರೋಡ್‌ಶೋನಲ್ಲಿ ಭಾಗಿಯಾಗಿದ್ದಾರೆ.

ಇದನ್ನು ಓದಿದ್ದೀರಾ?  ಜಾತ್ಯತೀತತೆ ಭಾರತದ ಆತ್ಮ, ಒಂದು ಧರ್ಮದ ಪ್ರಚಾರ ಸಲ್ಲ: ಕೇರಳ ಸಿಎಂ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ರೋಡ್‌ಶೋ ಈಗ ವಿವಾದಕ್ಕೆ ಕಾರಣವಾಗಿದೆ. ಅದಕ್ಕೆ ಕಾರಣ ಬಿಜೆಪಿ ಮುಸ್ಲಿಂ ಅಭ್ಯರ್ಥಿಗೆ ಆಮಂತ್ರಣವೇ ನೀಡದೆ ಇರುವುದು! ಬಿಜೆಪಿ ಎನ್‌ಡಿಎಯ ಮುಸ್ಲಿಂ ಅಭ್ಯರ್ಥಿಯನ್ನು ಈ ರೋಡ್‌ಶೋಗೆ ಆಮಂತ್ರಿಸಿಲ್ಲ ಎಂದು ಎಲ್‌ಡಿಎಫ್‌ ಆರೋಪಿಸಿದೆ.

ಬಿಜೆಪಿಯ ಮಲ್ಲಪ್ಪುರಂ ಅಭ್ಯರ್ಥಿ ಎಂ ಅಬ್ದುಲ್ ಸಲಾಮ್ ರೋಡ್‌ಶೋನಲ್ಲಿ ಕಾಣಿಸಿಕೊಳ್ಳದ ವಿಚಾರದಲ್ಲಿ ಸಿಪಿಐಎಂ ಕೇಂದ್ರ ಸಮಿತಿ ಸದಸ್ಯ ಎ ಕೆ ಬಾಲನ್ ಬಿಜೆಪಿಯನ್ನು ಟೀಕಿಸಿದ್ದಾರೆ. ಮುಸ್ಲಿಂ ಎಂಬ ಕಾರಣಕ್ಕೆ “ಅಬ್ದುಲ್ ಸಲಾಮ್‌ರಿಗೆ ಈ ರೋಡ್‌ಶೋಗೆ ಆಮಂತ್ರಣವೇ ನೀಡಿಲ್ಲ” ಎಂದು ಆರೋಪಿಸಿದ್ದಾರೆ.

ಆದರೆ ಅಭ್ಯರ್ಥಿ ಸಲಾಮ್ ಮಾತ್ರ ಇಲ್ಲಿ ಯಾವುದೇ ತಾರಮತ್ಯವಿಲ್ಲ ಎಂದಿದ್ದಾರೆ. “ನಾನು ಮೋದಿಯನ್ನು ಭೇಟಿಯಾಗಲು ಪಾಲಕ್ಕಾಡ್‌ಗೆ ಹೋದೆ. ಮಲ್ಲಪ್ಪುರಂನಲ್ಲಿ ಚುನಾವಣಾ ಪ್ರಚಾರಕ್ಕೆ ಮೋದಿ ಅವರನ್ನು ಆಮಂತ್ರಿಸಿದೆ. ರೋಡ್‌ಶೋನಲ್ಲಿ ಭಾಗಿಯಾಗುವ ಆಸೆ ನನಗಿತ್ತು. ಆದರೆ ನನಗೆ ಆಮಂತ್ರಣವನ್ನು ನೀಡಲಾಗಿಲ್ಲ. ಇತರೆ ಇಬ್ಬರು ಅಭ್ಯರ್ಥಿಗಳನ್ನು ಆಮಂತ್ರಿಸಲಾಗಿದೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...