ಮೋದಿ ಸುಳ್ಳುಗಳು | ಗೂಂಡಾ, ಅತ್ಯಾಚಾರಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆಗೊಳಿಸಿದ್ದು ಕಾಂಗ್ರೆಸ್ಸೋ? ಅಥವಾ ಮೋದಿಯೋ?

Date:

ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ಬಸ್ತಿಯಲ್ಲಿ ಮಾತನಾಡಿ, ಪ್ರತಿಪಕ್ಷಗಳ ವಿರುದ್ಧದ ತಮ್ಮ ಹೋರಾಟವನ್ನು ಮುಂದುವರಿಸಲಾಗುವುದು ‘ವಿಕಸಿತ್ ಉತ್ತರ ಪ್ರದೇಶ’ಕ್ಕಾಗಿ ಹಾಗೂ ರಾಷ್ಟ್ರದ ಸುಧಾರಣೆಗಾಗಿ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಪ್ರಧಾನಿ ಮತದಾರರನ್ನು ಒತ್ತಾಯಿಸಿದರು.

“ಐದು ಹಂತಗಳ ಚುನಾವಣೆಗಳು ಮೋದಿ ಸರ್ಕಾರದ ಮೂರನೇ ಅವಧಿಗೆ ಹಾದಿಯನ್ನು ಗಟ್ಟಿಗೊಳಿಸಿವೆ. ಈಗ, ಎಸ್‌ಪಿ ಅಥವಾ ಕಾಂಗ್ರೆಸ್‌ಗೆ ಹಾಕಿದ ಪ್ರತಿಯೊಂದು ಮತವೂ ವ್ಯರ್ಥವಾಗುತ್ತದೆ. ಏಕೆಂದರೆ ಅವರು ಸರ್ಕಾರ ರಚಿಸುವುದಿಲ್ಲ. ಹಾಗಾಗಿ ನಿಮ್ಮ ಮತ ದೇಶವನ್ನು ಮುನ್ನಡೆಸುವ ಪಕ್ಷಕ್ಕೆ ಹೋಗಬೇಕು. ಮೋದಿ ಸರ್ಕಾರವು ವಿಕಸಿತ್‌ ಮತ್ತು ಆತ್ಮನಿರ್ಭರ ಭಾರತವನ್ನು ಬೆಂಬಲಿಸುತ್ತದೆ” ಎಂದು ಸುಳ್ಳಿನ ಸುರಿಮಳೆ ಸುರಿಸಿದ್ದಾರೆ.(20:8-22:00)(26:47-23)

ಕಳೆದ ಹತ್ತು ವರ್ಷದಿಂದಲೂ ಮೋದಿ ಕೆಲವು ಘೋಷಣೆಗಳನ್ನು ಹೇಳುತ್ತಿದ್ದಾರೆಯೇ ಹೊರತು ಘೋಷಣೆಗೆ ತಕ್ಕ ಯಾವುದೇ ಅಭಿವೃದ್ಧಿಗಳೂ ಕೂಡಾ ಈಡೇರಿಲ್ಲ. ನಮ್ಮ ಇಂದಿನ ಪ್ರಧಾನಿಯ ಹತ್ತು ವರ್ಷಗಳ ಆಳ್ವಿಕೆ ಜನರಲ್ಲಿ ಜಿಗುಪ್ಸೆ ತಂದಿದ್ದು, ಒಡೆದಾಳುವ ನೀತಯನ್ನು ಅನುಸರಿಸುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೂ ಕೂಡಾ ಮತ್ತೆ ಮತ್ತೆ ವಿಕಸಿತ್‌ ಭಾರತದ ಘೋಷಣೆಯನ್ನು ಮೋದಿ ನಿಲ್ಲಿಸುವಂತೆ ಕಾಣುತ್ತಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂದು, ಜಾಗತಿಕ ವೇದಿಕೆಯಲ್ಲಿ ಭಾರತದ ಸ್ಥಾನಮಾನ ಮತ್ತು ಗೌರವವು ಗಮನಾರ್ಹವಾಗಿ ಹೆಚ್ಚಾಗಿದೆ. ಭಾರತ ಮಾತನಾಡುವಾಗ, ಜಗತ್ತು ಕೇಳುತ್ತದೆ; ಭಾರತ ನಿರ್ಧರಿಸಿದಾಗ, ಜಗತ್ತು ಅನುಸರಿಸುತ್ತದೆ. ಒಂದು ಕಾಲದಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡಿದ್ದ ಮತ್ತು ನಮಗೆ ಬೆದರಿಕೆ ಹಾಕಿದ್ದ ರಾಷ್ಟ್ರವು ಈಗ ಆಹಾರ ಧಾನ್ಯಗಳಿಗಾಗಿಯೂ ಹೆಣಗಾಡುತ್ತಿದೆ” ಎಂದು ದ್ವೇಷ ಹುಟ್ಟಿಸುವಂತೆ ಹುಸಿಯಾಡುತ್ತಿದ್ದಾರೆ ಮೋದಿ.(25:21-25:50)

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ಕುರಿತು ಯುನೈಟೆಡ್ ಸ್ಟೇಟ್ಸ್ ಮತ್ತು ಜರ್ಮನಿ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ನಮ್ಮ ಪ್ರಧಾನಿ ನಡೆಯನ್ನು ಟೀಕಿಸಿದ್ದವು. ಹೀಗಿದ್ದರೂ ಕೂಡ ಮೋದಿ ಭಾರತದ ಕಡೆ ಜಗತ್ತಿ ತಿರುಗಿ ನೋಡುತ್ತದೆ. ಭಾರತದ ನಿರ್ಧಾರವನ್ನು ಜಗತ್ತು ಅನುಸರಿಸುತ್ತದೆ ಎಂದು ಲಜ್ಜೆಯಿಲ್ಲದೆ ಹೇಳಿದ್ದಾರೆ.

ಇನ್ನು ಪಾಕಿಸ್ತಾನವನ್ನು ಕುರಿತು ಮೋದಿ ನೀಡಿರುವ ಹೇಳಿಕೆಗೆ ವಿರುದ್ಧವಾಗಿ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕಾ ಖಾತೆ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಮಾತನಾಡಿ, “ಈಗ ಪಾಕಿಸ್ತಾನದೊಂದಿಗೆ ಭೂಮಾರ್ಗದಲ್ಲಿ ವ್ಯಾಪಾರ ನಡೆಯುತ್ತಿಲ್ಲ. ಜವಾಹರಲಾಲ್ ನೆಹರು ಪೋರ್ಟ್ ಟ್ರಸ್ಟ್, ಇನ್‌ಲ್ಯಾಂಡ್ ಕಂಟೈನರ್ ಡಿಪೋ, ತುಘಲಕಾಬಾದ್, ಮುಂದ್ರಾ ಎಸ್‌ಇಜೆಡ್, ಏರ್ ಕಾರ್ಗೋ ಕಾಂಪ್ಲೆಕ್ಸ್ ಮುಂಬೈ ಮತ್ತು ಏರ್ ಕಾರ್ಗೋ ಕಾಂಪ್ಲೆಕ್ಸ್ ಹೈದರಾಬಾದ್ ಮೂಲಕ ಪಾಕಿಸ್ತಾನದೊಂದಿಗೆ ಸಮುದ್ರ ಮತ್ತು ವಾಯು ಮಾರ್ಗಗಳ ಮೂಲಕ ವ್ಯಾಪಾರವನ್ನು ಮಾಡಲಾಗುತ್ತಿದೆ” ಎಂದು ಹೇಳಿದ್ದಾರೆ.

“ನಮ್ಮ ಸಹೋದರಿಯರು ಮತ್ತು ಹೆಣ್ಣು ಮಕ್ಕಳು ತಮ್ಮ ಮನೆಗಳನ್ನು ಬಿಡಲು ಹೆದರುತ್ತಿದ್ದರು. ಮಾಫಿಯಾ ಸ್ವಾಧೀನದಿಂದಾಗಿ ಜನರು ಭೂಮಿಯನ್ನು ಖರೀದಿಸಲು ಹೆದರುತ್ತಿದ್ದರು. ಗೂಂಡಾಗಳು ಮತ್ತು ಮಾಫಿಯಾಗಳನ್ನು ಎಸ್‌ಪಿ ಹೇಗೆ ಸ್ವಾಗತಿಸಿತು ಎಂಬುದು ನೆನಪಿದೆಯೇ? ಗಲಭೆಕೋರರಿಗೆ ವಿಶೇಷ ಚಿಕಿತ್ಸೆ ನೀಡಲಾಯಿತು ಮತ್ತು ಭಯೋತ್ಪಾದಕರನ್ನು ಜೈಲಿನಿಂದ ಬಿಡುಗಡೆ ಮಾಡಲು ಆದೇಶಗಳನ್ನು ಹೊರಡಿಸಲಾಯಿತು” ಎಂದು ಮೋದಿ ಮತ್ತಷ್ಟು ಸುಳ್ಳುಗಳನ್ನು ಹರಡುತ್ತಿದ್ದಾರೆ.(37:57-39:4)

ಅತ್ಯಾಚಾರ ಪ್ರಕರಣದಲ್ಲಿ ಯಾವುದೇ ಆರೋಪಿಯನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಬಾರದು ಎಂಬ ಕೇಂದ್ರದ ನಿಯಮ ಇದ್ದರೂ, ಗುಜರಾತ್‌ ಸರ್ಕಾರ ಮಾತ್ರ ಬಿಲ್ಕಿಸ್ ಬಾನೊ ಪ್ರಕರಣದ ‌11 ಮಂದಿ ಕೈದಿಗಳನ್ನು ಬಿಡುಗಡೆ ಮಾಡಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಅಧಿಕಾರಿಗಳು, “ಬಿಲ್ಕಿಸ್ ಬಾನೊ ಪ್ರಕರಣದ ಆರೋಪಿಗಳಿಗೆ ಕೇಂದ್ರದ ನಿಯಮ ಅನ್ವಯವಾಗುವುದಿಲ್ಲ. ಸುಪ್ರೀಂಕೋರ್ಟ್‌ ನಿಯಮಾವಳಿ ಅನುಸರಿಸಿ ಬಿಡುಗಡೆ ಮಾಡಲಾಗಿದೆ” ಎಂದು ಉದ್ಧಟತನ ಮೆರೆದಿದ್ದರು. ಅಲ್ಲದೆ ಆರೋಪಿಗಳ ಬೆಂಬಲಿಗರು ಸಿಹಿ ಹಂಚಿ, ಹಾರ ತುರಾಯಿಗಳನ್ನು ಹಾಕುವ ಮೂಲಕ ಸಂಭ್ರಮಿಸಿದ್ದರು.

“ಸ್ವಾತಂತ್ರ್ಯ ದಿನಾಚರಣೆಯ ತಮ್ಮ ಭಾಷಣದಲ್ಲಿ ‘ಮಹಿಳಾ ಶಕ್ತಿ’ ಬಗ್ಗೆ ಮೋದಿ ಅವರು ಭಾಷಣ ಮಾಡಿದ ಕೆಲವೇ ಗಂಟೆಗಳಲ್ಲಿ ಅತ್ಯಾಚಾರಿಗಳ ಬಿಡುಗಡೆಯಾಗಿದೆ. ಇದು ಬಿಜೆಪಿ ಅಡಿಯಲ್ಲಿನ ನವ ಭಾರತದ ನೈಜ ಮುಖ” ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು.

ಈ ಸುದ್ದಿ ಓದಿದ್ದೀರಾ? ಮೋದಿ ಸುಳ್ಳುಗಳು | ಎಸ್‌ಸಿ-ಎಸ್‌ಟಿ, ಒಬಿಸಿಗಳಿಗೆ ಮೋಸವಾಗಿರುವುದು ಕಾಂಗ್ರೆಸ್‌ನಿಂದಲೋ? ಮೋದಿ ಆಡಳಿತದಲ್ಲೋ?

ಮೇಲಿನ ಎಲ್ಲ ಅಂಶಗಳನ್ನು ಗಮನಿಸಿದರೆ ಮೋದಿ ಮತ್ತವರ ಪಕ್ಷದಿಂದ ನಡೆದಿರುವುದು ಕಂಡುಬರುತ್ತದೆ. ಆದರೆ, ನಮ್ಮ ಪ್ರಧಾನಿ ತಾವು ಮಾಡುವಂತಹ ತಪ್ಪುಗಳನ್ನು ವಿಪಕ್ಷಗಳ ವಿರುದ್ಧ ಆರೋಪಿಸುತ್ತಿದ್ದಾರಾ? ವೋಟ್‌ ಬ್ಯಾಂಕ್‌ಗಾಗಿ ಮೋದಿಜಿ ತಮ್ಮ ಸುಳ್ಳು ಭಾಷಣಗಳ ಮೂಲಕ ಮತದಾರರನ್ನು ವಿಪಕ್ಷಗಳ ವಿರುದ್ಧ ಎತ್ತಿಕಟ್ಟುತ್ತಿದ್ದಾರೆಯೇ?

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...