ಮೋದಿಯ ಇಂದಿನ ಸುಳ್ಳುಗಳು | ತಳ ಸಮುದಾಯದ ರಾಷ್ಟ್ರಪತಿಗಳನ್ನು ಮೋದಿ ಮನಸಾರೆ ಒಪ್ಪಿಕೊಂಡಿದ್ದಾರೆಯೇ?

Date:

ಬಿಹಾರದ ಹಾಜಿಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಭಿಕರನ್ನುದ್ದೇಶಿಸಿ ಮಾತನಾಡಿದ ಪಿಎಂ ಮೋದಿ, “ವಿಕಸಿತ ಭಾರತ ಮತ್ತು ವಿಕಸಿತ ಬಿಹಾರವನ್ನು ನಿರ್ಮಿಸಲು, ನಿರ್ಧಾರ ತೆಗೆದುಕೊಳ್ಳುವಲ್ಲಿ ಎಲ್ಲರಿಗೂ ಸಮಾನ ಭಾಗವಹಿಸುವಿಕೆಯ ಭರವಸೆ ನೀಡುತ್ತೇನೆ” ಎಂದು ತಮ್ಮ ಸುಳ್ಳುಗಳನ್ನು ಆರಂಭಿಸಿದರು.

“ನಿರ್ಣಾಯಕ ದಿನ ಜೂನ್ 4 ಸಮೀಪಿಸುತ್ತಿದೆ. ಎಲ್ಲರ ಕಣ್ಣು ಟಿವಿಗಳು, ರೇಡಿಯೋ ಮತ್ತು ಸಾಮಾಜಿಕ ಮಾಧ್ಯಮಗಳತ್ತ ಇರುತ್ತವೆ. ನಿಮ್ಮ ಬೆಂಬಲವು ಸ್ಥಾನಗಳಾಗಿ ಪರಿವರ್ತನೆಗೊಳ್ಳುತ್ತದೆ ಮತ್ತು ಚುನಾವಣಾ ಫಲಿತಾಂಶಗಳು ಮತ್ತೊಮ್ಮೆ ಮೋದಿ ಸರ್ಕಾರದ ಪರವಾಗಿರುತ್ತವೆ. ಎನ್‌ಡಿಎಗೆ ಮತ ಹಾಕುವ ಮೂಲಕ, ನೀವು ಕೇಂದ್ರದಲ್ಲಿ ಬಲವಾದ ಸರ್ಕಾರವನ್ನು ರಚಿಸುತ್ತೀರಿ. ಆರ್‌ಜೆಡಿ, ಕಾಂಗ್ರೆಸ್ ಅಥವಾ ಇತರ ಯಾವುದೇ ಮೈತ್ರಿಕೂಟಕ್ಕೆ ಮತ ಹಾಕುವುದು ವ್ಯರ್ಥ. ಆದ್ದರಿಂದ, ನಿಮ್ಮ ಮತಗಳನ್ನು ಎಣಿಕೆ ಮಾಡಲಿ, ಅದು ಭವಿಷ್ಯವನ್ನು ರೂಪಿಸಲಿ. ಹಾಗಾಗಿ ಎನ್‌ಡಿಎಗೆ ಮತ ಚಲಾಯಿಸಿ” ಎಂದು ಹೇಳಿದರು.

“ಬಿಜೆಪಿ ಮತ್ತು ಎನ್‌ಡಿಎ ನಿಜವಾದ ಸಾಮಾಜಿಕ ನ್ಯಾಯ ಮತ್ತು ನೈತಿಕತೆಯ ರಚನೆಗೆ ಭದ್ಧವಾಗಿದ್ದೇವೆ. ಪ್ರಸ್ತುತ, ನಾವು ದೇಶದಲ್ಲಿ ಎಸ್‌ಸಿ/ಎಸ್‌ಟಿ ಮತ್ತು ಒಬಿಸಿ ಸಮುದಾಯಗಳಿಂದ ಹೆಚ್ಚಿನ ಸಂಖ್ಯೆಯ ಸಂಸದರು ಹಾಗೂ ಶಾಸಕರನ್ನು ಹೊಂದಿದ್ದೇವೆ. ಶೇ.60ರಷ್ಟು ಕೇಂದ್ರ ಸಚಿವ ಸಂಪುಟದಲ್ಲಿರುವ ಮಂತ್ರಿಗಳು ಈ ಸಮುದಾಯಗಳಿಗೆ ಸೇರಿದವರು. 2014ರಲ್ಲಿ ನಾವು ದಲಿತರಾದ ರಾಮನಾಥ್ ಕೋವಿಂದ್ ಅವರನ್ನು ಭಾರತದ ರಾಷ್ಟ್ರಪತಿಯಾಗಿ ನೇಮಿಸಿದ್ದೆವು. ಇಂದು, ಬುಡಕಟ್ಟು ಸಮುದಾಯದ ದ್ರೌಪದಿ ಮುರ್ಮು ಅವರು ಪ್ರತಿಷ್ಠಿತ ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿದ್ದಾರೆ. ಇದು ನಿಜವಾದ ಭಾಗವಹಿಸುವಿಕೆ” ಎಂದು ಹೇಳಿ ಪ್ರಧಾನಿ ಮತದಾರರ ದಿಕ್ಕು ತಪ್ಪಿಸುತ್ತಿದ್ದಾರೆ.(25:46-26;50)

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಅವರನ್ನು ಹೊಸ ಸಂಸತ್ ಭವನದ ಶಂಕುಸ್ಥಾಪನೆಗೆ ಆಹ್ವಾನಿಸಿರಲಿಲ್ಲ. ಹೊಸ ಸಂಸತ್ ಕಟ್ಟಡದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನೂ ಮೋದಿ ಅಥವಾ ಬಿಜೆಪಿ ಆಹ್ವಾನಿಸಲಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ ಅಂತೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೂ ಕೂಡಾ ಆರೋಪ ಮಾಡಿದ್ದರು.

ಇನ್ನು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅವರನ್ನು ಒಪ್ಪಿಕೊಳ್ಳದಿರುವ ಕಾರಣ ಉದ್ದೇಶಪೂರ್ವಕವಾಗಿ ಕೋವಿಂದ್ ಅವರನ್ನು ನಿರ್ಲಕ್ಷಿಸಿ ಫೋಟೋಗೆ ಪೋಸ್ ನೀಡಿದ್ದಾರೆಂದು ಕೂಡಾ ಆರೋಪಿಸಲಾಗಿತ್ತು. ಟಿಆರ್‌ಎಸ್‌ನ ವೈ ಸತೀಶ್ ರೆಡ್ಡಿ, ಎಎಪಿಯ ಸಂಜಯ್ ಸಿಂಗ್ ಮತ್ತು ಕಾಂಗ್ರೆಸ್ ಪಕ್ಷದ ವೀರೇಂದ್ರ ಚೌಧರಿ, ರೋಹನ್ ಗುಪ್ತಾ ಮತ್ತು ಸುಪ್ರಿಯಾ ಶ್ರಿನಾಟೆ ಅವರು ಸಮಾರಂಭದಲ್ಲಿ ಕೋವಿಂದ್ ಅವರನ್ನು ನಿರ್ಲಕ್ಷಿಸಿದ್ದಾರೆಂದು ಹೇಳಿ ವೀಡಿಯೊವನ್ನು ಟ್ವೀಟ್ ಮಾಡಿದ್ದರು.

ಇದನ್ನು ಓದಿದ್ದೀರಾ? ಕೆಲಸವಿಲ್ಲ, ಸಾಲವಿದೆ: ಪ್ರಧಾನಿ ಮೋದಿಯವರಿಗೆ ಚಹಾ ಆತಿಥ್ಯ ನೀಡಿದ್ದ ಅಯೋಧ್ಯೆಯ ದಲಿತ ಮಹಿಳೆ ಅಳಲು

ಪ್ರಧಾನ ಮಂತ್ರಿ ನರೇಂದ್ರ ಮೋದಿ 2023ರ ಡಿಸೆಂಬರ್ 30 ರಂದು ಅಯೋಧ್ಯೆಗೆ ಭೇಟಿ ನೀಡಿದ್ದರು. ರೈಲ್ವೆ ನಿಲ್ದಾಣ, ಹೊಸ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದರು. ಈ ವೇಳೆ ಅಯೋಧ್ಯೆಯ ಉಜ್ವಲ ಯೋಜನೆಯ 10ನೇ ಕೋಟಿಯ ಫಲಾನುಭವಿ ಮೀರಾ ದೇವಿ ಮಾಂಝಿ ಎಂಬ ದಲಿತ ಮಹಿಳೆ ಮನೆಗೆ ಭೇಟಿ ನೀಡಿ ಚಹಾ ಕುಡಿದು, ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ್ದರು. ಈ ವೇಳೆ ಆ ದಲಿತ ಮಹಿಳೆ ವಾಸಿಸುತ್ತಿದ್ದ ಪ್ರದೇಶದ ದಲಿತ ಮಕ್ಕಳು ಪ್ರಧಾನಿಯವರನ್ನು ನೋಡಲೆಂದು ಕಬ್ಬಿಣದ ತಡೆಬೇಲಿಯ ಆ ಕಡೆಗೆ ನಿಂತು, ಪ್ರಧಾನಿಗೆ ಹಸ್ತಲಾಘವ ನೀಡಲು ಯತ್ನಿಸಿದ್ದರು ಆದರೆ ಪ್ರಧಾನಿ ಹಸ್ತಲಾಘವ ನೀಡುವುದಕ್ಕೆ ಮುಂದಾಗಿರಲೇ ಇಲ್ಲ. ಇದರ ಫೋಟೋ ಹಾಗೂ ವಿಡಿಯೋಗಳು ಹರಿದಾಡಿದ ನಂತರ ವ್ಯಾಪಕ ಟೀಕೆಗೂ ಕಾರಣವಾಗಿತ್ತು.

WhatsApp Image 2024 05 13 at 7.00.22 PM

ಹೀಗಿರುವಾಗ ಮೋದಿ ಕೇವಲ ವೋಟ್‌ ಬ್ಯಾಂಕ್‌ಗಾಗಿ ದಲಿತ ಮತ್ತು ಬುಡಕಟ್ಟು ಸಮುದಾಯಗಳನ್ನು ಮುನ್ನೆಲೆಗೆ ತರುತ್ತಿದ್ದಾರೆಯೇ ಹೊರತು ಯಾವುದೇ ಸಮಾನತೆ, ಸಾಮಾಜಿಕ ನ್ಯಾಯದ ಕಳಕಳಿಯಿಂದಾಗಲಿ ಅಲ್ಲ. ಬದಲಾಗಿ ವೋಟ್‌ ಬ್ಯಾಂಕ್‌ಗಾಗಿ ನಡೆಸುತ್ತಿರುವ ಗಿಮಿಕ್‌.

“ಆರ್‌ಜೆಡಿ ಮತ್ತು ಕಾಂಗ್ರೆಸ್ ಎರಡೂ ತುಷ್ಟೀಕರಣವನ್ನು ತಮ್ಮ ಪ್ರಾಥಮಿಕ ರಾಜಕೀಯ ತಂತ್ರವಾಗಿ ಪರಿವರ್ತಿಸಿವೆ. ಇದು ಧಾರ್ಮಿಕ ಮೀಸಲಾತಿಯ ವಿರುದ್ಧ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನಿಲುವಿಗೆ ವಿರುದ್ಧವಾಗಿದೆ. ಬಿಹಾರದ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳು ಆರ್‌ಜೆಡಿ ಮತ್ತು ಕಾಂಗ್ರೆಸ್ ತಮ್ಮ ಹಕ್ಕುಗಳನ್ನು ಕಸಿದುಕೊಳ್ಳಲು ಬಿಡುತ್ತವೆಯೇ” ಎಂದು ಮೋದಿ ವಿಪಕ್ಷಗಳ ವಿರುದ್ಧ ದಲಿತ ಮತ್ತು ಬುಡಕಟ್ಟು ಸಮುದಾಯಗಳನ್ನು ಎತ್ತಿಕಟ್ಟುತ್ತಿರುವ ಮೋದಿ ಸಾಮಾಜಿಕ ನೈತಿಕತೆ ಮತ್ತು ಸಾಮಾಜಿಕ ನ್ಯಾಯದ ಕುರಿತು ಮಾತನಾಡುತ್ತಿದ್ದಾರೆ. ತುಷ್ಟೀಕರಣದ ಬಗ್ಗೆ ಮಾತನಾಡುತ್ತಾರೆ. ಹಾಗಾದರೆ ಮೋದಿ ಹೋದಲ್ಲೆಲ್ಲ ರಾಮಮಂದಿರದ ಕುರಿತು ಹೆಣೆಯುವ ಕಥೆ ಮತ್ತು ಜಗನ್ನಾಥ ದೇವಾಲಯದಲ್ಲಿ ಊಟ ಬಡಿಸುತ್ತಿರುವ ಫೋಸ್‌ಗಳ ಮೂಲಕ ಮತದಾರರನ್ನು ಸಾಂಸ್ಕೃತಿಕ ಯಜಮನಿಯಲ್ಲಿ ಬಂಧಿಸುತ್ತಿರುವುದು ಅವರ ತುಷ್ಟೀಕರಣ ಅಲ್ಲವೇ? ಭಾರತೀಯ ಮುಸಲ್ಮಾನರನ್ನು ಕಂಡರೆ ವಿಷ ಕಾರುತ್ತಿರುವ ಮೋದಿಜಿ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವೇ?(21:24-24:51)

“ಕಳೆದ ದಶಕದಲ್ಲಿ, ಎಕ್ಸ್‌ಪ್ರೆಸ್‌ವೇಗಳ ನಿರ್ಮಾಣ ಸೇರಿದಂತೆ ಹೆದ್ದಾರಿಗಳ ವಿಸ್ತರಣೆ, ಬಿಹಾರದಲ್ಲಿ ರಸಗೊಬ್ಬರ ಕಾರ್ಖಾನೆಗಳು ಮತ್ತು ಉಷ್ಣ ವಿದ್ಯುತ್ ಸ್ಥಾವರಗಳಂತಹ ಯೋಜನೆಗಳ ಕಾಮಗಾರಿಗಳು ಗಣನೀಯ ಉದ್ಯೋಗ ಸಾಮರ್ಥ್ಯವನ್ನು ಸೂಚಿಸುತ್ತವೆ. ಅಲ್ಲದೆ, ಗಂಗಾ ನದಿಗೆ ಹಲವಾರು ದೊಡ್ಡ ಸೇತುವೆಗಳ ನಿರ್ಮಾಣ ಮತ್ತು ಪಾಟ್ನಾ ಮೆಟ್ರೋ ಯೋಜನೆಯ ಪ್ರಗತಿಯು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಮಾರ್ಗಗಳನ್ನು ತೋರಿಸುತ್ತದೆ” ಎಂದು ಮತ್ತಷ್ಟು ಸುಳ್ಳುಗಳನ್ನು ಹೇಳಿದ್ದಾರೆ. (32;33-4;5)

ಗಂಗಾ ನದಿಗೆ ಅಡ್ಡಲಾಗಿರುವ ರೈಲ್ವೆ ಸೇತುವೆ ಯೋಜನೆಯ ಕಾಮಗಾರಿ ಉದ್ಘಾಟನೆಯನ್ನು ಎಚ್‌ ಡಿ ದೇವೇಗೌಡರು ತಮ್ಮ ಪ್ರಧಾನ ಮಂತ್ರಿ ಅವಧಿಯಲ್ಲಿ ಮಾಡಿದ್ದರು. ದೇಶದಲ್ಲಿ ಇಷ್ಟು ವರ್ಷಗಳಿಂದ ಎಲ್ಲ ಇನ್ಫಾಸ್ಟ್ರಕ್ಚರ್‌ಗಳಿಂದ ಆರಂಭಿಸಿದ್ದ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಮೋದಿ, ಈಗ ಎಲ್ಲವನ್ನೂ ತಾನೇ ಮಾಡಿದ್ದೇನೆಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಈಗ ಬಿಹಾರದ ಅಭಿವೃದ್ಧಿಯ ಯೋಜನೆಗಳನ್ನು ಪೂರ್ಣಗೊಳಿಸುವುದಾಗಿ ಮತ್ತು ಅದರಿಂದ ಉದ್ಯೋಗ ಸೃಷ್ಟಿಸುವುದಾಗಿ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...