ಲೈಂಗಿಕ ಅಪರಾಧಿ ‘ಎಪ್ಸ್ಟೀನ್ ಫೈಲ್‌’ನಲ್ಲಿ ಪ್ರಧಾನಿ ಮೋದಿ ಹೆಸರು!

Date:

ಲೈಂಗಿಕ ಅಪರಾಧದಲ್ಲಿ ಶಿಕ್ಷೆಗೊಳಗಾಗಿದ್ದ ಲೇವಾದೇವಿದಾರ ದಿ. ಜೆಫ್ರಿ ಎಪ್ಸ್ಟೀನ್‌ಗೆ ಸಂಬಂಧಿಸಿದ ಹೊಸ ತನಿಖಾ ಕಡತವನ್ನು ಅಮೆರಿಕದ ನ್ಯಾಯ ಇಲಾಖೆ ಬಿಡುಗಡೆ ಮಾಡಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಹೆಸರು ಉಲ್ಲೇಖವಾಗಿದೆ. ‘ಎಪ್ಸ್ಟೀನ್‌ನಿಂದ ಸಲಹೆ ಪಡೆದು 2017ರಲ್ಲಿ ಪ್ರಧಾನಿ ಮೋದಿ ಅವರು ಇಸ್ರೇಲ್‌ಗೆ ಭೇಟಿ ನೀಡಿದ್ದರು’ ಎಂದು ಹೇಳಲಾಗಿದೆ. ಈ ಬೆಳವಣಿಗೆಯನ್ನು ಕಾಂಗ್ರೆಸ್‌ ಖಂಡಿಸಿದ್ದು, ‘ಇದು ರಾಷ್ಟ್ರೀಯ ಘನತೆಯ ವಿಷಯ’ ಎಂದು ಹೇಳಿದೆ. ಕಡತದಲ್ಲಿನ ವಿವರವನ್ನು ಸುಳ್ಳು ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಪ್ರತಿಪಾದಿಸಿದೆ.

ಯುಎಸ್ ನ್ಯಾಯಾಂಗ ಇಲಾಖೆಯು ಎಪ್ಸ್ಟೀನ್ ಕುರಿತ ತನಿಖಾ ಕಡತಗಳಿಂದ ಹೊಸ ದಾಖಲೆಗಳನ್ನು ಬಿಡುಗಡೆ ಮಾಡುತ್ತಿದೆ. 2,000ಕ್ಕೂ ಹೆಚ್ಚು ವೀಡಿಯೊಗಳು ಮತ್ತು 1,80,000 ಚಿತ್ರಗಳ ಜೊತೆಗೆ 30 ಲಕ್ಷ  ಪುಟಗಳಿಗೂ ಹೆಚ್ಚು ದಾಖಲೆಗಳನ್ನು ಬಿಡುಗಡೆ ಮಾಡುತ್ತಿರುವುದಾಗಿ ಅಮೆರಿಕ ಡೆಪ್ಯೂಟಿ ಅಟಾರ್ನಿ ಜನರಲ್ ಟಾಡ್ ಬ್ಲಾಂಚೆ ಹೇಳಿದ್ದಾರೆ.

ಕತಡದಲ್ಲಿ, “ಅಮೆರಿಕ ಅಧ್ಯಕ್ಷರ ಅನುಕೂಲಕ್ಕಾಗಿ ಇಸ್ರೇಲ್‌ಗೆ ಭೇಟಿ ನೀಡುವಂತೆ ಭಾರತದ ಪ್ರಧಾನಿ ಮೋದಿ ಅವರು ಎಪ್ಸ್ಟೀನ್‌ನಿಂದ ಸಲಹೆ ಪಡೆದಿದ್ದರು. ಅವರು ಕೆಲವು ವಾರಗಳ ಹಿಂದೆ (2017) ಭೇಟಿ ನೀಡಿದ್ದರು. ಅವರು ಅಲ್ಲಿ ನೃತ್ಯ ಮಾಡಿದರು, ಹಾಡು ಹಾಡಿದರು.  ಅವರ ಭೇಟಿ ಕೆಲಸ ಮಾಡಿದೆ” ಎಂದು ವಿವರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2017ರ ಜುಲೈ 4ರಿಂದ 6ರವೆಗೆ ಪ್ರಧಾನಿ ಮೋದಿ ಇಸ್ರೇಲ್ ಭೇಟಿ ನೀಡಿದ್ದರು. ಈ ಭೇಟಿಯ ಮೂರು ದಿನಗಳ ಬಳಿಕ (ಜುಲೈ 9) ಎಪ್ಸ್ಟೀನ್ ಇ-ಮೇಲ್‌ ಮಾಡಿದ್ದು, ಅದರಲ್ಲಿ ತಾವು ಮೋದಿಗೆ ಸಲಹೆ ನೀಡಿದ್ದರ ಬಗ್ಗೆ ಬರೆದಿದ್ದಾರೆ. ಅಲ್ಲದೆ, ಮೋದಿ ಇಸ್ರೇಲ್‌ ಭೇಟಿಗೂ ಒಂದು ವಾರಗಳ ಮುನ್ನ, 2017ರ ಜೂನ್ 25-26ರಂದು ಮೋದಿ ಅವರು ಅಮೆರಿಕದಲ್ಲಿ ಟ್ರಂಪ್‌ ಅವರನ್ನು ಭೇಟಿಯಾಗಿದ್ದರು ಎಂದು ಹೇಳಲಾಗಿದೆ.

ಈ ಫೈಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರು ಇರುವುದನ್ನು ಉಲ್ಲೇಖಿಸಿ ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. “ಇದು ಅತ್ಯಂತ ನಾಚಿಕೆಗೇಡು, ರಾಷ್ಟ್ರೀಯ ಘನತೆ ಮತ್ತು ಅಂತರರಾಷ್ಟ್ರೀಯ ಖ್ಯಾತಿಯ ವಿಷಯ. ಕಡತದಲ್ಲಿನ ಆರೋಪಕ್ಕೆ ಬಿಜೆಪಿ ಉನ್ನತ ನಾಯಕರು ಉತ್ತರಿಸಬೇಕು” ಎಂದು ಆಗ್ರಹಿಸಿದೆ.

“ಪ್ರಧಾನಿ ಮೋದಿ ಅವರು ಜೆಫ್ರಿ ಎಪ್ಸ್ಟೀನ್ ಜೊತೆ ಆಳವಾದ ಮತ್ತು ದೀರ್ಘಕಾಲದ ಸಂಬಂಧವನ್ನು ಹೊಂದಿದ್ದಾರೆ ಎಂಬುದು ಈಗ ಸ್ಪಷ್ಟವಾಗಿದೆ. ಇದು ಭಾರತಕ್ಕೆ ನಾಚಿಕೆಗೇಡಿನ ಸಂಗತಿ. ಇದು ರಾಷ್ಟ್ರೀಯ ಘನತೆ ಮತ್ತು ಅಂತರರಾಷ್ಟ್ರೀಯ ಖ್ಯಾತಿಯ ವಿಷಯವಾಗಿದೆ. ಇದಕ್ಕೆ ಪ್ರಧಾನಿ ಮೋದಿ ಉತ್ತರಿಸಬೇಕು… ಪ್ರಧಾನಿ ಮೋದಿಯವರೇ, ರಾಷ್ಟ್ರವು ತಿಳಿದುಕೊಳ್ಳಲು ಬಯಸುತ್ತದೆ: ಜೆಫ್ರಿ ಎಪ್ಸ್ಟೀನ್ ಅವರೊಂದಿಗಿನ ನಿಮ್ಮ ಸಂಬಂಧ ಏನು?” ಎಂದು ಕಾಂಗ್ರೆಸ್ ಹೇಳಿದೆ.

“ಅಮೆರಿಕದ ಜೈಲಿನಲ್ಲಿ ಸಾವನ್ನಪ್ಪಿದ ಶಿಕ್ಷೆಗೊಳಗಾದ ಅಪರಾಧಿ ಎಪ್ಸ್ಟೀನ್ ಅವರಿಂದ ಪಡೆದ ‘ಸಲಹೆ’ ಕುರಿತು ಮೋದಿ ಮಾತನಾಡಬೇಕು” ಎಂದು ಆಗ್ರಹಿಸಿದೆ

“ಪ್ರಧಾನಿ ಮೋದಿ ಕುರಿತು ಕಡತದಲ್ಲಿ ಹಲವಾರು ಬಾರಿ ಪ್ರಸ್ತಾಪಿಸಲಾಗಿದೆ. ಹಲವು ಪ್ರಶ್ನೆಗಳು ಉಳಿದಿವೆ. ಇದು ಮತ್ತೊಂದು ಹಗರಣವಾಗುತ್ತಿದೆ. ಪ್ರಧಾನಿ ಮೋದಿ ಮೌನ ಸ್ವೀಕಾರಾರ್ಹವಲ್ಲ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಹೇಳಿದ್ದಾರೆ.

ಟ್ರಂಪ್ ಅವರ ಮಾಜಿ ಸಹಾಯಕ ಸ್ಟೀವ್ ಬ್ಯಾನನ್ ಜೊತೆಗಿನ ಎಪ್ಸ್ಟೀನ್ ಸಂಭಾಷಣೆಯಲ್ಲಿ ‘ಮೋದಿ ಜೊತೆ ವಾಷಿಗ್ಟಂನ್‌ನ (ಅಮೆರಿಕ) ಯಾರೂ ಮಾತನಾಡುವುದಿಲ್ಲ’ ಎಂದು ಹೇಳಲಾಗಿರುವುದನ್ನು ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಉಲ್ಲೇಖಿಸಿದ್ದಾರೆ. “ಕೆಲವು ಪ್ರಸ್ತುತ ಪ್ರಶ್ನೆಗಳು ಉದ್ಭವಿಸುತ್ತವೆ: 1) 2019ರ ಚುನಾವಣೆಯ ಸಮಯದಲ್ಲಿ ಮೋದಿ ಅವರು ಎಪ್ಸ್ಟೀನ್ ಅವರಂತಹ ಅವಮಾನಕರ ಅಮೆರಿಕನ್ನರನ್ನು ಏಕೆ ಭೇಟಿಯಾದರು? 2) ‘ವಾಷಿಗ್ಟಂನ್‌’ನಲ್ಲಿ ಯಾರೂ ಅವರೊಂದಿಗೆ ಮಾತನಾಡಲು ಆಸಕ್ತಿ ಹೊಂದಿಲ್ಲದಿದ್ದಾಗ ಮೋದಿ ಅವರು ಅಮೆರಿಕದೊಂದಿಗಿನ ತಮ್ಮ ಸ್ನೇಹದ ಬಗ್ಗೆ ದೇಶಕ್ಕೆ ಏಕೆ ಸುಳ್ಳು ಹೇಳುತ್ತಿದ್ದರು? 3) ಗಾಲ್ವಾನ್ ಬಿಕ್ಕಟ್ಟಿನ ಕೇವಲ ಒಂದು ವರ್ಷದ ನಂತರ ಅವರು ತಮ್ಮ ‘ಪ್ರಮುಖ ಶತ್ರು’ ಚೀನಾಕ್ಕೆ ಕ್ಲೀನ್ ಚಿಟ್ ನೀಡಿದ್ದು ಏಕೆ? 4) ಬ್ಯಾನನ್ ಮತ್ತು ಮೋದಿ ನಡುವಿನ ಪ್ರಸ್ತಾವಿತ ಸಭೆ ನಡೆದಿದೆಯೇ? ಏನು ಚರ್ಚಿಸಲಾಯಿತು?” ಎಂದು ಪೋಸ್ಟ್ ಮಾಡಿದ್ದಾರೆ.

ಎಪ್ಸ್ಟೀನ್‌ ಫೈಲ್‌ನಲ್ಲಿ ಪ್ರಧಾನಿ ಮೋದಿ ಉಲ್ಲೇಖವನ್ನು ಸುಳ್ಳುಪೂರಿತವೆಂದು ಭಾರತೀಯ ವಿದೇಶಾಂಗ ಸಚಿವಾಲಯ ಹೇಳಿದೆ. “2017ರ ಜುಲೈನಲ್ಲಿ ಪ್ರಧಾನಿಯವರು ಇಸ್ರೇಲ್‌ಗೆ ಅಧಿಕೃತ ಭೇಟಿ ನೀಡಿದ್ದನ್ನು ಮೀರಿ, ಇಮೇಲ್‌ನಲ್ಲಿನ ಉಲ್ಲೇಖಗಳು ಶಿಕ್ಷೆಗೊಳಗಾದ ಅಪರಾಧಿಯೊಬ್ಬರ ಕಸದ ಮಾತುಗಳಷ್ಟೇ ಅಲ್ಲ, ಇದನ್ನು ಅತ್ಯಂತ ತಿರಸ್ಕಾರದಿಂದ ನಿರಾಕರಲಿಸಲು ಅರ್ಹವಾಗಿದೆ” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...