ಬಡವರ ಹಸಿವಿನ ವಿಚಾರದಲ್ಲೂ ಬಿಜೆಪಿ ರಾಜಕೀಯ: ಡಾ. ಜಿ ಪರಮೇಶ್ವರ್‌

Date:

  • ಅಕ್ಕಿ ಬದಲು ಹಣ ನೀಡಿ ಎಂದಿದ್ದ ಬಿಜೆಪಿಯೇ ಈಗ ವಿರೋಧಿಸುತ್ತಿದೆ
  • ಗೋದಾಮಿನಲ್ಲಿ ಅಕ್ಕಿ ಕೊಳೆಯುತ್ತಿದ್ದರೂ ಕೇಂದ್ರ ಕೊಡದೆ ಸತಾಯಿಸುತ್ತಿದೆ

ಬಕ್ರೀದ್ ಆಚರಣೆ ಹಿನ್ನೆಲೆ ತುಮಕೂರು ಜಿಲ್ಲೆ ಕೊರಟಗೆರೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಬಿಪಿಎಲ್‌ ಕುಟುಂಬಗಳಿಗೆ 5 ಕೆ.ಜಿ ಅಕ್ಕಿ ಬದಲು ಮೂರು ತಿಂಗಳು ಹಣ ನೀಡಲಾಗುವುದು. ಅಷ್ಟರಲ್ಲಿ ಅಕ್ಕಿ ಹೊಂದಿಸಿಕೊಂಡು ವಿತರಣೆ ಮಾಡಲಾಗುವುದು. ಅಕ್ಕಿ ಕೊಡದಿದ್ದರೆ ಹಣ ನೀಡಬೇಕು ಎಂದು ಬಿಜೆಪಿಯವರೇ ಒತ್ತಾಯಿಸಿದ್ದರು. ಆದರೆ ಈಗ ಹಣ ಕೊಟ್ಟರೆ ಅದಕ್ಕೂ ವಿರೋಧ ಮಾಡುತ್ತಿದ್ದಾರೆ. ಏನು ಮಾಡಿದರೂ ವಿರೋಧವನ್ನೇ ಮಾಡುತ್ತಾರೆ” ಎಂದು ಆರೋಪಿಸಿದ್ದಾರೆ.

“ಅಕ್ಕಿ ಬದಲು ಹಣ ಕೊಡುವುದಕ್ಕೆ ಕೆಲವರು ಮಾತ್ರ ವಿರೋಧ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅಕ್ಕಿ ಕೊಟ್ಟೆಕೊಡುತ್ತೇವೆ. ದೇಶದ ಗೋದಾಮುಗಳಲ್ಲಿ ಅಕ್ಕಿ ಕೊಳೆಯುತ್ತಿದ್ದು, ಹಣ ಕೊಟ್ಟರೂ ಕೇಂದ್ರ ಸರ್ಕಾರ ನೀಡುತ್ತಿಲ್ಲ. ರಾಜ್ಯದಲ್ಲಿರುವ ಭಾರತ ಆಹಾರ ನಿಗಮದ ಗೋದಾಮುಗಳಲ್ಲಿ 7 ಲಕ್ಷ ಟನ್ ಅಕ್ಕಿ ಇದೆ. ಅದನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿದ್ದಾರೆ. ನಮಗೆ ಕೊಡಲು ರಾಜಕಾರಣ ಮಾಡುತ್ತಿದ್ದಾರೆ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಕ್ಕಿ ನೀಡುವುದು ಪ್ರತಿಷ್ಠೆ ವಿಚಾರ ಆಗಬಾರದು. ಬಡವರ ಹಸಿವಿನ ಪ್ರಶ್ನೆಯಾಗಬೇಕು. ಪ್ರತಿಷ್ಠೆ ಮಾಡಿದರೆ ಬಡವರ ಹೊಟ್ಟೆ ತುಂಬುವುದಿಲ್ಲ. ಬಿಜೆಪಿಯವರು ಬಡವರ ಹಸಿವಿನ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ” ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಬಕ್ರೀದ್ | ದ್ವೇಷ ಹುಟ್ಟುಹಾಕುವ ಶಕ್ತಿಗಳಿಗೆ ಮಹತ್ವ ನೀಡಬಾರದು: ಸಿಎಂ ಸಿದ್ದರಾಮಯ್ಯ

ಬಕ್ರೀದ್ ಪವಿತ್ರವಾದ ಹಬ್ಬ

“ಇಡೀ ವಿಶ್ವಕ್ಕೆ ಸಂದೇಶ ಕೊಡುವ ಬಕ್ರೀದ್ ಹಬ್ಬ ಇದು‌. ನಾನು ಎಲ್ಲರಿಗೂ ನಮನಗಳನ್ನ ಹೇಳುತ್ತೇನೆ. ಅಲ್ಲಾ ಎಲ್ಲರಿಗೂ ಅನೇಕ ರೀತಿ ಪರೀಕ್ಷೆ ಮಾಡುತ್ತಾನೆ. ಅದರಲ್ಲೂ ಮನುಷ್ಯರಿಗೆ ಹೆಚ್ಚು ಪರೀಕ್ಷೆ ಮಾಡುತ್ತಾನೆ. ಇದು ಪವಿತ್ರವಾದ ಹಬ್ಬ” ಎಂದಿದ್ದಾರೆ.

“ಚುನಾವಣಾ ಸಂದರ್ಭದಲ್ಲಿ ನಿಮ್ಮ ಬಳಿ ಬಂದು ನಿಮ್ಮ ಆಶೀರ್ವಾದ ಕೇಳಿದ್ದೆ. ನೀವೆಲ್ಲಾ ಕೊಟ್ಟಿದ್ದೀರಾ, ಅಲ್ಲಾನ ಕೃಪೆಯಿಂದ ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಿಮ್ಮ ಆಶೀರ್ವಾದದಿಂದ ಗೃಹ ಸಚಿವನಾಗಿದ್ದೇನೆ. ಈ ರಾಜ್ಯದಲ್ಲಿ ಶಾಂತಿ ಕಾಪಾಡಬೇಕಾದ ಕೆಲಸ ನನ್ನದು. ಯಾವುದೇ ಮುಲಾಜಿಲ್ಲದೇ ಕೆಲಸ ನಿಭಾಯಿಸುತ್ತೇನೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...