ಇಂದಿನಿಂದ ವಿಧಾನಮಂಡಲ ಮುಂಗಾರು ಅಧಿವೇಶನ: ಸರ್ಕಾರದ ವಿರುದ್ಧ ವಾಕ್ಸಮರಕ್ಕೆ ವಿಪಕ್ಷಗಳು ಸಜ್ಜು

Date:

ವಿಧಾನಮಂಡಲದ ಉಭಯ ಸದನಗಳ ಮುಂಗಾರು ಅಧಿವೇಶನವು ಇಂದಿನಿಂದ(ಆಗಸ್ಟ್ 11) ಆರಂಭವಾಗಲಿದ್ದು, ಒಟ್ಟು 17 ಮಸೂದೆಗಳನ್ನು ಮಂಡಿಸಲು ಸರ್ಕಾರ ಸಜ್ಜಾಗಿದೆ. ಜೊತೆಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಮತ್ತು ವಿಪಕ್ಷಗಳ ಪ್ರಶ್ನೆಗೆ ಉತ್ತರ ನೀಡಲು ಸರ್ಕಾರ ಸಿದ್ಧತೆಯನ್ನು ಮಾಡಿಕೊಂಡಂತಿದೆ.

ವಾಕ್ಸಮರಕ್ಕೆ ವೇದಿಕೆಯಾಗಿರುವ ಅಧಿವೇಶನದಲ್ಲಿ ಬೆಂಗಳೂರು ಕಾಲ್ತುಳಿತ ಪ್ರಕರಣ, ಜಾತಿ ಗಣತಿ ಮರು ಸಮೀಕ್ಷೆ, ಅನುದಾನ ಕೊರತೆ, ಮತ ಕಳವು, ಪರಿಶಿಷ್ಟರ ಒಳಮೀಸಲಾತಿ ವರದಿ ಸಲ್ಲಿಕೆ ಪರ-ವಿರೋಧ- ಹೀಗೆ ಹಲವು ವಿಚಾರಗಳ ಚರ್ಚ ನಡೆಯುವ ಸಾಧ್ಯತೆಯಿದೆ. ಗೃಹಲಕ್ಷ್ಮಿ ಸೇರಿದಂತೆ ಗ್ಯಾರಂಟಿ ಯೋಜನೆಗಳ ಹಣ ಸರ್ಕಾರಕ್ಕೆ ಬಿಡುಗಡೆಯಾಗುತ್ತಿಲ್ಲ ಎಂಬ ಆರೋಪದ ಪ್ರಸ್ತಾಪವೂ ನಡೆಯುವ ಸಾಧ್ಯತೆಯಿದೆ.

ಇದನ್ನು ಓದಿದ್ದೀರಾ? BREAKING NEWS | ಆಗಸ್ಟ್ 11ರಿಂದ‌ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನೊಂದೆಡೆ ಬಿಜೆಪಿಗೆ ಭಿನ್ನಮತವನ್ನು ನಿಭಾಯಿಸುವುದೇ ಸವಾಲಾಗಬಹುದು. ಈಗಾಗಲೇ ಬಹಿರಂಗವಾಗಿ ಬಿಜೆಪಿ ವಿರುದ್ಧ ಹೇಳಿಕೆಯನ್ನು ನೀಡುತ್ತಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಯಶವಂತಪುರ ಶಾಸಕ ಎಸ್​ಟಿ ಸೋಮಶೇಖರ್, ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ ಅವರನ್ನು ಈಗಾಗಲೇ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಅದಾದ ಬಳಿಕ ಮೊದಲ ಬಾರಿಗೆ ಕಲಾಪಕ್ಕೆ ಮೂವರೂ ಆಗಮಿಸುತ್ತಿದ್ದಾರೆ. ಆದ್ದರಿಂದಾಗಿ ಬಿಜೆಪಿಗೆ ವಿಧಾನಮಂಡಲದಲ್ಲಿಯೂ ಬಂಡಾಯ ನಾಯಕರುಗಳನ್ನು ಹತ್ತಿಕುವ ಸವಾಲಿದೆ.

ಈಗಾಗಲೇ ಶಾಸಕರಿಗೆ ತಲಾ 50 ಕೋಟಿ ರೂಪಾಯಿ ವಿಶೇಷ ಅನುದಾನ ಹಂಚಿಕೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ. ಆದರೆ ಇದು ಆಡಳಿತ ಪಕ್ಷದ ನಾಯಕರಿಗೆ ಮಾತ್ರ, ತಾರತಮ್ಯ ಮಾಡಲಾಗುತ್ತಿದೆ ಎಂದು ವಿಪಕ್ಷಗಳು ಆರೋಪಿಸಿವೆ. ಈ ನಿಟ್ಟಿನಲ್ಲಿ ಪ್ರತಿಭಟನೆ ನಡೆಸಲೂ ಸಜ್ಜಾಗಿದೆ.

ರಾಜ್ಯದಲ್ಲಿ ನಡೆದ ಹಲವು ಹತ್ಯೆಗಳ ಬಗ್ಗೆ ಪ್ರಸ್ತಾಪಕ್ಕೂ ಬಿಜೆಪಿ ತಯಾರಿ ನಡೆಸಿದೆ. ಧರ್ಮಸ್ಥಳ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ ರಚನೆ, ಧರ್ಮಸ್ಥಳ ಸುತ್ತಮುತ್ತ ಅಕ್ರಮವಾಗಿ ಮೃತದೇಹ ಹೂತ ಪ್ರಕರಣ ಮತ್ತು ಅದರ ಶೋಧ ವಿಚಾರವೂ ಪ್ರಸ್ತಾಪವಾಗುವ ಸಾಧ್ಯತೆಯಿದೆ. ಜೊತೆಗೆ ಮೇ ತಿಂಗಳಿನಲ್ಲಿ ಮಂಗಳೂರಿನಲ್ಲಿ ನಡೆದ ಕೋಮುದ್ವೇಷದ ಹತ್ಯೆಗಳು, ಬೆಂಗಳೂರಿನಲ್ಲಿ ಬಾಲಕನನ್ನು ಹಣಕ್ಕಾಗಿ ಅಪಹರಿಸಿ ಕೊಂದ ಪ್ರಕರಣ, ಕೊಪ್ಪಳ ಮತ್ತು ಕೊರಟಗೆರೆಯಲ್ಲಿ ನಡೆದ ಕೊಲೆಗಳು- ಮೊದಲಾದವುಗಳು ಪ್ರಸ್ತಾಪವಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...