ಮೂಡಾ ಹಗರಣ | ಎಲ್ಲ ಅಕ್ರಮ ನಡೆದಿರುವುದೇ ಬಿಜೆಪಿ ಕಾಲದಲ್ಲಿ: ಡಿ ಕೆ ಶಿವಕುಮಾರ್

Date:

ಮೂಡಾ ಹಗರಣ ವಿರೋಧಿಸಿ ಬಿಜೆಪಿಯಿಂದ ಸಿಎಂ ಮನೆಗೆ ಮುತ್ತಿಗೆ ವಿಚಾರವಾಗಿ ಡಿಸಿಎಂ ಡಿ ಕೆ ಶಿವಕುಮಾರ್‌ ಅವರನ್ನು ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದಾಗ, “ನಮ್ಮ ಕಾಲದಲ್ಲಿ ಯಾವುದೇ ಹಗರಣಗಳು ನಡೆದಿಲ್ಲ” ಎಂದು ಸ್ಪಷ್ಟವಾಗಿ ಹೇಳಿದರು

ಚನ್ನಪಟ್ಟಣದ ಕೋಟೆ ಮಾರಮ್ಮ ದೇವಸ್ಥಾನದ ಆವರಣದಲ್ಲಿ ನಡೆದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದ ನಂತರ ಮಾತನಾಡಿದ ಅವರು, “ಎಲ್ಲ ಹಗರಣಗಳು ನಡೆದಿರುವುದು ಬಿಜೆಪಿ ಕಾಲದಲ್ಲಿ. ಅವರ ಎಲ್ಲ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರ ಕೊಡುತ್ತೇವೆ” ಎಂದು ತಿರುಗೇಟು ನೀಡಿದರು.

ಬೇಬಿ ಬೆಟ್ಟದಲ್ಲಿ ಪ್ರಯೋಗಾತ್ಮಕ ಸ್ಫೋಟದ ಬಗ್ಗೆ ಕೇಳಿದಾಗ, “ಕೆಆರ್‌ಎಸ್ ಅಣೆಕಟ್ಟಿನಲ್ಲಿ ಸ್ಫೋಟ ಮಾಡುವುದಿಲ್ಲ. ಏನೇನು ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಸ್ಫೋಟ ಮಾಡಲಾಗುತ್ತದೆ. ಇಂತಿಷ್ಟು ದೂರ ಎಂಬುದು ಇರುತ್ತದೆ” ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಮಾರಸ್ವಾಮಿ ಅವರು ಮಂಡ್ಯದಲ್ಲೂ ಜನಸಂಪರ್ಕ ಸಭೆ ನಡೆಸುತ್ತಿದ್ದಾರೆ. ನಿಮ್ಮನ್ನು ನೋಡಿ ನಕಲು ಮಾಡುತ್ತಿದ್ದಾರೆಯೇ ಎಂದಾಗ, “ಮಾಡಲಿ, ಒಳ್ಳೆಯ ಕೆಲಸ ಯಾರು ಮಾಡಿದರೆ ಏನಂತೆ. ಜನಸೇವೆ ಮಾಡುವುದನ್ನು ನಾನು ಬೇಡ ಎಂದು ಹೇಳಲು ಆಗುತ್ತದೆಯೇ” ಎಂದು ಮರು ಪ್ರಶ್ನಿಸಿದರು.

ಉಪಚುನಾವಣೆ ಅಭ್ಯರ್ಥಿಗಳನ್ನು ಯಾವಾಗ ಘೋಷಣೆ ಮಾಡುತ್ತೀರಾ ಎಂದು ಕೇಳಿದಾಗ,
“ಮೊದಲು ಚುನಾವಣಾ ದಿನಾಂಕ ಘೋಷಣೆಯಾಗಲಿ. ಅವರೇ ಬಂದು ನಾಮಪತ್ರ ಸಲ್ಲಿಕೆ ಮಾಡುತ್ತಾರೆ” ಎಂದರು.

ಡಿಕೆ ಶಿವಕುಮಾರ್ ಅವರೇ ನನ್ನನ್ನು ಜೈಲಿಗೆ ಹಾಕಿಸಿದ್ದು ಎನ್ನುವ ವಕೀಲ ದೇವರಾಜೇಗೌಡ ಅವರ ಆರೋಪದ ಬಗ್ಗೆ ಕೇಳಿದಾಗ “ನನ್ನನ್ನು ನೆನೆಸಿಕೊಳ್ಳುತ್ತಿರಲಿ. ಬಹಳ ಸಂತೋಷ” ಎಂದಷ್ಟೇ ಹೇಳಿದರು.

ಇಲಾಖಾವಾರು ಅರ್ಜಿಗಳ ವಿಂಗಡಣೆ

ನಿವೇಶನ ಹಂಚಲು ಗಡುವು ಏನಾದರೂ ಇದೆಯೇ ಎಂದು ಕೇಳಿದಾಗ, “ಮೊದಲು ಎಲ್ಲ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುವುದು. ಅರ್ಹರನ್ನು ಗುರುತಿಸಲಾಗುವುದು. ನಂತರ ನಾನೇ ಖುದ್ದಾಗಿ ಬಂದು ಸರ್ಕಾರಿ ಜಮೀನು, ಖಾಸಗಿ ಜಮೀನು ಪರಿಶೀಲನೆ ನಡೆಸಿ ಹಂಚಿಕೆ ಮಾಡಲಾಗುವುದು. ಇಲಾಖಾವಾರು ಅರ್ಜಿಗಳನ್ನು ವಿಂಗಡಣೆ ಮಾಡಿ ಆಯಾಯ ಇಲಾಖೆಯ ಸಚಿವರಿಂದ ಸಭೆ ನಡೆಸಲಾಗುವುದು” ಎಂದು ತಿಳಿಸಿದರು.

“ಚನ್ನಪಟ್ಟಣವನ್ನು ಬದಲಾವಣೆ ಮಾಡಬೇಕು. ಮುನಿಸಿಪಾಲಿಟಿ, ತಾಲ್ಲೂಕು ಕಚೇರಿ, ಆಸ್ಪತ್ರೆ ಸೇರಿದಂತೆ ಎಲ್ಲವನ್ನು ಬದಲಾವಣೆ ಮಾಡಬೇಕು. ಶವ ಸಂಸ್ಕಾರ ಮಾಡಲು ಸ್ಮಶಾನವಿಲ್ಲ, ಬಡವರಿಗೆ, ಬೀಡಿ ಕಾರ್ಮಿಕರಿಗೆ ಮನೆಯಿಲ್ಲ, ಈ ಬದಲಾವಣೆಗಳು ಏಕೆ ಆಗಲಿಲ್ಲವೋ ಗೊತ್ತಿಲ್ಲ. ಗ್ರಾಮೀಣ ಭಾಗದ ಮಹಿಳೆಯರಿಗೆ ಸ್ವೀಕೃತಿ ಪತ್ರ ಪಡೆದುಕೊಳ್ಳುವ ತಾಳ್ಮೆಯಿತ್ತು. ಚನ್ನಪಟ್ಟಣ ನಗರದ ಮಹಿಳೆಯರಿಗೆ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ದಾವಂತದಲ್ಲಿ ಇದ್ದಾರೆ. ಅಂದರೆ ಜನರ ಸಮಸ್ಯೆಗಳನ್ನು ಸರಿಯಾಗಿ ಆಲಿಸಿಲ್ಲ ಎಂದರ್ಥ. ಇದಕ್ಕೆ ನಾನು ಉತ್ತರ ಕೊಡಬೇಕಾಗಿಲ್ಲ, ಮತದಾರರು, ಸ್ಥಳೀಯ ನಾಯಕರು ಇದನ್ನು ಅರ್ಥ ಮಾಡಿಕೊಳ್ಳಬೇಕು” ಎಂದರು.

ಜನಸೇವೆ ಮಾಡಲು ಅವಕಾಶ

“ಜನರ ಸೇವೆ ಮಾಡಲು ನನಗೆ ಅವಕಾಶ. ನಾನು ಅಧಿಕಾರದಲ್ಲಿದ್ದು ಈ ಕಾರ್ಯಕ್ರಮದ ಮೂಲಕ ಜನರ ಮನೆ ಬಾಗಿಲಿಗೆ ಹೋಗಿ ಅವರ ಸಮಸ್ಯೆಗಳನ್ನು ಬಗೆಹರಿಸುವ ವಿಶೇಷ ಕಾರ್ಯಕ್ರಮ. ಈ ಹಿಂದಿನ ಸರ್ಕಾರ ವೃದ್ಧಾಪ್ಯ ವೇತನ ನೀಡಲು 500 ರೂ ತೆಗೆದುಕೊಳ್ಳುತ್ತಿತ್ತು. ನಾನು ಕನಕಪುರದಲ್ಲಿ 13 ಸಾವಿರ ಜನರಿಗೆ ಪಿಂಚಣಿ ಬರುವಂತೆ ಮಾಡಿದೆ. ಪ್ರತಿ ವಾರ್ಡ್ ವಾರು ಸಭೆ ನಡೆಸಿ ಸುಮಾರು 3 ತಿಂಗಳ ಕಾಲ ನೀವೇಶನಗಳನ್ನು ಹಂಚಿದ್ದೇನೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...