ಚುನಾವಣೆ | ಮೋದಿಗೆ ನೈತಿಕ, ರಾಜಕೀಯ, ವೈಯಕ್ತಿಕ ಸೋಲು – ಕರುಣಾಜನಕ ಪ್ರದರ್ಶನ; ಕಾಂಗ್ರೆಸ್ ಲೇವಡಿ

Date:

ಲೋಕಸಭೆ ಚುನಾವಣೆಯ ಜನಾದೇಶವು ಪ್ರಧಾನಿ ನರೇಂದ್ರ ಮೋದಿಯವರಿಗೆ ‘ನೈತಿಕ, ರಾಜಕೀಯ ಮತ್ತು ವೈಯಕ್ತಿಕ’ ಸೋಲನ್ನು ಕೊಟ್ಟಿದೆ. ಈಗ ಅವರ ‘ಕರುಣಾಜನಕ’ ಚುನಾವಣಾ ಕಾರ್ಯಕ್ಷಮತೆಯನ್ನು ಸಮರ್ಥಿಸಿಕೊಳ್ಳುವ ಪ್ರಯತ್ನಗಳನ್ನು ನಡೆಯುತ್ತಿವೆ ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ.

ಮಂಗಳವಾರ ಪ್ರಕಟವಾದ ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ 240 ಸ್ಥಾನಗಳನ್ನು ಮಾತ್ರ ಗೆದ್ದಿದೆ. ಬಹುಮತ ಪಡೆಯುವಲ್ಲಿ ವಿಫಲವಾಗಿದ್ದು, ಎನ್‌ಡಿಎ ಮೈತ್ರಿಪಕ್ಷಗಳ ನೆರವಿನಿಂದ ಸರ್ಕಾರ ರಚನೆಗೆ ಮುಂದಾಗಿದೆ. ಬಿಜೆಪಿಯೂ ಸೇರಿದಂತೆ ಎನ್‌ಡಿಎ ಮಿತ್ರಪಕ್ಷಗಳು 543 ಸ್ಥಾನಗಳ ಪೈಕಿ 293 ಸ್ಥಾನಗಳನ್ನು ಗೆದ್ದಿದ್ದರೆ, ಇಂಡಿಯಾ ಮೈತ್ರಿಕೂಟ 233 ಸ್ಥಾನಗಳನ್ನು ಗೆದ್ದಿದೆ.

ಬಿಜೆಪಿ ಅಗತ್ಯ ಬಹುಮತ 272 ಸ್ಥಾನಗಳನ್ನು ಗೆಲ್ಲುವಲ್ಲಿ ವಿಫಲವಾದ ಬಗ್ಗೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಅವರು ಮೋದಿ ವಿರುದ್ಧ ವ್ಯಂಗ್ಯವಾಡಿ ಟ್ವೀಟ್ ಮಾಡಿದ್ದಾರೆ. “ಮೋದಿಯವರಿಗೆ ನೈತಿಕ, ರಾಜಕೀಯ ಮತ್ತು ವೈಯಕ್ತಿಕವಾಗಿ ಜನಾದೇಶವು ಸೋಲು ನೀಡಿದೆ. ಅದರಲ್ಲಿಯೂ, ಸೋಲಿನಲ್ಲಿಯೂ ಮೋದಿಯನ್ನು ಸಮರ್ಥಿಸುವ ಕೆಲಸ ಆರಂಭವಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜವಾಹರಲಾಲ್ ನೆಹರು ನಂತರ ಸತತವಾಗಿ ಮೂರು ಬಾರಿ ಜನಾದೇಶ ಪಡೆದವರು ನರೇಂದ್ರ ಮೋದಿ ಎಂದು ಪ್ರಚಾರ ಮಾಡಲಾಗುತ್ತಿದೆ. ಆದರೆ, ಪಕ್ಷವನ್ನು ಕೇವಲ 240 ಸ್ಥಾನಗಳಲ್ಲಿ ಗೆಲ್ಲಿಸುವುದು, ಅದಕ್ಕೆ ತೃಪ್ತಿಪಟ್ಟುಕೊಳ್ಳುವುದು ಹಾಗೂ ‘ಮೂರನೇ ಒಂದು ಭಾಗ’ದಷ್ಟು ಜನಾದೇಶ ಪಡೆದಿರುವುದು ಯಾವ ರೀತಿಯಲ್ಲಿ ನೆಹರು ಅವರಿಗೆ ಸಮನಾಗುತ್ತದೆ ಎಂಬುದನ್ನು ಬಿಜೆಪಿ ವಿವರಿಸಬೇಕು” ಎಂದು ರಮೇಶ್ ಹೇಳಿದ್ದಾರೆ.

 

“ಇನ್ನೊಂದೆಡೆ, ನೆಹರೂ ಅವರು 1952ರಲ್ಲಿ 364 ಸ್ಥಾನಗಳನ್ನು ಪಡೆದಿದ್ದರು. 1957ರಲ್ಲಿ 371 ಸ್ಥಾನಗಳನ್ನು ಮತ್ತು 1962ರಲ್ಲಿ 361 ಸ್ಥಾನಗಳನ್ನು ಗೆದ್ದಿದ್ದರು. ಆ ಮೂಲಕ, ಪ್ರತಿ ಬಾರಿ 2/3ರಷ್ಟು ಬಹುಮತ ಗೆದ್ದಿದ್ದರು. ಆದರೂ, ಅವರು ಸಂಪೂರ್ಣ ಪ್ರಜಾಪ್ರಭುತ್ವವಾದಿಯಾಗಿದ್ದರು. ತಮ್ಮ ನಿರಂತರ ಭಾಗವಹಿಸುವಿಕೆಯೊಂದಿಗೆ ಸಂಸತ್ತನ್ನು ಬಹಳ ಎಚ್ಚರಿಕೆಯಿಂದ ಮುನ್ನಡೆಸಿದರು” ಎಂದು ಎಂದಿದ್ದಾರೆ.

ನೆಹರೂ ನಂತರ ಸತತವಾಗಿ ಮೂರು ಬಾರಿ ಪ್ರಮಾಣ ವಚನ ಸ್ವೀಕರಿಸಿದ ಏಕೈಕ ವ್ಯಕ್ತಿ ಮೋದಿ ಅಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರು 1996, 1998 ಮತ್ತು 1999ರಲ್ಲಿ ಮೂರು ಬಾರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅದಕ್ಕೂ ಮುನ್ನ, ಇಂದಿರಾ ಗಾಂಧಿ ಅವರು – 1966, 1967, 1971 ಮತ್ತು 1980ರಲ್ಲಿ – ನಾಲ್ಕು ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ” ಎಂದು ರಮೇಶ್ ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...