ಹಸಿ ಸುಳ್ಳು ಹೇಳುತ್ತಿರುವ ನಿಮ್ಮಲ್ಲಿ ನೈತಿಕತೆ ಸತ್ತಿದೆ: ಸಿಎಂ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

Date:

ಸುಳ್ಳು ಹೇಳುವುದು ನಿಮಗೆ ಅಭ್ಯಾಸವೋ, ಆಚಾರವೋ, ಚಾಳಿಯೋ ಗೊತ್ತಿಲ್ಲ. ಹಸಿ ಹಸಿ ಸುಳ್ಳು ಹೇಳುತ್ತಿರುವ ನಿಮ್ಮಲ್ಲಿ ನೈತಿಕತೆ ಸತ್ತಿದೆ. ಆರೋಪಿ ಸ್ಥಾನದಲ್ಲಿರುವ ನೀವು ನನ್ನ ಬಗ್ಗೆ, ನನ್ನ ತಂದೆಯವರ ಬಗ್ಗೆ ಆಡುತ್ತಿರುವ ಸುಳ್ಳುಗಳು ನಿಮ್ಮ ಯೋಗ್ಯತೆಗೆ ತಕ್ಕುದಲ್ಲ ಸಿದ್ದರಾಮಯ್ಯನವರೇ. ನಮ್ಮ ಬಗ್ಗೆ ಮಾತನಾಡುವ ಯೋಗ್ಯತೆಯೂ ನಿಮಗಿದೆ ಎಂದು ನನಗೆ ಅನಿಸುವುದಿಲ್ಲ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಮುಡಾದವರು ನನಗೆ ನಿವೇಶನ ಹಂಚಿದ್ದಾರೆ. ಸ್ವಾಧೀನ ಪತ್ರವನ್ನೂ ನೀಡಿದ್ದಾರೆ. ಆ ಪತ್ರವನ್ನು ನಾನು ಮಾಧ್ಯಮಗಳ ಮುಂದೆಯೂ ತೋರಿಸಿದ್ದೇನೆ. ಹಂಚಿದ ನಿವೇಶನದ ಜಾಗವನ್ನು ನನ್ನ ಸುಪರ್ದಿಗೆ ಕೊಡಬೇಕಲ್ಲವೇ? ಕೊಟ್ಟಿಲ್ಲ. ಹಾಗಾದರೆ, ಇದರಲ್ಲಿ ಸಿದ್ದರಾಮಯ್ಯ ಮಾಡಿದ ಸಂಶೋಧನೆ ಏನಿದೆ” ಎಂದು ಪ್ರಶ್ನಿಸಿದ್ದಾರೆ.

“ಸುಳ್ಳು ಸಂಶೋಧಕ ಸಿದ್ದರಾಮಯ್ಯನವರೇ, ನಿಮ್ಮ ಮುಖಕ್ಕೆ ಮೆತ್ತಿಕೊಂಡಿರುವ ಕೊಳಕನ್ನು ನನ್ನ ಮೇಲೆ, ಇನ್ನಿತರರ ಮೇಲೆ ಸಿಡಿಸಲು ಹೊರಟು ಲಜ್ಜೆಗೇಡಿತನದ ಪರಮಾವಧಿ ಮೆರೆದಿದ್ದೀರಿ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಡಾ ಭೂಮಿಯನ್ನು ಮುಖ್ಯಮಂತ್ರಿ ಕುಟುಂಬ ಮುಕ್ಕಿ ತಿಂದಿದೆ ಎಂದು ಇಡೀ ದೇಶ ಮಾತನಾಡುತ್ತಿದೆ. ದಾಖಲೆಗಳು ಹಾದಿಬೀದಿಯಲ್ಲಿ ಹೊರಳಾಡುತ್ತಿವೆ! ನಿಮ್ಮ ಸಮಾಜವಾದಿ ಮುಖವಾಡ, ಅಹಿಂದಾ ಅಲಂಕಾರ, ಸತ್ಯವಂತನ ಸಿಂಗಾರ, ಇದೆಲ್ಲವೂ ಕಳಚಿಬಿದ್ದಿದೆ. ಅಸಹ್ಯವಾಗುವಷ್ಟು ಅನಾಚಾರ ಮಾಡಿ ಅಹಿಂದ ರಕ್ಷಣೆ ಪಡೆಯಲು ಯತ್ನಿಸುತ್ತಿರುವ ನಿಮ್ಮ ಅಸಹಾಯಕತೆ ನನಗೆ ಅರ್ಥವಾಗುತ್ತದೆ. ಪಾಪ, ನಿಮ್ಮ ಪಕ್ಷದವರೇ ನಿಮಗೆ ‘ಶರಪಂಜರ’ ಸೃಷ್ಟಿಸುತ್ತಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

“ಕುಮಾರಸ್ವಾಮಿ ರಾಜ್ಯಕ್ಕೆ ಕೈಗಾರಿಕೆ ತರಲಿ, ರಾಜ್ಯಕ್ಕೆ ಒಳ್ಳೆಯದು ಮಾಡಲಿ ಎನ್ನುತ್ತೀರಿ. ಅದು ನನಗೆ ಗೊತ್ತಿದೆ. ನಾನು ಕೇಂದ್ರ ಸಚಿವನಾಗಿ ಇನ್ನೂ ಎರಡು ತಿಂಗಳಾಗಿಲ್ಲ. ರಾಜ್ಯದ ಕೆಲಸ ಮಾಡೋಣ ಎಂದರೆ ನಿಮ್ಮ ಅಸಹಕಾರ, ಅಸೂಯೆ ಅಡ್ಡಿ. ಒಂದು ನಾಲಿಗೆ ಮೇಲೆ ಸಹಕಾರ, ಅಸಹಕಾರ. ಇದು ಹೇಗೆ ಸಾಧ್ಯ ಸಿದ್ದರಾಮಯ್ಯನವರೇ?” ಎಂದಿದ್ದಾರೆ.

“ಎರಡು ಮುಖ, ಎರಡು ನಾಲಿಗೆ, ಎರಡು ವ್ಯಕ್ತಿತ್ವ, ಎರಡು ನೀತಿ. ಇದು ನಿಮ್ಮ ಐಡಿಯಾಲಜಿ! ಆ ಸಿದ್ದಾಲಜಿ ನನಗೆ ಗೊತ್ತಿಲ್ಲದಲ್ಲ ಸಿದ್ದರಾಮಯ್ಯನವರೇ. ರಾಜ್ಯಕ್ಕೆ ಒಳ್ಳೆಯದಾಗಲಿ ಎನ್ನುವ ಆಶಯ ಇರಲಿ, ನನ್ನ ಮೇಲೆ ಅಸೂಯೆ ಏಕೆ? ನಿಮ್ಮ ಸಕಲ ಗುಣಗಳ ಸಿದ್ದಾಲಜಿ ನನಗೆ ಚೆನ್ನಾಗಿಯೇ ಗೊತ್ತಿದೆ” ಎಂದು ಲೇವಡಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...