ಭಂಡತನ ಪಕ್ಕಕ್ಕೆ ಸರಿಸಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ಘನತೆ ಉಳಿಸಿಕೊಳ್ಳಿ: ಬಿ ವೈ ವಿಜಯೇಂದ್ರ ಆಗ್ರಹ

Date:

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ’ ಕನಿಷ್ಠ ಈಗಲಾದರೂ ಲೂಟಿಕೋರ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದೆ. ಸರ್ಕಾರ ಈ ಕೂಡಲೇ 50:50ಅನುಪಾತದಲ್ಲಿ ಮುಡಾದಲ್ಲಿ ವಿತರಣೆಯಾಗಿರುವ ಸಾವಿರಾರು ನಿವೇಶನಗಳ ಕ್ರಯವನ್ನು ರದ್ದುಗೊಳಿಸಿ ಅಧಿಸೂಚನೆ ಹೊರಡಿಸಲಿ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಮುಡಾ ಹಿಂದಿನ ಆಯುಕ್ತರ ಅಮಾನತ್ತು ಪತ್ರವನ್ನು ಲಗತ್ತಿಸಿ ಪೋಸ್ಟ್‌ ಮಾಡಿರುವ ಅವರು, “ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ರಕ್ಷಣೆಯ ಪ್ರತೀಕವೆಂಬಂತೆ ಧೂಳು ಹಿಡಿದು ಕುಳಿತಿದ್ದ ತಾಂತ್ರಿಕ ಸಮಿತಿಯ ತನಿಖಾ ವರದಿಯ ಪ್ರತಿಯನ್ನು ನಾವು ಬಿಡುಗಡೆ ಮಾಡಿದ ನಂತರ ಗತ್ಯಂತರವಿಲ್ಲದೆ ಕೈಗೆತ್ತಿಕೊಂಡು ಇದೀಗ ಮುಡಾ ಬ್ರಹ್ಮಾಂಡ ಭ್ರಷ್ಟಾಚಾರದ ರೂವಾರಿಗಳಲ್ಲೊಬ್ಬರಾದ ಹಿಂದಿನ ಆಯುಕ್ತ ಜಿ ಟಿ ದಿನೇಶ್ ಕುಮಾರ್‌ರನ್ನು ಅಮಾನತ್ತು ಗೊಳಿಸಲಾಗಿದೆ” ಎಂದಿದ್ದಾರೆ.

“ಶೇಕಡ 50:50ರ ಅನುಪಾತದಲ್ಲಿ ಪೂರ್ವಾನ್ವಯವಾಗಿ ನಿವೇಶನ ಪಡೆಯುವುದು ನಿಯಮಬಾಹಿರ ಎಂದು ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಿಸಿದ್ದ ತಾಂತ್ರಿಕ ಸಮಿತಿ ಕಳೆದ 3-11-2023 ರಂದೇ ಕಾಂಗ್ರೆಸ್ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿತ್ತು. ಈ ವರದಿಯಲ್ಲಿ ಮುಡಾದಲ್ಲಿ ನಡೆಯುತ್ತಿದ್ದ ಬ್ರಹ್ಮಾಂಡ ಭ್ರಷ್ಟಾಚಾರಗಳ ಬಗ್ಗೆ ಪೂರ್ಣ ಮಾಹಿತಿಯನ್ನು ನೀಡಲಾಗಿತ್ತು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಮಾನತ್ತಿಗೆ ನೀಡಿರುವ ಕಾರಣಗಳಲ್ಲಿ ಶೇಕಡ 50:50ರ ಅನುಪಾತದಲ್ಲಿ ನಿಯಮ ಬಾಹಿರವಾಗಿ ನಿವೇಶನಗಳನ್ನು ವಿತರಿಸಿರುವ ಅಂಶವನ್ನು ಪ್ರಮುಖವಾಗಿ ಉಲ್ಲೇಖಿಸಲಾಗಿದೆ, ಇದು ಏನು ಹೇಳುತ್ತದೆ ಎಂದರೆ ಶೇ 50:50 ರ ಅನುಪಾತದಲ್ಲಿ ಪೂರ್ವನ್ವಯವಾಗಿ ಮಾನ್ಯ ಸಿದ್ದರಾಮಯ್ಯನವರ ಪತ್ನಿಯವರಿಗೆ ಮಂಜೂರಾಗಿರುವ 14 ನಿವೇಶನಗಳು ಸಂಪೂರ್ಣ ಅಕ್ರಮ ಹಾಗೂ ನಿಯಮಬಾಹಿರ ಎಂಬುದು ಸ್ಪಷ್ಟವಾಗಿದೆ. ವಿಚಿತ್ರವೆಂದರೆ ಮುಖ್ಯಮಂತ್ರಿಗಳ ಕುಟುಂಬಕ್ಕೆ 14 ನಿವೇಶನಗಳನ್ನು ಬಳುವಳಿ ನೀಡಿದ ಹಿಂದಿನ ಆಯುಕ್ತರೊಬ್ಬರ ವಿರುದ್ಧ ಯಾವುದೇ ಕ್ರಮ ಜರುಗಿಸದೇ ಋಣ ಸಂದಾಯಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.

“ಈ ವಿಷಯಕ್ಕೆ ಸಂಬಂಧಿಸಿದಂತೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನ್ಯಾಯಾಲಯದ ಆದೇಶವನ್ನು ಕಾಯುವ ಅಗತ್ಯವಾದರೂ ಏನಿದೆ? ಸರ್ಕಾರವೇ ನಿಮ್ಮ ಧರ್ಮಪತ್ನಿ ಅವರು ಪಡೆದಿರುವ ನಿವೇಶನಗಳು ಅಕ್ರಮ ಹಾಗೂ ನಿಯಮ ಬಾಹಿರ ಎಂದು ಹೇಳಿರುವಾಗ ಈಗಲಾದರೂ ತಮ್ಮ ಭಂಡತನವನ್ನು ಪಕ್ಕಕ್ಕೆ ಸರಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯದ ಮುಖ್ಯಮಂತ್ರಿ ಸ್ಥಾನದ ಘನತೆಗೆ ಬಂದಿರುವ ಚ್ಯುತಿಯನ್ನು ಹೋಗಲಾಡಿಸಿ ಗೌರವ ಉಳಿಸಿಕೊಳ್ಳಿ” ಎಂದು ಸಲಹೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...