ಮೈಸೂರು | ಎಕ್ಸ್‌ಪ್ರೆಸ್‌-ವೇ ಟೋಲ್‌ ದರ ಏರಿಕೆ ಸಮರ್ಥಿಸಿಕೊಂಡ ಸಂಸದ ಪ್ರತಾಪ್‌ ಸಿಂಹ

Date:

ಇಡೀ ದೇಶದಲ್ಲಿ ಆರ್ಥಿಕ ವರ್ಷ ಪ್ರಾರಂಭವಾದಾಗ ಟೋಲ್ ದರ ಹೆಚ್ಚಳ ಮಾಡುವುದು ಸಹಜ ಪ್ರಕ್ರಿಯೆ. ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌-ವೇಗೆ ಏಪ್ರಿಲ್‌ನಲ್ಲಿ ಟೋಲ್ ಹೆಚ್ಚಳ ಆಗಬೇಕಿತ್ತು. ಆಗ ಆಗಿರಲಿಲ್ಲ ಈಗ ಶೇ.22ರಷ್ಟು ಏರಿಕೆ ಆಗಿದೆ ಎಂದು ಸಂಸದ ಪ್ರತಾಪ್‌ ಸಿಂಹ ಟೋಲ್‌ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತಾಡಿದ ಅವರು, “ಟೋಲ್‌ಗಳಲ್ಲಿ ಫಾಸ್ಟ್ ಟ್ಯಾಗ್ ವರ್ಕ್ ಆಗುತ್ತಿದ್ದು, ಯಾವ ಸಮಸ್ಯೆ ಇಲ್ಲ. ಸಿಸ್ಟಮ್ ಸಮಸ್ಯೆ ಟೋಲ್ ಸಂಗ್ರಹದ ಆರಂಭದಲ್ಲಿತ್ತು. ಈಗ ಆ ಸಮಸ್ಯೆ ಇಲ್ಲ. ಫಾಸ್ಟ್ ಟ್ಯಾಗ್ ಇರದಿದ್ದರೆ ಡಬಲ್ ಚಾರ್ಜ್ ಕಟ್ಟುವುದು ಕಡ್ಡಾಯ” ಎಂದರು.

ವಿದ್ಯುತ್‌ ಬಿಲ್‌ ಏರಿಕೆ; ಕಾಂಗ್ರೆಸ್‌ಗೆ ತಿರುಗೇಟು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯುತ್ ಬಿಲ್ ಏರಿಕೆ ಮಾಡಿದ್ದು ಬಿಜೆಪಿ ಸರ್ಕಾರ ಎಂಬ ಕಾಂಗ್ರೆಸ್ ಹೇಳಿಕೆಗೆ ತಿರುಗೇಟು ನೀಡಿದ ಸಂಸದ, ರಾಜ್ಯದ ಜನರ ದಾರಿ ತಪ್ಪಿಸಬೇಡಿ. ಕೆಇಆರ್​ಸಿ ದರ ಏರಿಕೆಗೆ ಶಿಫಾರಸ್ಸು ಮಾಡಿದೆ. ಅದನ್ನು ತಡೆಯುವ ಅಥವಾ ತಿರಸ್ಕರಿಸುವ ಹಕ್ಕು ರಾಜ್ಯ ಸರ್ಕಾರಕ್ಕೆ ಇದೆ. ಕಳೆದ ಸರ್ಕಾರ ಮಾಡಿದ್ದ ಗುತ್ತಿಗೆದಾರ ಹಣ ಬಿಡುಗಡೆ ಆದೇಶಕ್ಕೆ ತಡೆ ಹಾಕುತ್ತೀರಿ. ಆದರೆ ವಿದ್ಯುತ್ ಬಿಲ್ ಆದೇಶಕ್ಕೆ ಯಾಕೆ ತಡೆ ಹಾಕಲ್ಲ ಎಂದು ಪ್ರಶ್ನಿಸಿದ್ದಾರೆ.

ಎಲ್ಲಿಂದ ನಿಮಗೆ ಕಮಾಯಿ ಆಗುತ್ತೆ? ಎಲ್ಲಿಂದ ನಿಮಗೆ ವ್ಯಾಪಾರ ಆಗುತ್ತೆ? ಆ ವಿಚಾರದ ಬಗ್ಗೆ ಮಾತ್ರ‌ ನಿಮ್ಮ ಆಸಕ್ತಿನಾ? ಕಾಂಗ್ರೆಸ್​​ನವರು ಲೂಟಿ ಮಾಡಲು ಬಂದಿದ್ದಾರೆ. ತಮ್ಮ ಜನವಿರೋಧಿ ಮುಖ ಮರೆ ಮಾಚಲು ಬಿಜೆಪಿ ಮೇಲೆ ಆರೋಪ ಮಾಡಬೇಡಿ. ಈ ಸರ್ಕಾರ ಒಂದಷ್ಟು ಜನರ ಸುಲಿಗೆ, ಲೂಟಿ ಮಾಡಲು ಬಂದಿದೆ. ಹಾಗಾದರೆ, ಹಿಂದಿನ ಸರ್ಕಾರ ಗೋ ಹತ್ಯೆ ನಿಷೇಧ, ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಿತ್ತು ಅದನ್ನು ಮುಂದುವರಿಸುವ ಮಾತಾಡಿ ಎಂದು ಪ್ರತಾಪ್ ಸಿಂಹ ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ನಾನು ವಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಯಲ್ಲ; ಮಾಜಿ ಸಿಎಂ ಬೊಮ್ಮಾಯಿ ಸ್ಪಷ್ಟನೆ

ಹಿರಿಯ ನಾಯಕರು ಅಡ್ಜಸ್ಟ್ ಮೆಂಟ್​ನಲ್ಲಿ ಇದ್ದೀರಾ

ಅರ್ಕಾವತಿ ಹಗರಣ, ಡಿ ನೋಟಿಫಿಕೇಶನ್, ಕೆಂಪಣ್ಣ ಆಯೋಗದ ವರದಿ ತನಿಖೆಯನ್ನು ನಮ್ಮ ಸರ್ಕಾರ ತನಿಖೆ ಮಾಡಲಿಲ್ಲ. ನೀವು ವಿರೋಧ ಪಕ್ಷದಲ್ಲಿದ್ದಾಗ ನಮ್ಮವರು ನಿಮ್ಮನ್ನ ಈ ವಿಚಾರ ಮುಂದಿಟ್ಟುಕೊಂಡು ಹೆದರಿಸುವುದು, ನೀವು ಅಧಿಕಾರಕ್ಕೆ ಬಂದಾಕ್ಷಣ ನಮ್ಮವರನ್ನು ಹೆದರಿಸ್ತೀರಾ? ಅಂದ್ರೆ ನೀವೆಲ್ಲಾ ಹಿರಿಯ ನಾಯಕರು ಅಡ್ಜಸ್ಟ್ ಮೆಂಟ್​ನಲ್ಲಿ ಇದ್ದೀರಾ ಎಂದು ಗಂಭೀರ ಆರೋಪ ಮಾಡಿದರು.

40% ಸರ್ಕಾರ ಎಂದು ಹೇಳಿದನ್ನು ಸಾಬೀತು ಮಾಡಿ. ಬಿಟ್ ಕಾಯಿನ್ ನ ಸಾವಿರಾರು ಕೋಟಿ ರೂ. ಹಗರಣ, ಪಿಎಸ್​ಐ ಹಗರಣದಲ್ಲಿ ಯಾರ್‍ಯಾರು ಭಾಗಿಯಾಗಿದ್ದಾರೆಂದು ಸಾಬೀತು ಮಾಡಿ. ಬಿಜೆಪಿಯವರು ಭಾಗಿಯಾಗಿದ್ದರೂ ಹಿಡಿದು ತಂದು ಶಿಕ್ಷೆ ಕೊಡಿ. ನಾನು ಅವತ್ತೇ ಹೇಳಿದ್ದೇನೆ ತನಿಖೆ ಮಾಡಿ ಶಿಕ್ಷೆ ಕೊಡಿಸಿದ್ರೆ, ನಿಮ್ಮ ಕಾಲಿಗೆ ಬಿದ್ದು ಪಾದ ಪೂಜೆ ಮಾಡುತ್ತೇನೆ. ಈಗಲೂ ಅದೇ ಮಾತನ್ನು ಹೇಳುತ್ತಿದ್ದೇನೆ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಸವಾಲು ಹಾಕಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...